Homeಮುಖಪುಟಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ಅಭಿಯಾನ...

ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

- Advertisement -
- Advertisement -

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರನ್ನು “ಅವಮಾನಿಸಿದ” ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ, ಕಾಂಗ್ರೆಸ್ ಪಕ್ಷವೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಿರುವುದಾಗಿ ಶನಿವಾರ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕೆಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ಅಭಿಯಾನದಡಿಯಲ್ಲಿ ಪಕ್ಷದ ಮುಖಂಡರು ಪ್ರತಿ ಜಿಲ್ಲೆಯಲ್ಲೂ ‘ಸಭೆ’ಗಳನ್ನು ಆಯೋಜಿಸಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ದಶಕಗಳಿಂದ ಹೇಗೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅವಮಾನಿಸುತ್ತಿವೆ ಎಂಬುದನ್ನು ಜನರಿಗೆ ತಿಳಿಸಲಿದ್ದಾರೆ ಎಂದು ಪವನ್ ಖೇರಾ ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಭಿಯಾನವು ಜನವರಿ 26ರ ವರೆಗೆ ನಡೆಯಲಿದ್ದು, ಅಂದು ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ಸಂವಿಧಾನ ಮತ್ತು ಗಣರಾಜ್ಯದ 75 ವರ್ಷಗಳ ಸ್ಮರಣಾರ್ಥ ಬೃಹತ್ ರ್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಪವನ್ ಖೇರಾ ಹೇಳಿದ್ದಾರೆ.

“ಅಂಬೇಡ್ಕರ್ ಅವರ ಪರಂಪರೆ ಮತ್ತು ಮೌಲ್ಯಗಳನ್ನು ಕಾಪಾಡಲು, ‘ಸಂವಿಧಾನ್ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಜನವರಿ 26, 2025 ರಿಂದ ಜನವರಿ 26, 2026 ರವರೆಗೆ ನಡೆಯಲಿದೆ. ಏಕತೆ ಮತ್ತು ಸಾಮಾಜಿಕ ನ್ಯಾಯದ ಪ್ರಬಲ ಸಂದೇಶದೊಂದಿಗೆ ಭಾರತದಾದ್ಯಂತ ಹಳ್ಳಿಗಳು ಮತ್ತು ಪಟ್ಟಣಗಳನ್ನು ಈ ಪಾದಯಾತ್ರೆ ಸಂಚರಿಸಲಿದೆ” ಎಂದು ಪವನ್ ಖೇರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರಂತಹ ರಾಷ್ಟ್ರೀಯ ನಾಯಕರನ್ನು ರಾಕ್ಷಸೀಕರಣ ಮಾಡುವುದನ್ನು ಸಾಮಾನ್ಯೀಕರಿಸಲು ಬಿಜೆಪಿ ನಾಯಕತ್ವ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 17 ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ್ದ ಅಮಿತ್ ಶಾ, ಕಾಂಗ್ರೆಸ್ ಪದೇ ಪದೇ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈ ವೇಳೆ ಅವರು, “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ… ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು” ಎಂದು ಹೇಳಿದ್ದರು.

ಈ ವಿಚಾರದಲ್ಲಿ ಗೃಹ ಸಚಿವರು ಕ್ಷಮೆಯಾಚಿಸುತ್ತಾರೆ ಮತ್ತು ಪ್ರಧಾನಿ ಮಧ್ಯಸ್ಥಿಕೆ ವಹಿಸುತ್ತಾರೆ ಎಂದು ನಾವು ಆಶಿಸಿದ್ದೆವು. ಆದರೆ ಪ್ರಧಾನಿ ಮೋದಿ ಅವರು ಗೃಹ ಸಚಿವರನ್ನು ಬೆಂಬಲಿಸಿ ಅಂಬೇಡ್ಕರ್ ಅವರನ್ನು ಅವಮಾನಿಸುವಲ್ಲಿ ಪಾಲುದಾರರಾದರು ಎಂದು ಪವನ್ ಖೇರಾ ಹೇಳಿದ್ದಾರೆ.

ಬೆಳಗಾವಿಯ ಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಅಲ್ಲಿ ಪಕ್ಷವು ದೇಶಾದ್ಯಂತ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. “ಈ ಅಭಿಯಾನದ ಅಡಿಯಲ್ಲಿ, ನಾವು ಪ್ರತಿ ಜಿಲ್ಲೆಯಲ್ಲೂ ‘ಜನಸಂಪರ್ಕ ಸಭೆ’ಗಳನ್ನು ಆಯೋಜಿಸುತ್ತೇವೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಶಕಗಳಿಂದ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಹೇಗೆ ಅವಮಾನಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಪವನ್ ಖೇರಾ ಹೇಳಿದ್ದಾರೆ.

ನವೆಂಬರ್ 30, 1949 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಮುಖವಾಣಿ ‘ಆರ್ಗನೈಸರ್’ ನಲ್ಲಿ ಸಂವಿಧಾನವನ್ನು “ಭಾರತೀಯತೆ ಇಲ್ಲದ್ದು” ಎಂದು ವಿವರಿಸಿತ್ತು ಎಂಬುದನ್ನು ಪವನ್ ಖೇರಾ ನೆನಪಿಸಿಕೊಂಡಿದ್ದಾರೆ. ಅಂಬೇಡ್ಕರ್ ಅವರು ಮಹಿಳೆಯರಿಗೆ ಸಮಾನ ಹಕ್ಕುಗಳ ಬಗ್ಗೆ ಮಾತನಾಡುವ ವೇಳೆ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದ ಆರೆಸ್ಸೆಸ್, ದೆಹಲಿಯ ರಾಮಲೀಲಾ ಮೈದಾನದಲ್ಲಿ ಅವರ ಪ್ರತಿಕೃತಿ ದಹಿಸಿತ್ತು. ಅಂಬೇಡ್ಕರ್ ಅವರಷ್ಟೇ ಅಲ್ಲ, ಗಾಂಧೀಜಿಯವರ ಪರಂಪರೆಯ ಮೇಲೂ ಇಂದು ದಾಳಿ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂಓದಿ: ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...