Homeಮುಖಪುಟಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ಅಭಿಯಾನ...

ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

- Advertisement -
- Advertisement -

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರನ್ನು “ಅವಮಾನಿಸಿದ” ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ, ಕಾಂಗ್ರೆಸ್ ಪಕ್ಷವೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಿರುವುದಾಗಿ ಶನಿವಾರ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕೆಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ಅಭಿಯಾನದಡಿಯಲ್ಲಿ ಪಕ್ಷದ ಮುಖಂಡರು ಪ್ರತಿ ಜಿಲ್ಲೆಯಲ್ಲೂ ‘ಸಭೆ’ಗಳನ್ನು ಆಯೋಜಿಸಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ದಶಕಗಳಿಂದ ಹೇಗೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅವಮಾನಿಸುತ್ತಿವೆ ಎಂಬುದನ್ನು ಜನರಿಗೆ ತಿಳಿಸಲಿದ್ದಾರೆ ಎಂದು ಪವನ್ ಖೇರಾ ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಭಿಯಾನವು ಜನವರಿ 26ರ ವರೆಗೆ ನಡೆಯಲಿದ್ದು, ಅಂದು ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ಸಂವಿಧಾನ ಮತ್ತು ಗಣರಾಜ್ಯದ 75 ವರ್ಷಗಳ ಸ್ಮರಣಾರ್ಥ ಬೃಹತ್ ರ್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಪವನ್ ಖೇರಾ ಹೇಳಿದ್ದಾರೆ.

“ಅಂಬೇಡ್ಕರ್ ಅವರ ಪರಂಪರೆ ಮತ್ತು ಮೌಲ್ಯಗಳನ್ನು ಕಾಪಾಡಲು, ‘ಸಂವಿಧಾನ್ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಜನವರಿ 26, 2025 ರಿಂದ ಜನವರಿ 26, 2026 ರವರೆಗೆ ನಡೆಯಲಿದೆ. ಏಕತೆ ಮತ್ತು ಸಾಮಾಜಿಕ ನ್ಯಾಯದ ಪ್ರಬಲ ಸಂದೇಶದೊಂದಿಗೆ ಭಾರತದಾದ್ಯಂತ ಹಳ್ಳಿಗಳು ಮತ್ತು ಪಟ್ಟಣಗಳನ್ನು ಈ ಪಾದಯಾತ್ರೆ ಸಂಚರಿಸಲಿದೆ” ಎಂದು ಪವನ್ ಖೇರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರಂತಹ ರಾಷ್ಟ್ರೀಯ ನಾಯಕರನ್ನು ರಾಕ್ಷಸೀಕರಣ ಮಾಡುವುದನ್ನು ಸಾಮಾನ್ಯೀಕರಿಸಲು ಬಿಜೆಪಿ ನಾಯಕತ್ವ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 17 ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ್ದ ಅಮಿತ್ ಶಾ, ಕಾಂಗ್ರೆಸ್ ಪದೇ ಪದೇ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈ ವೇಳೆ ಅವರು, “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ… ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು” ಎಂದು ಹೇಳಿದ್ದರು.

ಈ ವಿಚಾರದಲ್ಲಿ ಗೃಹ ಸಚಿವರು ಕ್ಷಮೆಯಾಚಿಸುತ್ತಾರೆ ಮತ್ತು ಪ್ರಧಾನಿ ಮಧ್ಯಸ್ಥಿಕೆ ವಹಿಸುತ್ತಾರೆ ಎಂದು ನಾವು ಆಶಿಸಿದ್ದೆವು. ಆದರೆ ಪ್ರಧಾನಿ ಮೋದಿ ಅವರು ಗೃಹ ಸಚಿವರನ್ನು ಬೆಂಬಲಿಸಿ ಅಂಬೇಡ್ಕರ್ ಅವರನ್ನು ಅವಮಾನಿಸುವಲ್ಲಿ ಪಾಲುದಾರರಾದರು ಎಂದು ಪವನ್ ಖೇರಾ ಹೇಳಿದ್ದಾರೆ.

ಬೆಳಗಾವಿಯ ಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಅಲ್ಲಿ ಪಕ್ಷವು ದೇಶಾದ್ಯಂತ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. “ಈ ಅಭಿಯಾನದ ಅಡಿಯಲ್ಲಿ, ನಾವು ಪ್ರತಿ ಜಿಲ್ಲೆಯಲ್ಲೂ ‘ಜನಸಂಪರ್ಕ ಸಭೆ’ಗಳನ್ನು ಆಯೋಜಿಸುತ್ತೇವೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಶಕಗಳಿಂದ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಹೇಗೆ ಅವಮಾನಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಪವನ್ ಖೇರಾ ಹೇಳಿದ್ದಾರೆ.

ನವೆಂಬರ್ 30, 1949 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಮುಖವಾಣಿ ‘ಆರ್ಗನೈಸರ್’ ನಲ್ಲಿ ಸಂವಿಧಾನವನ್ನು “ಭಾರತೀಯತೆ ಇಲ್ಲದ್ದು” ಎಂದು ವಿವರಿಸಿತ್ತು ಎಂಬುದನ್ನು ಪವನ್ ಖೇರಾ ನೆನಪಿಸಿಕೊಂಡಿದ್ದಾರೆ. ಅಂಬೇಡ್ಕರ್ ಅವರು ಮಹಿಳೆಯರಿಗೆ ಸಮಾನ ಹಕ್ಕುಗಳ ಬಗ್ಗೆ ಮಾತನಾಡುವ ವೇಳೆ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದ ಆರೆಸ್ಸೆಸ್, ದೆಹಲಿಯ ರಾಮಲೀಲಾ ಮೈದಾನದಲ್ಲಿ ಅವರ ಪ್ರತಿಕೃತಿ ದಹಿಸಿತ್ತು. ಅಂಬೇಡ್ಕರ್ ಅವರಷ್ಟೇ ಅಲ್ಲ, ಗಾಂಧೀಜಿಯವರ ಪರಂಪರೆಯ ಮೇಲೂ ಇಂದು ದಾಳಿ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂಓದಿ: ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...