Homeಮುಖಪುಟಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ಅಭಿಯಾನ...

ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

- Advertisement -
- Advertisement -

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರನ್ನು “ಅವಮಾನಿಸಿದ” ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ, ಕಾಂಗ್ರೆಸ್ ಪಕ್ಷವೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಿರುವುದಾಗಿ ಶನಿವಾರ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕೆಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ಅಭಿಯಾನದಡಿಯಲ್ಲಿ ಪಕ್ಷದ ಮುಖಂಡರು ಪ್ರತಿ ಜಿಲ್ಲೆಯಲ್ಲೂ ‘ಸಭೆ’ಗಳನ್ನು ಆಯೋಜಿಸಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ದಶಕಗಳಿಂದ ಹೇಗೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅವಮಾನಿಸುತ್ತಿವೆ ಎಂಬುದನ್ನು ಜನರಿಗೆ ತಿಳಿಸಲಿದ್ದಾರೆ ಎಂದು ಪವನ್ ಖೇರಾ ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಭಿಯಾನವು ಜನವರಿ 26ರ ವರೆಗೆ ನಡೆಯಲಿದ್ದು, ಅಂದು ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ಸಂವಿಧಾನ ಮತ್ತು ಗಣರಾಜ್ಯದ 75 ವರ್ಷಗಳ ಸ್ಮರಣಾರ್ಥ ಬೃಹತ್ ರ್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಪವನ್ ಖೇರಾ ಹೇಳಿದ್ದಾರೆ.

“ಅಂಬೇಡ್ಕರ್ ಅವರ ಪರಂಪರೆ ಮತ್ತು ಮೌಲ್ಯಗಳನ್ನು ಕಾಪಾಡಲು, ‘ಸಂವಿಧಾನ್ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಜನವರಿ 26, 2025 ರಿಂದ ಜನವರಿ 26, 2026 ರವರೆಗೆ ನಡೆಯಲಿದೆ. ಏಕತೆ ಮತ್ತು ಸಾಮಾಜಿಕ ನ್ಯಾಯದ ಪ್ರಬಲ ಸಂದೇಶದೊಂದಿಗೆ ಭಾರತದಾದ್ಯಂತ ಹಳ್ಳಿಗಳು ಮತ್ತು ಪಟ್ಟಣಗಳನ್ನು ಈ ಪಾದಯಾತ್ರೆ ಸಂಚರಿಸಲಿದೆ” ಎಂದು ಪವನ್ ಖೇರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರಂತಹ ರಾಷ್ಟ್ರೀಯ ನಾಯಕರನ್ನು ರಾಕ್ಷಸೀಕರಣ ಮಾಡುವುದನ್ನು ಸಾಮಾನ್ಯೀಕರಿಸಲು ಬಿಜೆಪಿ ನಾಯಕತ್ವ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 17 ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ್ದ ಅಮಿತ್ ಶಾ, ಕಾಂಗ್ರೆಸ್ ಪದೇ ಪದೇ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈ ವೇಳೆ ಅವರು, “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ… ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು” ಎಂದು ಹೇಳಿದ್ದರು.

ಈ ವಿಚಾರದಲ್ಲಿ ಗೃಹ ಸಚಿವರು ಕ್ಷಮೆಯಾಚಿಸುತ್ತಾರೆ ಮತ್ತು ಪ್ರಧಾನಿ ಮಧ್ಯಸ್ಥಿಕೆ ವಹಿಸುತ್ತಾರೆ ಎಂದು ನಾವು ಆಶಿಸಿದ್ದೆವು. ಆದರೆ ಪ್ರಧಾನಿ ಮೋದಿ ಅವರು ಗೃಹ ಸಚಿವರನ್ನು ಬೆಂಬಲಿಸಿ ಅಂಬೇಡ್ಕರ್ ಅವರನ್ನು ಅವಮಾನಿಸುವಲ್ಲಿ ಪಾಲುದಾರರಾದರು ಎಂದು ಪವನ್ ಖೇರಾ ಹೇಳಿದ್ದಾರೆ.

ಬೆಳಗಾವಿಯ ಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಅಲ್ಲಿ ಪಕ್ಷವು ದೇಶಾದ್ಯಂತ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. “ಈ ಅಭಿಯಾನದ ಅಡಿಯಲ್ಲಿ, ನಾವು ಪ್ರತಿ ಜಿಲ್ಲೆಯಲ್ಲೂ ‘ಜನಸಂಪರ್ಕ ಸಭೆ’ಗಳನ್ನು ಆಯೋಜಿಸುತ್ತೇವೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಶಕಗಳಿಂದ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಹೇಗೆ ಅವಮಾನಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಪವನ್ ಖೇರಾ ಹೇಳಿದ್ದಾರೆ.

ನವೆಂಬರ್ 30, 1949 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಮುಖವಾಣಿ ‘ಆರ್ಗನೈಸರ್’ ನಲ್ಲಿ ಸಂವಿಧಾನವನ್ನು “ಭಾರತೀಯತೆ ಇಲ್ಲದ್ದು” ಎಂದು ವಿವರಿಸಿತ್ತು ಎಂಬುದನ್ನು ಪವನ್ ಖೇರಾ ನೆನಪಿಸಿಕೊಂಡಿದ್ದಾರೆ. ಅಂಬೇಡ್ಕರ್ ಅವರು ಮಹಿಳೆಯರಿಗೆ ಸಮಾನ ಹಕ್ಕುಗಳ ಬಗ್ಗೆ ಮಾತನಾಡುವ ವೇಳೆ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದ ಆರೆಸ್ಸೆಸ್, ದೆಹಲಿಯ ರಾಮಲೀಲಾ ಮೈದಾನದಲ್ಲಿ ಅವರ ಪ್ರತಿಕೃತಿ ದಹಿಸಿತ್ತು. ಅಂಬೇಡ್ಕರ್ ಅವರಷ್ಟೇ ಅಲ್ಲ, ಗಾಂಧೀಜಿಯವರ ಪರಂಪರೆಯ ಮೇಲೂ ಇಂದು ದಾಳಿ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂಓದಿ: ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...