Homeಕರ್ನಾಟಕಕೊಪ್ಪಳ: ಬಾಲ್ದೋಟಾ ಕಾರ್ಖಾನೆ ವಿರೋಧಿ ಪ್ರತಿಭಟನೆ; 9 ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ: ಬಾಲ್ದೋಟಾ ಕಾರ್ಖಾನೆ ವಿರೋಧಿ ಪ್ರತಿಭಟನೆ; 9 ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಕೊಪ್ಪಳ: ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಬಾಲ್ದೋಟಾ ಎಂಎಸ್‌ಪಿಎಲ್‌ ಕಂಪನಿಯ ಅತಿಕ್ರಮಣ ಮತ್ತು ಕೆರೆ ನೀರಿನ ಹಕ್ಕಿಗಾಗಿ ನಡೆಯುತ್ತಿದ್ದ ತೀವ್ರ ಪ್ರತಿಭಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಬುಧವಾರ (ಜುಲೈ 23, 2025) ಬಾಲ್ದೋಟಾ ಕಾರ್ಖಾನೆ ಎದುರು ಧರಣಿ ನಡೆಸಿದ್ದ ಒಂಬತ್ತು ಮಂದಿ ಹೋರಾಟಗಾರರ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರತಿಭಟನೆಯು ಸುಮಾರು 4,000 ಕುರಿ ಮತ್ತು ದನಗಳೊಂದಿಗೆ ನಡೆದಿದ್ದು, ಜಿಲ್ಲಾಡಳಿತ ಭವನ ಮತ್ತು ಬಾಲ್ದೋಟಾ ಕಾರ್ಖಾನೆ ಎರಡೂ ಕಡೆ ರೈತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಪ್ರಕರಣದ ಹಿನ್ನೆಲೆ

ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಜ್ವಲಂತ ಸಮಸ್ಯೆಯಾಗಿರುವ ಬಸಾಪುರ ಕೆರೆ ಅತಿಕ್ರಮಣವನ್ನು ಖಂಡಿಸಿ, ಬಲ್ಡೋಟಾ ಎಂಎಸ್‌ಪಿಎಲ್‌ ಕಂಪನಿ ವಿರುದ್ಧ ಬೃಹತ್ “ಜನ-ಜಾನುವಾರು ಪ್ರತಿಭಟನೆ” ಜುಲೈ 24 ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಿತು. ಬಸಾಪುರ ಕೆರೆ ಬಚಾವೋ ಮತ್ತು ಪರಿಸರ ಹಿತರಕ್ಷಣಾ ಸಮಿತಿಗಳು ಜಂಟಿಯಾಗಿ ಕರೆ ನೀಡಿದ ಈ ಪ್ರತಿಭಟನೆಯಲ್ಲಿ ಸುಮಾರು 4,000 ಕುರಿ ಮತ್ತು ದನಗಳೊಂದಿಗೆ ಸಹಸ್ರಾರು ರೈತರು ಕೊಪ್ಪಳ ಜಿಲ್ಲಾಡಳಿತದ ಕಚೇರಿ ಮುಂದೆ ಜಮಾಯಿಸಿ, ಉಚ್ಚ ನ್ಯಾಯಾಲಯದ ಆದೇಶದಂತೆ ಬಸಾಪುರ ಕೆರೆಯನ್ನು ತಕ್ಷಣವೇ ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಆಗ್ರಹಿಸಿದ್ದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ, “ಸಿದ್ದರಾಮಯ್ಯನವರೇ ಇಲ್ಲಿ ನೋಡಿ, ಕುರಿಗಳಿಗೆ ಕುಡಿಯಲು ನೀರಿಲ್ಲ, ದನಗಳಿಗೆ ಕುಡಿಯಲು ನೀರಿಲ್ಲ!” ಎಂದು ಆಕ್ರೋಶದಿಂದ ಕೂಗಿದರು. ಕೊಪ್ಪಳ ಜಿಲ್ಲೆಯ ಬೃಹತ್ ಕಾರ್ಪೊರೇಟ್ ಸಂಸ್ಥೆಯಾದ ಬಲ್ಡೋಟಾ ಕಂಪನಿಗೆ ಬಸಾಪುರ ಕೆರೆಯನ್ನು ಬರೆದುಕೊಡಲಾಗಿದೆ ಎಂದು ಆರೋಪಿಸಿದ ರೈತರು, ಇದನ್ನು ವಿರೋಧಿಸಿ ಕಂಪನಿ ಮುಂದೆ ಈ ಜನ-ಜಾನುವಾರು ಪ್ರತಿಭಟನೆ ನಡೆಸಲಾಯಿತು ಎಂದು ತಿಳಿಸಿದರು. ನೂರಾರು ಪ್ರತಿಭಟನಾಕಾರರು, “ಬಸಾಪುರ ಕೆರೆಯನ್ನು ನಾವು ಬಿಡುವುದಿಲ್ಲ, ಬಿಡುವುದಿಲ್ಲ!” ಎಂದು ಜೋರು ಘೋಷಣೆಗಳನ್ನು ಕೂಗಿದರು. ಇಂತಹ ಕಂಪನಿಗಳಿಗೆ ಕಾರ್ಖಾನೆ ಮಾಡಲು ಕೇಳಿದಷ್ಟು ಜಾಗ ಕೊಟ್ಟಿರುವುದರ ಪರಿಣಾಮವೇ ಈ ನೀರಿನ ಅಭಾವ ಮತ್ತು ಜಾನುವಾರುಗಳ ಸಂಕಷ್ಟ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನಾನಿರತ ರೈತರು ನೀಡಿದ ಮಾಹಿತಿಯ ಪ್ರಕಾರ, ಬಲ್ಡೋಟಾ ಕಂಪನಿಯು ತನಗೆ ಮಂಜೂರಾಗಿದ್ದ ಭೂಮಿಯ ಜೊತೆಗೆ, ಬಸಾಪುರ ಗ್ರಾಮದ 44 ಎಕರೆ 35 ಗುಂಟೆ ಸಾರ್ವಜನಿಕರ ಕೆರೆಯನ್ನು ಅಕ್ರಮವಾಗಿ ತನ್ನೊಡಲೊಳಗೆ ಸೇರಿಸಿಕೊಂಡು, ಸುತ್ತಲೂ ಕಂಪೌಂಡ್ ಅನ್ನು ನಿರ್ಮಿಸಿದೆ. ಇಷ್ಟೇ ಅಲ್ಲದೆ, ಕೆರೆಯ ಮಧ್ಯಭಾಗದಲ್ಲಿ ರಸ್ತೆಯನ್ನೂ ಸಹ ನಿರ್ಮಿಸಿದ್ದು, ಇದು ಸಂಪೂರ್ಣವಾಗಿ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲವನ್ನು ಕಡಿತಗೊಳಿಸಿದೆ. ಈ ಕಂಪನಿಯ ಸುತ್ತಮುತ್ತ ಇರುವ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಭೂಮಿ ಮತ್ತು ಕೆರೆಗಳನ್ನು ತನ್ನೊಡಲೊಳಗೆ ಸೇರಿಸಿಕೊಂಡಿದೆ. “ಕೆಲವರು ಈ ಕಂಪನಿ ಜೊತೆಗೆ ನಿಂತಿದ್ದಾರೆ. ಇದರಿಂದಾಗ ಸುತ್ತಮುತ್ತಲಿನ ಜನ, ಜಾನುವಾರುಗಳ ಸ್ಥಿತಿ ಅರಣ್ಯರೋದನವಾಗಿದೆ. ಇಂತಹ ಒಂದು ಪರಿಸ್ಥಿತಿ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಉದ್ಭವಿಸಿದೆ,” ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದರು.

ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉದ್ಭವಿಸಿರುವುದು ಮಾತ್ರವಲ್ಲದೆ, ಈ ಅತಿಕ್ರಮಣವನ್ನು ಪ್ರಶ್ನಿಸಲು ಹೋದರೆ ಕಾರ್ಖಾನೆಯವರು ಜನರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು. ಇದರಿಂದ ತೀವ್ರ ಆಕ್ರೋಶಗೊಂಡ ಗ್ರಾಮದ ರೈತರು, ಸುಮಾರು 4,000 ಕುರಿ-ದನಗಳೊಂದಿಗೆ ಕೊಪ್ಪಳ ಜಿಲ್ಲಾಡಳಿತದ ಮುಂದೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದರು.

ಒಬ್ಬ ರೈತ ಮಾತನಾಡಿ, “ನಮ್ಮ ಕೊಪ್ಪಳ ಜಿಲ್ಲೆಯ ಅಸ್ತಿಯನ್ನೆಲ್ಲಾ ಖರೀದಿಮಾಡಿಕೊಂಡು, ಕೆರೆಯ ನೀರನ್ನು ಕುಡಿಯಲು ಹೋಗಲು ದಾರಿಯಿಲ್ಲದ ಹಾಗೆ ಮಾಡಿಬಿಟ್ಟಿದ್ದಾರೆ. ಅದರ ಸಲುವಾಗಿ ಇಂದು ನಾವು ಜಾನುವಾರುಗಳೊಂದಿಗೆ ಪ್ರತಿಭಟನೆ ಮಾಡಲಿಕ್ಕೆ ಬಂದಿದ್ದೇವೆ,” ಎಂದು ಹೇಳಿದರು. ಈ ಸಮಸ್ಯೆಯನ್ನು ಬಗೆಹರಿಸಿದರೆ ಒಳ್ಳೆಯದಾಗುತ್ತದೆ. ಇದನ್ನು ಬಗೆಹರಿಸದೇ ಹೋದರೆ ಮುಂದಿನ ದಿನಗಳಲ್ಲಿ “ಇಂದು 4,000 ಜಾನುವಾರುಗಳೊಂದಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ 45,000 ದನ ಮತ್ತು 1 ಲಕ್ಷ ಕುರಿಗಳೊಂದಿಗೆ ಬರುತ್ತೇವೆ,” ಎಂದು ಅವರು ಜಿಲ್ಲಾಡಳಿತಕ್ಕೆ ತೀವ್ರ ಎಚ್ಚರಿಕೆ ನೀಡಿದ್ದರು.

“ಆಗ ನಾವು ಈ ಕುರಿ ಮತ್ತು ಜಾನುವಾರುಗಳೊಂದಿಗೆ ಪ್ರತಿಭಟಿಸುತ್ತೇವೆ. ನಮಗೆ ನ್ಯಾಯ ದೊರೆಯುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ರೈತರು ದೃಢಸಂಕಲ್ಪ ವ್ಯಕ್ತಪಡಿಸಿದರು. “ಈ ಕಂಪನಿಯವರು 2007ರಿಂದಲೂ ನೀರನ್ನು ಬಳಕೆ ಮಾಡಲು ಬಿಟ್ಟಿಲ್ಲ. ಕೆರೆಯ ಸುತ್ತಲೂ ಕಂಪೌಂಡ್ ಹಾಕಿಬಿಟ್ಟಿದ್ದಾರೆ ಮತ್ತು ಗೇಟ್ ಮಾಡಕೊಂಡಿದ್ದಾರೆ. ಇಷ್ಟು ಮಾತ್ರವಲ್ಲ, ಈ ಗೇಟಿಗೆ ಹತ್ತಾರು ಕಾವಲುಗಾರರನ್ನು ಇಟ್ಟಿದ್ದಾರೆ. ಹೀಗಿದ್ದಾಗ ನಾವು ನಮ್ಮ ಜಾನುವಾರುಗಳಿಗೆ ನೀರು ಕುಡಿಸುವುದು ಹೇಗೆ?” ಎಂದು ಅವರು ಪ್ರಶ್ನಿಸಿದರು. ಬಸಾಪುರ ಕೆರೆಯ ಹತ್ತಿರ ಜನ ಅಥವಾ ಜಾನುವಾರು ಹೋದರೆ ಬಡಿದು ಕಳುಹಿಸುತ್ತಾರೆ. ಈ ರೀತಿಯ ದೌರ್ಜನ್ಯ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಮುಂದುವರಿಯುತ್ತಿದೆ ಎಂದೂ ಪ್ರತಿಭಟಿಸಿದ ರೈತರು ಆರೋಪಿಸಿದ್ದರು.

ಇಂದು ಜನ ಮತ್ತು ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ದೊಡ್ಡ ಹೋರಾಟ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ತಿಳಿಸಿದರು. ಇಂದಿನ ಹೋರಾಟದ ಪ್ರಮುಖ ಉದ್ದೇಶಗಳು ಎರಡು. “ಒಂದು, ಬಲ್ಡೋಟಾ ಕಂಪನಿಯ ವಿಸ್ತರಣೆಯನ್ನು ನಿಲ್ಲಿಸಬೇಕು. ಎರಡನೆಯದು, ಕಂಪನಿಗೆ ಬಸಾಪುರ ಕೆರೆಯನ್ನು ಜಿಲ್ಲಾಡಳಿತ ಮಾರಾಟ ಮಾಡಿದೆ. ಇದನ್ನು ನಾವು ಸರ್ವತ ಒಪ್ಪುವುದಿಲ್ಲ. ಹಾಗಾಗಿ ಬಸಾಪುರ ಕೆರೆಯನ್ನು ಜನ ಮತ್ತು ಜಾನುವಾರುಗಳಿಗೆ ಮುಕ್ತಗೊಳಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ,” ಎಂದು ಹೋರಾಟಗಾರರು ಸ್ಪಷ್ಟಪಡಿಸಿದ್ದರು.

ಕಾನೂನುಬದ್ಧತೆ ಏನೇ ಇರಲಿ, ಸರ್ಕಾರ ಕಂಪನಿಗೆ ಈ ಕೆರೆಯನ್ನು ಮಾರಾಟ ಮಾಡಿರುವುದೇ ತಪ್ಪು ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. “ಅದನ್ನು ಜನ ಜಾನುವಾರುಗಳಿಗೆ ಮುಕ್ತಗೊಳಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಹಾಗಾಗಿ ಈ ಕಂಪನಿಯಿಂದ ದೌರ್ಜನ್ಯಕ್ಕೊಳಗಾದ ಗ್ರಾಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಬೇಕು, ಇಲ್ಲಿಯ ಪರಿಸ್ಥಿತಿ ಅವಲೋಕಿಸಿ ಇಲ್ಲಿರುವ ಕಂಪನಿಯನ್ನು ಒಕ್ಕಲೆಬ್ಬಿಸಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಬೇಕು,” ಎಂದು ಅವರು ಆಗ್ರಹಿಸಿದ್ದರು.

ಇದನ್ನು ಬಿಟ್ಟು ಸರ್ಕಾರ ಮತ್ತು ಜಿಲ್ಲಾಡಳಿತ ಬೇರೆ ಏನೋ ನೆಪವೊಡ್ಡಿ ಬಲ್ಡೋಟಾ ವಿಸ್ತರಣೆಯನ್ನು ನಿಲ್ಲಿಸದಿದ್ದರೆ ಮತ್ತು ಕೆರೆಯನ್ನು ಮುಕ್ತಗೊಳಿಸದಿದ್ದರೆ, “ಮುಂದಿನ ದಿನಗಳಲ್ಲಿ 40,000 ಜಾನುವಾರುಗಳೊಂದಿಗೆ ಬಲ್ಡೋಟಾ ಕಂಪನಿಯ ಒಳಗೆ ನುಗ್ಗುವಂತಹ ಹೋರಾಟವನ್ನು ಮಾಡುತ್ತೇವೆ,” ಎಂದು ಹೋರಾಟಗಾರರು ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದರು.

ಧರಣಿ ನಡೆಸುತ್ತಿದ್ದಾಗ ಕಾರ್ಖಾನೆಯ ಸಿಬ್ಬಂದಿ ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲಿ ಧರಣಿನಿರತರು ಬಿ.ಎಸ್.ಪಿ.ಎಲ್. ಬಾಲ್ದೋಟಾ ಕಂಪನಿಯ ಮುಖ್ಯ ದ್ವಾರದ ಹತ್ತಿರ ಕರ್ತವ್ಯದಲ್ಲಿದ್ದಾಗ, ಸುಮಾರು 4,000ಕ್ಕೂ ಹೆಚ್ಚು ದನಗಳನ್ನು ಮತ್ತು ಕುರಿಗಳನ್ನು ಕಾರ್ಖಾನೆಯ ಆವರಣದೊಳಗೆ ಒಡೆದುಕೊಂಡು ಬಂದು ಕಂಪನಿಯ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಂಪನಿಯ ಭದ್ರತಾ ವ್ಯವಸ್ಥಾಪಕರಾದ ಎಂ. ಮಹೇಶ್ ನೀಡಿದ ದೂರಿನಲ್ಲಿ, ಪ್ರತಿಭಟನಾಕಾರರು ತಮ್ಮನ್ನು ತಳ್ಳಿ ಬಲವಂತವಾಗಿ ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದರು.

ಈ ದೂರಿನ ಅನ್ವಯ, ಕೊಪ್ಪಳ ಗ್ರಾಮೀಣ ಠಾಣಾ ಪೊಲೀಸರು ಅಲ್ಲಮ ಪ್ರಭು ಬೆಟದೂರು, ಹನುಮಂತಪ್ಪ ಕಲ್ಕೆರಿ, ಮಂಗಳೇಶ್ ರಾಥೋಡ್, ಮುದುಕಪ್ಪ ಹೊಸಮನಿ, ಕೆ.ಬಿ ಗೋನಾಳ್, ಯಮನೂರಪ್ಪ ಪೂಜಾರ, ಮಂಜುನಾಥ ಗೊಂಡಬಾಳ, ಭೀಮೇಶ ಕಲಕೇರಿ ಹಾಗೂ ಎ.ಗಫಾರ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದರು.

ಹೋರಾಟಗಾರ ಮಂಜುನಾಥ್ ಗೊಂಡ್ವಾಳ್ ಮಾತನಾಡಿ, “44 ಎಕರೆ ಕೆರೆ ಮತ್ತು ಸಾರ್ವಜನಿಕ 12 ಎಕರೆ ಭೂಮಿ ಅಂದರೆ ಸುಮಾರು 57 ಎಕರೆ ಮುಖ್ಯ ರಸ್ತೆ ಹೊಂದಿಕೊಂಡಿರುವ ಭೂಮಿಯನ್ನು ಕಬಳಿಸಿ ಅತ್ಯಂತ ಕಡಿಮೆ ಬೆಲೆಗೆ ಲೀಸ್ ಕಮ್ ಖರೀದಿ ಮಾಡಿಕೊಂಡಿದ್ದಾರೆ,” ಎಂದು ಆರೋಪಿಸಿದರು. ಈ ಕೆರೆಗೆ ಸಂಬಂಧಿಸಿದಂತೆ 2022ರ ಹೈಕೋರ್ಟ್ ಆದೇಶದಲ್ಲಿ ಈ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಎಂದು ಸ್ಪಷ್ಟವಾಗಿ ಇದೆ. ಆದರೆ ಕಂಪನಿಯು ಈ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಗೊಂಡ್ವಾಳ್ ಆರೋಪಿಸಿದ್ದರು.

“ಹಾಗಾಗಿ ಜಾನುವಾರುಗಳಿಗೆ, ಕುರಿಗಳಿಗೆ, ಕರುಗಳಿಗೆ ನೀರು ಕುಡಿಯಲು ಮುಕ್ತಗೊಳಿಸಬೇಕು. ಇಲ್ಲಿ ಯಾವುದೇ ರೀತಿಯಾದ ಅಡತಡೆಯನ್ನು ಕಂಪನಿ ಮಾಡಬಾರದು ಎಂದು ಕೋರ್ಟ್ ಆದೇಶವಿದೆ. ಈ ಆದೇಶವನ್ನು ಸರ್ಕಾರ ಮತ್ತು ಜಿಲ್ಲಾಡಳಿತವು ಜಾರಿಮಾಡದೆ, ಕೆಲ ಜನರು ಕಂಪನಿ ಜೊತೆ ಸೇರಿಕೊಂಡಿದ್ದಾರೆ. ಹಾಗಾಗಿ ಕಂಪನಿ ನಿರ್ಮಿಸಿರುವ ಕಂಪೌಂಡ್ ಅನ್ನು ಈ ಕೂಡಲೇ ತೆರವುಗೊಳಿಸಬೇಕು. ಅಲ್ಲಿರುವ ಕಂಪನಿಯ ಭದ್ರತಾ ಸಿಬ್ಬಂದಿಯ ದೌರ್ಜನ್ಯದ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ. ಇಲ್ಲಿಯ ಜನ-ಜಾನುವಾರುಗಳೊಂದಿಗೆ ಅನಿರ್ದಿಷ್ಟಾವಧಿ ಧರಣಿಯನ್ನು ಮುಂದುವರೆಸುತ್ತೇವೆ,” ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಈ ಸಂಬಂಧ ಮುಖ್ಯಮಂತ್ರಿಯವರಿಗೂ ಮತ್ತು ಜಿಲ್ಲಾಧಿಕಾರಿಗೂ ಸಹ ಮನವಿ ಸಲ್ಲಿಸಿದ್ದರೂ, ತಮ್ಮ ಸಮಸ್ಯೆ ಕುರಿತು ಯಾರೂ ಗಮನಹರಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. “ನಮ್ಮ ಊರಿನ ಕೆರೆಗೆ ನಮ್ಮ ಹಕ್ಕು ಇದೆ. ಸರ್ಕಾರವೇ ನಮಗೆ ಮೋಸ ಮಾಡಿದರೆ ನಾವೆಲ್ಲ ಬೀದಿಪಾಲಾಗುತ್ತೇವೆ. ರೈತರಾದ ನಾವು ದುಡಿಯದೇ ಇದ್ದರೆ ಇವರೇನು ದುಡ್ಡನ್ನು ತಿಂದು ಬದುಕುತ್ತಾರೆಯೇ? ಸರ್ಕಾರಕ್ಕೆ ರೈತರ ಮೇಲೆ ಕರುಣೆ ಇಲ್ಲವೇ? ಸರ್ಕಾರ ನಡೆಸುವವರು ರೈತರ ಮಕ್ಕಳಲ್ಲವೇ? ಇವರಿಗೆ ಸರ್ಕಾರಿ ನೌಕರಿ ಬಂದ ಕೂಡಲೇ ದೊಡ್ಡ ಶ್ರೀಮಂತರಾಗಿಬಿಟ್ಟರೆಯೇ? ಇಂತಹ ಬಂಡರು ಹುಟ್ಟಿ ಹುಟ್ಟಿ ನಮ್ಮ ದೇಶ ಹಾಳಾಗಿ ಹೋಗಿದೆ,” ಎಂದು ರೈತರೊಬ್ಬರು ತಮ್ಮ ಆಕ್ರೋಶವನ್ನು ತೀವ್ರವಾಗಿ ವ್ಯಕ್ತಪಡಿಸಿದ್ದರು.

ಇಂದಿನದು ಕೇವಲ ಸಾಂಕೇತಿಕ ಪ್ರತಿಭಟನೆ ಆಗಿದೆ. ಇದು ಮುಂದುವರಿಯುತ್ತದೆ. ನ್ಯಾಯ ಸಿಗುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ರೈತರು ದೃಢಪಡಿಸಿದ್ದರು.

ಕೊಪ್ಪಳ: 4000 ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...