Homeಕರ್ನಾಟಕಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಕೆಲವು ಮೌಢ್ಯಾಚರಣೆಗಳನ್ನೆ ಪರಂಪರೆ ಅಂದರೆ ಹೇಗೆ?? ಶಾಲಾ ಪಠ್ಯ ಪುಸ್ತಕದಿಂದ ಸರ್ಕಾರಕ್ಕೆ ಹೇಳಿ ಇತಿಹಾಸವನ್ನು ತಿರುಚಿದರೆ ಇತಿಹಾಸ ಬದಲಾಗಲ್ಲ.

- Advertisement -
- Advertisement -

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿಯೋಗ ಸಲ್ಲಿಸಿದ ಮನವಿ ಹಿನ್ನಲೆಯಲ್ಲಿ, ’ಆರನೇ ಮತ್ತು ಒಂಬತ್ತನೇ ತರಗತಿಯ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಅಂಶಗಳಿದ್ದರೆ ಪರಿಶೀಲಿಸಿ, ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರೋಧಗಳು ಎದ್ದಿದೆ.

ನಿನ್ನೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ನಿಯೋಗವು, “ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವ ವಿಷಯವನ್ನು ಸೇರಿಸಿರುವುದು ಆಘಾತಕಾರಿ ವಿಷಯ. ಅಲ್ಲದೆ, ಇದು ಬೆಳೆಯುತ್ತಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ” ಎಂದು ತನ್ನ ಮನವಿಯಲ್ಲಿ ದೂರಿಕೊಂಡಿತ್ತು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಯಡಿಯೂರಪ್ಪ ಏನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ದ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ 

ಅಶ್ವಥ್ ಪುಟ್ಟಸ್ವಾಮಿ ಅವರು, “ಬಾಬಾಸಾಹೇಬ್‌ ಅಂಬೇಡ್ಕರರಿಗೆ ಸಾರ್ವಜನಿಕ ಬಾವಿಯಲ್ಲಿ ನೀರು ಕುಡಿಯಲು ಬಿಡಲಿಲ್ಲ ಅಂತಲೂ, ಬಾಬಾಸಾಹೇಬರ ಜಾತಿ ಕೇಳಿದ ಗಾಡಿಯವನೊಬ್ಬ ಆ ಕ್ಷಣವೇ ಗಾಡಿಯಿಂದ ಕೆಳಗಿಳಿಸಿದ ಅಂತಲೂ ಪಠ್ಯಪುಸ್ತಕದಲ್ಲೇ ಓದಿದ್ದೆವು. ಆಗ ಯಾರೂ ಅವಹೇಳನಕಾರಿ ಅಂತ ಹೇಳಿರಲಿಲ್ಲ. ಈಗ ಯಾರೋ ಪ್ರಾಣಾಹಾರಿಗಳಿಗೆ ಪಠ್ಯದಲ್ಲಿರುವುದು ಅವಹೇಳನವಾಗಿದೆಯಂತೆ!” ಎಂದು ಹೇಳಿದ್ದಾರೆ.

ಸಂಕೇತ್ ಕರಾವಳಿ, “ಕೆಲವು ಮೌಢ್ಯಾಚರಣೆಗಳನ್ನೆ ಪರಂಪರೆ ಅಂದರೆ ಹೇಗೆ?? ಶಾಲಾ ಪಠ್ಯ ಪುಸ್ತಕದಿಂದ ಸರ್ಕಾರಕ್ಕೆ ಹೇಳಿ ಇತಿಹಾಸವನ್ನು ತಿರುಚಿದರೆ ಇತಿಹಾಸ ಬದಲಾಗಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ಮಲ್ಲೇಶ್ ಎಲ್ ಅವರು, ಪಠ್ಯಪುಸ್ತಕದಲ್ಲಿ ಇರುವುದು ಕಟು ಸತ್ಯ. ಈಗಲೂ ಹೋಮ ಹವನ ಮಾಡಿದಾಗ ತುಪ್ಪ ಮತ್ತು ಕೆಲವು ಧಾನ್ಯಗಳನ್ನು ಅಗ್ನಿಗೆ ಅರ್ಪಿಸಲಾಗಿತ್ತದೆ, ಹಾಗೂ ಇದು ದುಬಾರಿ ಕೂಡ” ಎಂದು ಹೇಳಿದ್ದಾರೆ.

ಕವಿ ಚಿದಂಬರ ನರೇಂದ್ರ ಅವರು ನಟ ಜಗ್ಗೇಶ್ ಅವರು ಸುದ್ದಿಗೆ ಮಾಡಿದ ಪ್ರತಿಕ್ರಿಯೆನ್ನು ನಕಲು ಮಾಡಿ, “ಹೀಗೆ ಯಾರು ಸ್ಟೇಟಸ್ ಹಾಕಬಹುದು ನಿಮ್ಮ ಎಕ್ಸ್‌ಪೀರಿಯೆನ್ಸ್‌‌‌ಲಿ, ಹೆಸರು ಹಾಕದೆ ಕ್ಲೂ ಮೂಲಕ ಉತ್ತರಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಟ ಜಗ್ಗೇಶ್ ಟ್ವಿಟ್ಟರ್‌‌ನಲ್ಲಿ ಕನ್ನಡವನ್ನು ತಪ್ಪು ತಪ್ಪಾಗಿ ಬರೆದು ನಗೆಪಾಟಲಿಗೀಡಾಗಿದ್ದರು.

ಸರೋವರ್‌ ಬೆಂಕಿಕೆರೆ ಅವರು, ಮನುಸ್ಮೃತಿಯ ಅಧ್ಯಾಯದ ಒಂದು ಶ್ಲೋಕವಿರುವ ಚಿತ್ರವನ್ನು ಹಾಕಿ, “ಯಡಿಯೂರಪ್ಪನವರು ಸಮರ್ಥಿಸಿಕೊಳ್ಳುತ್ತಿರುವುದು ಏನನ್ನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...