Homeಕರ್ನಾಟಕಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಕೆಲವು ಮೌಢ್ಯಾಚರಣೆಗಳನ್ನೆ ಪರಂಪರೆ ಅಂದರೆ ಹೇಗೆ?? ಶಾಲಾ ಪಠ್ಯ ಪುಸ್ತಕದಿಂದ ಸರ್ಕಾರಕ್ಕೆ ಹೇಳಿ ಇತಿಹಾಸವನ್ನು ತಿರುಚಿದರೆ ಇತಿಹಾಸ ಬದಲಾಗಲ್ಲ.

- Advertisement -
- Advertisement -

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿಯೋಗ ಸಲ್ಲಿಸಿದ ಮನವಿ ಹಿನ್ನಲೆಯಲ್ಲಿ, ’ಆರನೇ ಮತ್ತು ಒಂಬತ್ತನೇ ತರಗತಿಯ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಅಂಶಗಳಿದ್ದರೆ ಪರಿಶೀಲಿಸಿ, ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರೋಧಗಳು ಎದ್ದಿದೆ.

ನಿನ್ನೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ನಿಯೋಗವು, “ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವ ವಿಷಯವನ್ನು ಸೇರಿಸಿರುವುದು ಆಘಾತಕಾರಿ ವಿಷಯ. ಅಲ್ಲದೆ, ಇದು ಬೆಳೆಯುತ್ತಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ” ಎಂದು ತನ್ನ ಮನವಿಯಲ್ಲಿ ದೂರಿಕೊಂಡಿತ್ತು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಯಡಿಯೂರಪ್ಪ ಏನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ದ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ 

ಅಶ್ವಥ್ ಪುಟ್ಟಸ್ವಾಮಿ ಅವರು, “ಬಾಬಾಸಾಹೇಬ್‌ ಅಂಬೇಡ್ಕರರಿಗೆ ಸಾರ್ವಜನಿಕ ಬಾವಿಯಲ್ಲಿ ನೀರು ಕುಡಿಯಲು ಬಿಡಲಿಲ್ಲ ಅಂತಲೂ, ಬಾಬಾಸಾಹೇಬರ ಜಾತಿ ಕೇಳಿದ ಗಾಡಿಯವನೊಬ್ಬ ಆ ಕ್ಷಣವೇ ಗಾಡಿಯಿಂದ ಕೆಳಗಿಳಿಸಿದ ಅಂತಲೂ ಪಠ್ಯಪುಸ್ತಕದಲ್ಲೇ ಓದಿದ್ದೆವು. ಆಗ ಯಾರೂ ಅವಹೇಳನಕಾರಿ ಅಂತ ಹೇಳಿರಲಿಲ್ಲ. ಈಗ ಯಾರೋ ಪ್ರಾಣಾಹಾರಿಗಳಿಗೆ ಪಠ್ಯದಲ್ಲಿರುವುದು ಅವಹೇಳನವಾಗಿದೆಯಂತೆ!” ಎಂದು ಹೇಳಿದ್ದಾರೆ.

ಸಂಕೇತ್ ಕರಾವಳಿ, “ಕೆಲವು ಮೌಢ್ಯಾಚರಣೆಗಳನ್ನೆ ಪರಂಪರೆ ಅಂದರೆ ಹೇಗೆ?? ಶಾಲಾ ಪಠ್ಯ ಪುಸ್ತಕದಿಂದ ಸರ್ಕಾರಕ್ಕೆ ಹೇಳಿ ಇತಿಹಾಸವನ್ನು ತಿರುಚಿದರೆ ಇತಿಹಾಸ ಬದಲಾಗಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ಮಲ್ಲೇಶ್ ಎಲ್ ಅವರು, ಪಠ್ಯಪುಸ್ತಕದಲ್ಲಿ ಇರುವುದು ಕಟು ಸತ್ಯ. ಈಗಲೂ ಹೋಮ ಹವನ ಮಾಡಿದಾಗ ತುಪ್ಪ ಮತ್ತು ಕೆಲವು ಧಾನ್ಯಗಳನ್ನು ಅಗ್ನಿಗೆ ಅರ್ಪಿಸಲಾಗಿತ್ತದೆ, ಹಾಗೂ ಇದು ದುಬಾರಿ ಕೂಡ” ಎಂದು ಹೇಳಿದ್ದಾರೆ.

ಕವಿ ಚಿದಂಬರ ನರೇಂದ್ರ ಅವರು ನಟ ಜಗ್ಗೇಶ್ ಅವರು ಸುದ್ದಿಗೆ ಮಾಡಿದ ಪ್ರತಿಕ್ರಿಯೆನ್ನು ನಕಲು ಮಾಡಿ, “ಹೀಗೆ ಯಾರು ಸ್ಟೇಟಸ್ ಹಾಕಬಹುದು ನಿಮ್ಮ ಎಕ್ಸ್‌ಪೀರಿಯೆನ್ಸ್‌‌‌ಲಿ, ಹೆಸರು ಹಾಕದೆ ಕ್ಲೂ ಮೂಲಕ ಉತ್ತರಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಟ ಜಗ್ಗೇಶ್ ಟ್ವಿಟ್ಟರ್‌‌ನಲ್ಲಿ ಕನ್ನಡವನ್ನು ತಪ್ಪು ತಪ್ಪಾಗಿ ಬರೆದು ನಗೆಪಾಟಲಿಗೀಡಾಗಿದ್ದರು.

ಸರೋವರ್‌ ಬೆಂಕಿಕೆರೆ ಅವರು, ಮನುಸ್ಮೃತಿಯ ಅಧ್ಯಾಯದ ಒಂದು ಶ್ಲೋಕವಿರುವ ಚಿತ್ರವನ್ನು ಹಾಕಿ, “ಯಡಿಯೂರಪ್ಪನವರು ಸಮರ್ಥಿಸಿಕೊಳ್ಳುತ್ತಿರುವುದು ಏನನ್ನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...