Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...