Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...