Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...