Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...