Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...