Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...