Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....