Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...