Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...