Homeಅಂತರಾಷ್ಟ್ರೀಯCAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

CAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

- Advertisement -
- Advertisement -

ಗಣರಾಜ್ಯೋತ್ಸವದಂದು ಪೌರತ್ವ ಕಾನೂನಿನ ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರು ಶಾಂತಿಯುತ ರ್‍ಯಾಲಿ ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದಾರೆ.

ಇನ್ನು ಕೆಲವೆಡೆ ಸಿಎಎ ಪರವಾಗಿ ಸಹ ಪ್ರತಿಭಟನೆ ನಡೆದಿದ್ದು, “ಭಾರತವು ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸುತ್ತದೆ” ಮತ್ತು ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕನಿಷ್ಟ 30ನಗರಗಳಲ್ಲಿ ಸಿಎಎ ವಿರೋಧಿ ಬ್ಯಾನರ್‌ಗಳನ್ನು ಹಿಡಿದ ಜನರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಿಎಎ, ಎನ್‌ಪಿಆರ್‌ ರದ್ದುಪಡಿಸಬೇಕು ಮತ್ತು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದರಿಂದ ಭಾರತದ ಜಾತ್ಯತೀತ ತತ್ವಕ್ಕೆ ಅಪಾಯವಿದೆ ಎಂದು ಅವರು ಸಾರಿ ಹೇಳಿದ್ದಾರೆ.

ಕೆಲವು ನಗರಗಳಲ್ಲಿ, ವಿಶೇಷವಾಗಿ ನ್ಯೂಯಾರ್ಕ್, ಚಿಕಾಗೊ, ಹೂಸ್ಟನ್, ಅಟ್ಲಾಂಟಾ ಮತ್ತು ಸ್ಯಾನ್ ಫ್ರಾನ್ಸಿಸ್ಕೊ ​​ಭಾರತೀಯ ದೂತಾವಾಸಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನಾಕಾರರು “ಭಾರತ್ ಮಾತಾ ಕಿ ಜೈ” ಮತ್ತು “ಹಿಂದೂ, ಮುಸ್ಲಿಂ, ಸಿಖ್, ಇಸಾಯ್ : ಆಪಾಸ್ ಮೇ ಸಾಬ್ ಭಾಯ್ ಭಾಯ್ ” ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಾಕಾರರ ಅತಿದೊಡ್ಡ ಸಭೆ ಚಿಕಾಗೊದಿಂದ ವರದಿಯಾಗಿದೆ. ಅಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿದರು ಮತ್ತು ಹಲವಾರು ಮೈಲಿ ಉದ್ದದ ಮಾನವ ಸರಪಳಿಯನ್ನು ರಚಿಸಿದ್ದಾರೆ.

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ 500 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಸಿಎಎ ವಿರೋಧಿಸಿ ಶ್ವೇತಭವನದ ಬಳಿಯ ಉದ್ಯಾನವನದಿಂದ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಮೆರವಣಿಗೆ ನಡೆಸಿದ್ದಾರೆ.

ಭಾರತೀಯ ಅಮೆರಿಕನ್ ಮುಸ್ಲಿಂ ಕೌನ್ಸಿಲ್ (ಐಎಎಂಸಿ), ಈಕ್ವಾಲಿಟಿ ಲ್ಯಾಬ್ಸ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‌ಎಂ), ಮತ್ತು ಮಾನವ ಹಕ್ಕುಗಳಿಗಾಗಿ ಹಿಂದೂಗಳು (HfHR), ಯಹೂದಿ ವಾಯ್ಸ್ ಫಾರ್ ಪೀಸ್ (ಜೆವಿಪಿ) ನಂತಹ ಹಲವಾರು ಸಂಸ್ಥೆಗಳನ್ನು ಒಳಗೊಂಡ ಕನಿಷ್ಠ 30 ನಗರಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

“ಸಿಎಎ ಮತ್ತು ಎನ್ಆರ್‌ಸಿ ವಿರೋಧಿ ಪ್ರತಿಭಟನೆಗಳ ಮೇಲೆ ಭಾರತದಲ್ಲಿ ಸರ್ಕಾರವು ನಡೆಸಿದ ಕ್ರೂರ ದಬ್ಬಾಳಿಕೆಯು ಸರ್ಕಾರದ ವಿಭಜಕ-ಕೋಮು-ಫ್ಯಾಸಿಸ್ಟ್ ಕಾರ್ಯಸೂಚಿಯನ್ನು ತೋರಿಸುತ್ತಿದೆ. ಇದನ್ನು ಪ್ರಶ್ನಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬೀದಿಗಿಳಿದಿರುವ ಪರಿಸ್ಥಿತಿಯನ್ನು ಸೃಷ್ಟಿಸಿದೆ” ಎಂದು ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಾಂಡೆ ಸಂದೀಪ್ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದಾರೆ.

ಸಂವಿಧಾನವನ್ನು ಸರ್ಕಾರ ನಾಶಮಾಡಲು ಮುಂದಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಂತಿಮವಾಗಿ ಜನ ಸಾಮಾನ್ಯರು ಮಾತ್ರ ರಕ್ಷಿಸಬಹುದೆಂಬ ಭರವಸೆಯನ್ನು ಈ ಹೋರಾಟಗಳು ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮೋದಿ-ಷಾ ಸರ್ಕಾರದ ಕಠಿಣ ನೀತಿಗಳ ವಿರುದ್ಧ ಜಾಗತಿಕ ಒಮ್ಮತವನ್ನು ಪ್ರತಿನಿಧಿಸುತ್ತವೆ” ಎಂದು ನ್ಯೂಯಾರ್ಕ್‌ನ ಡಾ.ಶೇಕ್ ಉಬೈದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...