Homeಅಂತರಾಷ್ಟ್ರೀಯCAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

CAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

- Advertisement -
- Advertisement -

ಗಣರಾಜ್ಯೋತ್ಸವದಂದು ಪೌರತ್ವ ಕಾನೂನಿನ ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರು ಶಾಂತಿಯುತ ರ್‍ಯಾಲಿ ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದಾರೆ.

ಇನ್ನು ಕೆಲವೆಡೆ ಸಿಎಎ ಪರವಾಗಿ ಸಹ ಪ್ರತಿಭಟನೆ ನಡೆದಿದ್ದು, “ಭಾರತವು ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸುತ್ತದೆ” ಮತ್ತು ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕನಿಷ್ಟ 30ನಗರಗಳಲ್ಲಿ ಸಿಎಎ ವಿರೋಧಿ ಬ್ಯಾನರ್‌ಗಳನ್ನು ಹಿಡಿದ ಜನರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಿಎಎ, ಎನ್‌ಪಿಆರ್‌ ರದ್ದುಪಡಿಸಬೇಕು ಮತ್ತು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದರಿಂದ ಭಾರತದ ಜಾತ್ಯತೀತ ತತ್ವಕ್ಕೆ ಅಪಾಯವಿದೆ ಎಂದು ಅವರು ಸಾರಿ ಹೇಳಿದ್ದಾರೆ.

ಕೆಲವು ನಗರಗಳಲ್ಲಿ, ವಿಶೇಷವಾಗಿ ನ್ಯೂಯಾರ್ಕ್, ಚಿಕಾಗೊ, ಹೂಸ್ಟನ್, ಅಟ್ಲಾಂಟಾ ಮತ್ತು ಸ್ಯಾನ್ ಫ್ರಾನ್ಸಿಸ್ಕೊ ​​ಭಾರತೀಯ ದೂತಾವಾಸಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನಾಕಾರರು “ಭಾರತ್ ಮಾತಾ ಕಿ ಜೈ” ಮತ್ತು “ಹಿಂದೂ, ಮುಸ್ಲಿಂ, ಸಿಖ್, ಇಸಾಯ್ : ಆಪಾಸ್ ಮೇ ಸಾಬ್ ಭಾಯ್ ಭಾಯ್ ” ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಾಕಾರರ ಅತಿದೊಡ್ಡ ಸಭೆ ಚಿಕಾಗೊದಿಂದ ವರದಿಯಾಗಿದೆ. ಅಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿದರು ಮತ್ತು ಹಲವಾರು ಮೈಲಿ ಉದ್ದದ ಮಾನವ ಸರಪಳಿಯನ್ನು ರಚಿಸಿದ್ದಾರೆ.

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ 500 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಸಿಎಎ ವಿರೋಧಿಸಿ ಶ್ವೇತಭವನದ ಬಳಿಯ ಉದ್ಯಾನವನದಿಂದ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಮೆರವಣಿಗೆ ನಡೆಸಿದ್ದಾರೆ.

ಭಾರತೀಯ ಅಮೆರಿಕನ್ ಮುಸ್ಲಿಂ ಕೌನ್ಸಿಲ್ (ಐಎಎಂಸಿ), ಈಕ್ವಾಲಿಟಿ ಲ್ಯಾಬ್ಸ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‌ಎಂ), ಮತ್ತು ಮಾನವ ಹಕ್ಕುಗಳಿಗಾಗಿ ಹಿಂದೂಗಳು (HfHR), ಯಹೂದಿ ವಾಯ್ಸ್ ಫಾರ್ ಪೀಸ್ (ಜೆವಿಪಿ) ನಂತಹ ಹಲವಾರು ಸಂಸ್ಥೆಗಳನ್ನು ಒಳಗೊಂಡ ಕನಿಷ್ಠ 30 ನಗರಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

“ಸಿಎಎ ಮತ್ತು ಎನ್ಆರ್‌ಸಿ ವಿರೋಧಿ ಪ್ರತಿಭಟನೆಗಳ ಮೇಲೆ ಭಾರತದಲ್ಲಿ ಸರ್ಕಾರವು ನಡೆಸಿದ ಕ್ರೂರ ದಬ್ಬಾಳಿಕೆಯು ಸರ್ಕಾರದ ವಿಭಜಕ-ಕೋಮು-ಫ್ಯಾಸಿಸ್ಟ್ ಕಾರ್ಯಸೂಚಿಯನ್ನು ತೋರಿಸುತ್ತಿದೆ. ಇದನ್ನು ಪ್ರಶ್ನಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬೀದಿಗಿಳಿದಿರುವ ಪರಿಸ್ಥಿತಿಯನ್ನು ಸೃಷ್ಟಿಸಿದೆ” ಎಂದು ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಾಂಡೆ ಸಂದೀಪ್ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದಾರೆ.

ಸಂವಿಧಾನವನ್ನು ಸರ್ಕಾರ ನಾಶಮಾಡಲು ಮುಂದಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಂತಿಮವಾಗಿ ಜನ ಸಾಮಾನ್ಯರು ಮಾತ್ರ ರಕ್ಷಿಸಬಹುದೆಂಬ ಭರವಸೆಯನ್ನು ಈ ಹೋರಾಟಗಳು ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮೋದಿ-ಷಾ ಸರ್ಕಾರದ ಕಠಿಣ ನೀತಿಗಳ ವಿರುದ್ಧ ಜಾಗತಿಕ ಒಮ್ಮತವನ್ನು ಪ್ರತಿನಿಧಿಸುತ್ತವೆ” ಎಂದು ನ್ಯೂಯಾರ್ಕ್‌ನ ಡಾ.ಶೇಕ್ ಉಬೈದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...