Homeಅಂತರಾಷ್ಟ್ರೀಯCAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

CAA, NRC ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರ ಪ್ರತಿಭಟನೆ

- Advertisement -
- Advertisement -

ಗಣರಾಜ್ಯೋತ್ಸವದಂದು ಪೌರತ್ವ ಕಾನೂನಿನ ವಿರುದ್ಧ ಅಮೆರಿಕದ 30 ನಗರಗಳಲ್ಲಿ ಭಾರತೀಯ-ಅಮೆರಿಕನ್ನರು ಶಾಂತಿಯುತ ರ್‍ಯಾಲಿ ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದಾರೆ.

ಇನ್ನು ಕೆಲವೆಡೆ ಸಿಎಎ ಪರವಾಗಿ ಸಹ ಪ್ರತಿಭಟನೆ ನಡೆದಿದ್ದು, “ಭಾರತವು ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸುತ್ತದೆ” ಮತ್ತು ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕನಿಷ್ಟ 30ನಗರಗಳಲ್ಲಿ ಸಿಎಎ ವಿರೋಧಿ ಬ್ಯಾನರ್‌ಗಳನ್ನು ಹಿಡಿದ ಜನರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಿಎಎ, ಎನ್‌ಪಿಆರ್‌ ರದ್ದುಪಡಿಸಬೇಕು ಮತ್ತು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದರಿಂದ ಭಾರತದ ಜಾತ್ಯತೀತ ತತ್ವಕ್ಕೆ ಅಪಾಯವಿದೆ ಎಂದು ಅವರು ಸಾರಿ ಹೇಳಿದ್ದಾರೆ.

ಕೆಲವು ನಗರಗಳಲ್ಲಿ, ವಿಶೇಷವಾಗಿ ನ್ಯೂಯಾರ್ಕ್, ಚಿಕಾಗೊ, ಹೂಸ್ಟನ್, ಅಟ್ಲಾಂಟಾ ಮತ್ತು ಸ್ಯಾನ್ ಫ್ರಾನ್ಸಿಸ್ಕೊ ​​ಭಾರತೀಯ ದೂತಾವಾಸಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನಾಕಾರರು “ಭಾರತ್ ಮಾತಾ ಕಿ ಜೈ” ಮತ್ತು “ಹಿಂದೂ, ಮುಸ್ಲಿಂ, ಸಿಖ್, ಇಸಾಯ್ : ಆಪಾಸ್ ಮೇ ಸಾಬ್ ಭಾಯ್ ಭಾಯ್ ” ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಾಕಾರರ ಅತಿದೊಡ್ಡ ಸಭೆ ಚಿಕಾಗೊದಿಂದ ವರದಿಯಾಗಿದೆ. ಅಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿದರು ಮತ್ತು ಹಲವಾರು ಮೈಲಿ ಉದ್ದದ ಮಾನವ ಸರಪಳಿಯನ್ನು ರಚಿಸಿದ್ದಾರೆ.

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ 500 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಸಿಎಎ ವಿರೋಧಿಸಿ ಶ್ವೇತಭವನದ ಬಳಿಯ ಉದ್ಯಾನವನದಿಂದ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಮೆರವಣಿಗೆ ನಡೆಸಿದ್ದಾರೆ.

ಭಾರತೀಯ ಅಮೆರಿಕನ್ ಮುಸ್ಲಿಂ ಕೌನ್ಸಿಲ್ (ಐಎಎಂಸಿ), ಈಕ್ವಾಲಿಟಿ ಲ್ಯಾಬ್ಸ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‌ಎಂ), ಮತ್ತು ಮಾನವ ಹಕ್ಕುಗಳಿಗಾಗಿ ಹಿಂದೂಗಳು (HfHR), ಯಹೂದಿ ವಾಯ್ಸ್ ಫಾರ್ ಪೀಸ್ (ಜೆವಿಪಿ) ನಂತಹ ಹಲವಾರು ಸಂಸ್ಥೆಗಳನ್ನು ಒಳಗೊಂಡ ಕನಿಷ್ಠ 30 ನಗರಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

“ಸಿಎಎ ಮತ್ತು ಎನ್ಆರ್‌ಸಿ ವಿರೋಧಿ ಪ್ರತಿಭಟನೆಗಳ ಮೇಲೆ ಭಾರತದಲ್ಲಿ ಸರ್ಕಾರವು ನಡೆಸಿದ ಕ್ರೂರ ದಬ್ಬಾಳಿಕೆಯು ಸರ್ಕಾರದ ವಿಭಜಕ-ಕೋಮು-ಫ್ಯಾಸಿಸ್ಟ್ ಕಾರ್ಯಸೂಚಿಯನ್ನು ತೋರಿಸುತ್ತಿದೆ. ಇದನ್ನು ಪ್ರಶ್ನಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬೀದಿಗಿಳಿದಿರುವ ಪರಿಸ್ಥಿತಿಯನ್ನು ಸೃಷ್ಟಿಸಿದೆ” ಎಂದು ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಾಂಡೆ ಸಂದೀಪ್ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದಾರೆ.

ಸಂವಿಧಾನವನ್ನು ಸರ್ಕಾರ ನಾಶಮಾಡಲು ಮುಂದಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಂತಿಮವಾಗಿ ಜನ ಸಾಮಾನ್ಯರು ಮಾತ್ರ ರಕ್ಷಿಸಬಹುದೆಂಬ ಭರವಸೆಯನ್ನು ಈ ಹೋರಾಟಗಳು ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮೋದಿ-ಷಾ ಸರ್ಕಾರದ ಕಠಿಣ ನೀತಿಗಳ ವಿರುದ್ಧ ಜಾಗತಿಕ ಒಮ್ಮತವನ್ನು ಪ್ರತಿನಿಧಿಸುತ್ತವೆ” ಎಂದು ನ್ಯೂಯಾರ್ಕ್‌ನ ಡಾ.ಶೇಕ್ ಉಬೈದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...