Homeಚಳವಳಿಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

- Advertisement -
- Advertisement -

ಎಲ್ಲೋ ಒಂದು ರೀತಿಯ ಭಯ, ಅರೆಸ್ಟ್ ಆದ್ರೆ ಏನ್ ಮಾಡೋದು? ಯಾರು ಹೊರಗೆ ತರ್ತಾರೆ? ಅಪ್ಪನಿಗೆ ಗೊತ್ತಾದ್ರೆ ಚರ್ಮ ಸುಲಿತಾರೆ! ಆದ್ರೆ, ಪ್ರತಿಭಟನೆಗೆ ಹೋಗ್ದೆ ಇದ್ರೆ? ಛೇ!

ಹೀಗೆ ಯೋಚಿಸಿ, ಕೊನೆಗೂ ಮನೆಯಿಂದ ಸುಮಾರು ವಿದ್ಯಾರ್ಥಿಗಳು ಬೆಂಗಳೂರಿನ ಬೀದಿಗೆ ಇಳಿದೇಬಿಟ್ಟೆವು! ನಮಗೆ ಆ ಕ್ಷಣದಲ್ಲಿ ನಾವು ಮುಖ್ಯ ಆಗಿರ್ಲಿಲ್ಲ. ಸರ್ಕಾರದ ವಿರುದ್ಧ ಹೋರಾಡೋದು ಮುಖ್ಯವಾಗಿತ್ತು. ಅದು ನಮ್ಮ ಸ್ವಾತಂತ್ರ್ಯದ ಪ್ರಶ್ನೆಯಾಗಿತ್ತು. ಮುಂದೊಂದು ದಿನ ನಮ್ಮ ಕಾಲೇಜಿಗೂ ನುಗ್ಗಿ ನಮ್ಮನ್ನೂ ಕೂಡ ನಾಯಿ ತರ ಪೊಅಲೀಸರು ಹೊಡಿಯೋ ಸಂಪೂರ್ಣ ಚಾನ್ಸಸ್ ಇದೆ ಅನ್ನೋದು ನಮ್ಮ ಅರಿವಿಗೆ ಬಂದಾಗಿತ್ತು.

ವಿದ್ಯಾರ್ಥಿಗಳು ತಮ್ಮ ಮೊದಲ ಪ್ರತಿಭಟನೆಯನ್ನ ಎಲ್ಲರ ಜೊತೆಯಲ್ಲೇ 15ರಂದು ನಡೆಸಿದ್ವಿ. ಮನಸ್ಸಿಗೆ ಸಮಾಧಾನ ಇಲ್ಲ. ಅದಾದಮೇಲೆ, 16ಕ್ಕೆ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಕರೆ ಕೊಟ್ಟೆವು. ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಮಾರ್ಚ್ ಮಾಡೋದು ಅಂತ ನಿರ್ಧಾರ ಆಯಿತು. ಆದರೆ, ಈ ಪೊಲೀಸರು ಬಿಡಬೇಕಲ್ಲ! ನಮ್ಮ 9 ಸಂಗಡಿಗರನ್ನ ಒಳಗೆ ಹಾಕಿಬಿಟ್ರು. ನಮ್ಮಲ್ಲಿ ಪ್ರತಿಭಟನೆಗೆ ಮೊದಲ ಬಾರಿಗೆ ಬಂದಿದ್ದ ಕೆಲವರು ಕಂಗಾಲಾಗಿಹೋದರು. ಆದರೆ, ಅಲ್ಲಿಗೆ ಮನದಟ್ಟಾಯಿತು. ನಾವು ಅವರಿಂದ ಓಔಅ ತೊಗೊಂಡ್ರೆನು? ಇಲ್ಲದಿದ್ರೇನು ನಮ್ಮನ್ನ ಒಳಗೆ ಹಾಕೋದು ಗ್ಯಾರೆಂಟಿ! ನಮ್ಮ ಪ್ರತಿಭಟನೆ ಮಾಡೋ ಹುಮ್ಮಸ್ಸು ಇನ್ನೂ ಹೆಚ್ಚಿತು. 20ಕ್ಕೆ ಸೆಕ್ಷನ್ 144 ನಡುವೆಯೂ ಪ್ರತಿಭಟನೆ ನಡೆಸೋದು ಅಂತ ಸಿದ್ಧ ಆಯಿತು!

ನನ್ನ ಪ್ರಕಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಏನಾಯಿತೋ, ಅದು ಒಂದು ರೀತಿಯ ಇತಿಹಾಸ. ಏಕೆಂದರೆ, ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಸಂಘಟನೆಗಳ ಬ್ಯಾನರ್‍ಗಳು ಇಲ್ಲದೇನೇ ಒಟ್ಟಾಗಿ ಮುಂದೆ ಬಂದು ಒಗ್ಗಟ್ಟು ಏನು ಅನ್ನೋದನ್ನ ತೋರಿಸಿದ್ವಿ. ಇಷ್ಟು ವರ್ಷಗಳ ಕಾಲ ಬೆಂಗಳೂರಿನಲ್ಲಿ ನಡೀತಾ ಇದ್ದ “ಕನ್ನಡ ಗೊತ್ತಿಲ್ಲ” ಅನ್ನೋ ಶೋಕಿ ಬಿಟ್ಟು, ಒಟ್ಟಿಗೆ ಸೇರಿ, ಕನ್ನಡದಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ವಿ.
ಅದರಲ್ಲೂ ಹಾಳಾದ್ ಮೀಡಿಯಾ ಒಂದು ಪೋಸ್ಟರ್ ಹಿಡ್ಕೊಂಡು ನಾಯಿ ಬಟ್ಟೆ ಎಳ್ದಾಡಿದ ಹಾಗೆ ನಮ್ಮ ಪ್ರತಿಭಟನೆಯ ಮೌಲ್ಯವನ್ನು ಇಳಿಸಲಿಕ್ಕೆ ಏನೆಲ್ಲಾ ಮಾಡಿದ್ವು!

ಆದರೆ, ಇನ್ನು ಮುಂದೆ ಎಲ್ಲರಿಗೂ ನೆನಪಿರಲಿ, ವಿದ್ಯಾರ್ಥಿಗಳು ಯಾವಾಗ ಎಲ್ಲಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ, ಅವಾಗ ಎಲ್ಲಾ ಸರ್ಕಾರಗಳು ಬಿದ್ದಿವೆ. ಈ ಬಾರಿನೂ ಬೀಳುತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...