Homeಚಳವಳಿಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

- Advertisement -
- Advertisement -

ಎಲ್ಲೋ ಒಂದು ರೀತಿಯ ಭಯ, ಅರೆಸ್ಟ್ ಆದ್ರೆ ಏನ್ ಮಾಡೋದು? ಯಾರು ಹೊರಗೆ ತರ್ತಾರೆ? ಅಪ್ಪನಿಗೆ ಗೊತ್ತಾದ್ರೆ ಚರ್ಮ ಸುಲಿತಾರೆ! ಆದ್ರೆ, ಪ್ರತಿಭಟನೆಗೆ ಹೋಗ್ದೆ ಇದ್ರೆ? ಛೇ!

ಹೀಗೆ ಯೋಚಿಸಿ, ಕೊನೆಗೂ ಮನೆಯಿಂದ ಸುಮಾರು ವಿದ್ಯಾರ್ಥಿಗಳು ಬೆಂಗಳೂರಿನ ಬೀದಿಗೆ ಇಳಿದೇಬಿಟ್ಟೆವು! ನಮಗೆ ಆ ಕ್ಷಣದಲ್ಲಿ ನಾವು ಮುಖ್ಯ ಆಗಿರ್ಲಿಲ್ಲ. ಸರ್ಕಾರದ ವಿರುದ್ಧ ಹೋರಾಡೋದು ಮುಖ್ಯವಾಗಿತ್ತು. ಅದು ನಮ್ಮ ಸ್ವಾತಂತ್ರ್ಯದ ಪ್ರಶ್ನೆಯಾಗಿತ್ತು. ಮುಂದೊಂದು ದಿನ ನಮ್ಮ ಕಾಲೇಜಿಗೂ ನುಗ್ಗಿ ನಮ್ಮನ್ನೂ ಕೂಡ ನಾಯಿ ತರ ಪೊಅಲೀಸರು ಹೊಡಿಯೋ ಸಂಪೂರ್ಣ ಚಾನ್ಸಸ್ ಇದೆ ಅನ್ನೋದು ನಮ್ಮ ಅರಿವಿಗೆ ಬಂದಾಗಿತ್ತು.

ವಿದ್ಯಾರ್ಥಿಗಳು ತಮ್ಮ ಮೊದಲ ಪ್ರತಿಭಟನೆಯನ್ನ ಎಲ್ಲರ ಜೊತೆಯಲ್ಲೇ 15ರಂದು ನಡೆಸಿದ್ವಿ. ಮನಸ್ಸಿಗೆ ಸಮಾಧಾನ ಇಲ್ಲ. ಅದಾದಮೇಲೆ, 16ಕ್ಕೆ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಕರೆ ಕೊಟ್ಟೆವು. ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಮಾರ್ಚ್ ಮಾಡೋದು ಅಂತ ನಿರ್ಧಾರ ಆಯಿತು. ಆದರೆ, ಈ ಪೊಲೀಸರು ಬಿಡಬೇಕಲ್ಲ! ನಮ್ಮ 9 ಸಂಗಡಿಗರನ್ನ ಒಳಗೆ ಹಾಕಿಬಿಟ್ರು. ನಮ್ಮಲ್ಲಿ ಪ್ರತಿಭಟನೆಗೆ ಮೊದಲ ಬಾರಿಗೆ ಬಂದಿದ್ದ ಕೆಲವರು ಕಂಗಾಲಾಗಿಹೋದರು. ಆದರೆ, ಅಲ್ಲಿಗೆ ಮನದಟ್ಟಾಯಿತು. ನಾವು ಅವರಿಂದ ಓಔಅ ತೊಗೊಂಡ್ರೆನು? ಇಲ್ಲದಿದ್ರೇನು ನಮ್ಮನ್ನ ಒಳಗೆ ಹಾಕೋದು ಗ್ಯಾರೆಂಟಿ! ನಮ್ಮ ಪ್ರತಿಭಟನೆ ಮಾಡೋ ಹುಮ್ಮಸ್ಸು ಇನ್ನೂ ಹೆಚ್ಚಿತು. 20ಕ್ಕೆ ಸೆಕ್ಷನ್ 144 ನಡುವೆಯೂ ಪ್ರತಿಭಟನೆ ನಡೆಸೋದು ಅಂತ ಸಿದ್ಧ ಆಯಿತು!

ನನ್ನ ಪ್ರಕಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಏನಾಯಿತೋ, ಅದು ಒಂದು ರೀತಿಯ ಇತಿಹಾಸ. ಏಕೆಂದರೆ, ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಸಂಘಟನೆಗಳ ಬ್ಯಾನರ್‍ಗಳು ಇಲ್ಲದೇನೇ ಒಟ್ಟಾಗಿ ಮುಂದೆ ಬಂದು ಒಗ್ಗಟ್ಟು ಏನು ಅನ್ನೋದನ್ನ ತೋರಿಸಿದ್ವಿ. ಇಷ್ಟು ವರ್ಷಗಳ ಕಾಲ ಬೆಂಗಳೂರಿನಲ್ಲಿ ನಡೀತಾ ಇದ್ದ “ಕನ್ನಡ ಗೊತ್ತಿಲ್ಲ” ಅನ್ನೋ ಶೋಕಿ ಬಿಟ್ಟು, ಒಟ್ಟಿಗೆ ಸೇರಿ, ಕನ್ನಡದಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ವಿ.
ಅದರಲ್ಲೂ ಹಾಳಾದ್ ಮೀಡಿಯಾ ಒಂದು ಪೋಸ್ಟರ್ ಹಿಡ್ಕೊಂಡು ನಾಯಿ ಬಟ್ಟೆ ಎಳ್ದಾಡಿದ ಹಾಗೆ ನಮ್ಮ ಪ್ರತಿಭಟನೆಯ ಮೌಲ್ಯವನ್ನು ಇಳಿಸಲಿಕ್ಕೆ ಏನೆಲ್ಲಾ ಮಾಡಿದ್ವು!

ಆದರೆ, ಇನ್ನು ಮುಂದೆ ಎಲ್ಲರಿಗೂ ನೆನಪಿರಲಿ, ವಿದ್ಯಾರ್ಥಿಗಳು ಯಾವಾಗ ಎಲ್ಲಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ, ಅವಾಗ ಎಲ್ಲಾ ಸರ್ಕಾರಗಳು ಬಿದ್ದಿವೆ. ಈ ಬಾರಿನೂ ಬೀಳುತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...