Homeಚಳವಳಿಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

- Advertisement -
- Advertisement -

ಎಲ್ಲೋ ಒಂದು ರೀತಿಯ ಭಯ, ಅರೆಸ್ಟ್ ಆದ್ರೆ ಏನ್ ಮಾಡೋದು? ಯಾರು ಹೊರಗೆ ತರ್ತಾರೆ? ಅಪ್ಪನಿಗೆ ಗೊತ್ತಾದ್ರೆ ಚರ್ಮ ಸುಲಿತಾರೆ! ಆದ್ರೆ, ಪ್ರತಿಭಟನೆಗೆ ಹೋಗ್ದೆ ಇದ್ರೆ? ಛೇ!

ಹೀಗೆ ಯೋಚಿಸಿ, ಕೊನೆಗೂ ಮನೆಯಿಂದ ಸುಮಾರು ವಿದ್ಯಾರ್ಥಿಗಳು ಬೆಂಗಳೂರಿನ ಬೀದಿಗೆ ಇಳಿದೇಬಿಟ್ಟೆವು! ನಮಗೆ ಆ ಕ್ಷಣದಲ್ಲಿ ನಾವು ಮುಖ್ಯ ಆಗಿರ್ಲಿಲ್ಲ. ಸರ್ಕಾರದ ವಿರುದ್ಧ ಹೋರಾಡೋದು ಮುಖ್ಯವಾಗಿತ್ತು. ಅದು ನಮ್ಮ ಸ್ವಾತಂತ್ರ್ಯದ ಪ್ರಶ್ನೆಯಾಗಿತ್ತು. ಮುಂದೊಂದು ದಿನ ನಮ್ಮ ಕಾಲೇಜಿಗೂ ನುಗ್ಗಿ ನಮ್ಮನ್ನೂ ಕೂಡ ನಾಯಿ ತರ ಪೊಅಲೀಸರು ಹೊಡಿಯೋ ಸಂಪೂರ್ಣ ಚಾನ್ಸಸ್ ಇದೆ ಅನ್ನೋದು ನಮ್ಮ ಅರಿವಿಗೆ ಬಂದಾಗಿತ್ತು.

ವಿದ್ಯಾರ್ಥಿಗಳು ತಮ್ಮ ಮೊದಲ ಪ್ರತಿಭಟನೆಯನ್ನ ಎಲ್ಲರ ಜೊತೆಯಲ್ಲೇ 15ರಂದು ನಡೆಸಿದ್ವಿ. ಮನಸ್ಸಿಗೆ ಸಮಾಧಾನ ಇಲ್ಲ. ಅದಾದಮೇಲೆ, 16ಕ್ಕೆ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಕರೆ ಕೊಟ್ಟೆವು. ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಮಾರ್ಚ್ ಮಾಡೋದು ಅಂತ ನಿರ್ಧಾರ ಆಯಿತು. ಆದರೆ, ಈ ಪೊಲೀಸರು ಬಿಡಬೇಕಲ್ಲ! ನಮ್ಮ 9 ಸಂಗಡಿಗರನ್ನ ಒಳಗೆ ಹಾಕಿಬಿಟ್ರು. ನಮ್ಮಲ್ಲಿ ಪ್ರತಿಭಟನೆಗೆ ಮೊದಲ ಬಾರಿಗೆ ಬಂದಿದ್ದ ಕೆಲವರು ಕಂಗಾಲಾಗಿಹೋದರು. ಆದರೆ, ಅಲ್ಲಿಗೆ ಮನದಟ್ಟಾಯಿತು. ನಾವು ಅವರಿಂದ ಓಔಅ ತೊಗೊಂಡ್ರೆನು? ಇಲ್ಲದಿದ್ರೇನು ನಮ್ಮನ್ನ ಒಳಗೆ ಹಾಕೋದು ಗ್ಯಾರೆಂಟಿ! ನಮ್ಮ ಪ್ರತಿಭಟನೆ ಮಾಡೋ ಹುಮ್ಮಸ್ಸು ಇನ್ನೂ ಹೆಚ್ಚಿತು. 20ಕ್ಕೆ ಸೆಕ್ಷನ್ 144 ನಡುವೆಯೂ ಪ್ರತಿಭಟನೆ ನಡೆಸೋದು ಅಂತ ಸಿದ್ಧ ಆಯಿತು!

ನನ್ನ ಪ್ರಕಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಏನಾಯಿತೋ, ಅದು ಒಂದು ರೀತಿಯ ಇತಿಹಾಸ. ಏಕೆಂದರೆ, ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಸಂಘಟನೆಗಳ ಬ್ಯಾನರ್‍ಗಳು ಇಲ್ಲದೇನೇ ಒಟ್ಟಾಗಿ ಮುಂದೆ ಬಂದು ಒಗ್ಗಟ್ಟು ಏನು ಅನ್ನೋದನ್ನ ತೋರಿಸಿದ್ವಿ. ಇಷ್ಟು ವರ್ಷಗಳ ಕಾಲ ಬೆಂಗಳೂರಿನಲ್ಲಿ ನಡೀತಾ ಇದ್ದ “ಕನ್ನಡ ಗೊತ್ತಿಲ್ಲ” ಅನ್ನೋ ಶೋಕಿ ಬಿಟ್ಟು, ಒಟ್ಟಿಗೆ ಸೇರಿ, ಕನ್ನಡದಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ವಿ.
ಅದರಲ್ಲೂ ಹಾಳಾದ್ ಮೀಡಿಯಾ ಒಂದು ಪೋಸ್ಟರ್ ಹಿಡ್ಕೊಂಡು ನಾಯಿ ಬಟ್ಟೆ ಎಳ್ದಾಡಿದ ಹಾಗೆ ನಮ್ಮ ಪ್ರತಿಭಟನೆಯ ಮೌಲ್ಯವನ್ನು ಇಳಿಸಲಿಕ್ಕೆ ಏನೆಲ್ಲಾ ಮಾಡಿದ್ವು!

ಆದರೆ, ಇನ್ನು ಮುಂದೆ ಎಲ್ಲರಿಗೂ ನೆನಪಿರಲಿ, ವಿದ್ಯಾರ್ಥಿಗಳು ಯಾವಾಗ ಎಲ್ಲಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ, ಅವಾಗ ಎಲ್ಲಾ ಸರ್ಕಾರಗಳು ಬಿದ್ದಿವೆ. ಈ ಬಾರಿನೂ ಬೀಳುತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...