HomeUncategorizedಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

- Advertisement -
- Advertisement -

ವಾಷಿಂಗ್ಟನ್‌‌ನ ಭಾರತೀಯ ರಾಯಭಾರ ಕಚೇರಿಯ ಮುಂದಿನ ಮಹಾತ್ಮ ಗಾಂಧಿಯ ಪ್ರತಿಮೆಯ ಸುತ್ತಲೂ ಹೆಚ್ಚಿನ ಸಂಖ್ಯೆಯ ಭಾರತೀಯ-ಅಮೆರಿಕನ್ನರು ಜಮಾಯಿಸಿ, ಪೌರತ್ವ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಭಾನುವಾರ (ಡಿಸೆಂಬರ್ 22) ಶಾಂತಿಯುತ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎನ್‌ಆರ್‌ಸಿ ಮತ್ತು ಸಿಎಎ ಎರಡನ್ನೂ ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಕೋರಿ ನಿರ್ಣಯವನ್ನು ಅಂಗೀಕರಿಸಿದರು.

“ನಾವು ಇಲ್ಲಿರುವುದು ಒಂದೇ ಉದ್ದೇಶಕ್ಕಾಗಿ. ಆ ಉದ್ದೇಶ ನಾಗರಿಕ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅದಕ್ಕಿಂತ ಹೆಚ್ಚೇನೂ ಇಲ್ಲ ”ಎಂದು ವಾಷಿಂಗ್ಟನ್ ಮೂಲದ ಸರ್ಕಾರೇತರ ಸಂಸ್ಥೆ ಸೆಂಟರ್ ಫಾರ್ ಪ್ಲುರಲಿಸಂನ ಭಾರತೀಯ-ಅಮೇರಿಕನ್ ಮೈಕ್ ಗೌಸ್ ಸಭೆಯಲ್ಲಿ ಹೇಳಿದರು, ಇದರಲ್ಲಿ ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದ್ದಾರೆ.

“ನಮಗೆ ಬೇಕಾಗಿರುವುದು ಭಾರತೀಯ ಸರ್ಕಾರ ಇತ್ತೀಚೆಗೆ ಜಾರಿಗೆ ಬಂದಿರುವ ಕಾನೂನುಗಳನ್ನು ರದ್ದುಪಡಿಸುವುದು. ಇದರಿಂದ ನಾವೆಲ್ಲರೂ ಒಂದೇ ಭಾರತ, ಒಂದೇ ರಾಷ್ಟ್ರದ ಜನರು ಎಂಬ ಭಾವನೆಯಲ್ಲಿ ದೇವರ ಅಡಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬಹುದು, ಒಟ್ಟಿಗೆ ಬದುಕಬಹುದು ಮತ್ತು ಉದ್ವಿಗ್ನತೆಯ ಚಿಂತೆಯಿಲ್ಲದೆ ಬದುಕುಬಹುದು” ಎಂದು ಗೌಸ್ ಹೇಳಿದರು.

ಸಿಎಎ ಮತ್ತು ಎನ್‌ಆರ್‌ಸಿ ಎರಡೂ ಭಾರತವನ್ನು ರಾಷ್ಟ್ರವಾಗಿ ಹಿಂದುಳಿಸುವ ಸಾಧ್ಯತೆಯಿದೆ. “ಆದ್ದರಿಂದ, ಭಾರತದ ಬಿಜೆಪಿ ಸರ್ಕಾರವು ಈ ಎರಡೂ ಶಾಸನಗಳನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳಬೇಕು ಎಂದು ನಾವು ನಿರ್ಧರಿಸುತ್ತೇವೆ” ಎಂದು ನಿರ್ಣಯದಲ್ಲಿ ಹೇಳಿದೆ. ಅದರ ಪ್ರತಿಯನ್ನು ಭಾರತೀಯ ರಾಯಭಾರ ಕಚೇರಿಗೆ ಸಲ್ಲಿಸಲಾಯಿತು.

“ಈ ಎರಡೂ ಶಾಸನಗಳ ಸಂಭಾವ್ಯ ಅನುಷ್ಠಾನವು ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಗಬಹುದು. ಭಾರತೀಯ ಮುಸ್ಲಿಮರ ಪೌರತ್ವ ಸ್ಥಾನಮಾನವನ್ನು ಕಡಿಮೆ ಮಾಡುತ್ತದೆ. ಜನಾಂಗೀಯ ಮತ್ತು ಧಾರ್ಮಿಕವಾಗಿ ವೈವಿಧ್ಯಮಯ ರಾಜ್ಯಗಳ ಮತ್ತು ಭಾರತದ ಜನರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮತ್ತು ಇತರೆಡೆ ಇತ್ತೀಚೆಗೆ ನಡೆದ ಅವ್ಯವಸ್ಥೆಗೆ ಸಾಕ್ಷಿಯಾಗಿ, ಈ ಕಾಯಿದೆಗಳು ಭಾರತೀಯ ರಾಷ್ಟ್ರ ಮತ್ತು ಭಾರತೀಯ ಜನರಿಗೆ ಹೆಚ್ಚಿನ ಹಾನಿ ಉಂಟುಮಾಡುವ ಸಾಧ್ಯತೆಯಿದೆ ”ಎಂದು ನಿರ್ಣಯ ಹೇಳಿದೆ.

ಸಂಘಟಕರ ಪ್ರಕಾರ, ವಾಷಿಂಗ್ಟನ್‌ನ ಡೌನ್‌ಟೌನ್‌ನಲ್ಲಿರುವ ಗಾಂಧಿ ಪ್ರತಿಮೆ ಎದುರು ಎರಡು ಗಂಟೆಗಳ ಕಾಲ ನಡೆದ ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಜನರು ಭಾರತೀಯ ರಾಯಭಾರ ಕಚೇರಿಯ ಮುಂದೆ ಸೇರಿದ್ದರು.

“ಭಾರತದ ಆರ್ಥಿಕತೆಯು ಹೆಚ್ಚು ಕುಸಿದಿರುವ ಸಮಯದಲ್ಲಿ, ನಿರುದ್ಯೋಗ ಹೆಚ್ಚುತ್ತಿದೆ. ಕಾನೂನುಬಾಹಿರತೆ ವ್ಯಾಪಕವಾಗಿದೆ ಮತ್ತು ಸಾರ್ವಜನಿಕ ಭ್ರಷ್ಟಾಚಾರ ಹೆಚ್ಚಾಗಿದೆ. ಈ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಕೆಲಸ ಮಾಡುವ ಬದಲು ವಿಚಿತ್ರ ನೀತಿಗಳನ್ನು ರೂಪಿಸುತ್ತಿದೆ, ಅದು ಭಾರತೀಯರನ್ನು ದೇಶದ ನಾಗರಿಕರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿದೆ” ಎಂದು ರ್‍ಯಾಲಿ ಎಗೇನ್ಸ್ಟ್ ಎನ್ಆರ್ಸಿ, ಸಿಎಎಯ ಸಂಯೋಜಕರಾದ ಕಲೀಮ್ ಕವಾಜಾ ಹೇಳಿದ್ದಾರೆ.

ಅಲ್ಲದೆ ಜರ್ಮನಿಯ ಬರ್ಲಿನ್, ಆಸ್ಟ್ರೇಲಿಯಾದ ಮೆಲ್ಬೋರ್ನ್‌, ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಸಿಯಾಟಲ್‌ಗಳಲ್ಲಿಯು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...