HomeUncategorizedಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

- Advertisement -
- Advertisement -

ವಾಷಿಂಗ್ಟನ್‌‌ನ ಭಾರತೀಯ ರಾಯಭಾರ ಕಚೇರಿಯ ಮುಂದಿನ ಮಹಾತ್ಮ ಗಾಂಧಿಯ ಪ್ರತಿಮೆಯ ಸುತ್ತಲೂ ಹೆಚ್ಚಿನ ಸಂಖ್ಯೆಯ ಭಾರತೀಯ-ಅಮೆರಿಕನ್ನರು ಜಮಾಯಿಸಿ, ಪೌರತ್ವ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಭಾನುವಾರ (ಡಿಸೆಂಬರ್ 22) ಶಾಂತಿಯುತ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎನ್‌ಆರ್‌ಸಿ ಮತ್ತು ಸಿಎಎ ಎರಡನ್ನೂ ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಕೋರಿ ನಿರ್ಣಯವನ್ನು ಅಂಗೀಕರಿಸಿದರು.

“ನಾವು ಇಲ್ಲಿರುವುದು ಒಂದೇ ಉದ್ದೇಶಕ್ಕಾಗಿ. ಆ ಉದ್ದೇಶ ನಾಗರಿಕ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅದಕ್ಕಿಂತ ಹೆಚ್ಚೇನೂ ಇಲ್ಲ ”ಎಂದು ವಾಷಿಂಗ್ಟನ್ ಮೂಲದ ಸರ್ಕಾರೇತರ ಸಂಸ್ಥೆ ಸೆಂಟರ್ ಫಾರ್ ಪ್ಲುರಲಿಸಂನ ಭಾರತೀಯ-ಅಮೇರಿಕನ್ ಮೈಕ್ ಗೌಸ್ ಸಭೆಯಲ್ಲಿ ಹೇಳಿದರು, ಇದರಲ್ಲಿ ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದ್ದಾರೆ.

“ನಮಗೆ ಬೇಕಾಗಿರುವುದು ಭಾರತೀಯ ಸರ್ಕಾರ ಇತ್ತೀಚೆಗೆ ಜಾರಿಗೆ ಬಂದಿರುವ ಕಾನೂನುಗಳನ್ನು ರದ್ದುಪಡಿಸುವುದು. ಇದರಿಂದ ನಾವೆಲ್ಲರೂ ಒಂದೇ ಭಾರತ, ಒಂದೇ ರಾಷ್ಟ್ರದ ಜನರು ಎಂಬ ಭಾವನೆಯಲ್ಲಿ ದೇವರ ಅಡಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬಹುದು, ಒಟ್ಟಿಗೆ ಬದುಕಬಹುದು ಮತ್ತು ಉದ್ವಿಗ್ನತೆಯ ಚಿಂತೆಯಿಲ್ಲದೆ ಬದುಕುಬಹುದು” ಎಂದು ಗೌಸ್ ಹೇಳಿದರು.

ಸಿಎಎ ಮತ್ತು ಎನ್‌ಆರ್‌ಸಿ ಎರಡೂ ಭಾರತವನ್ನು ರಾಷ್ಟ್ರವಾಗಿ ಹಿಂದುಳಿಸುವ ಸಾಧ್ಯತೆಯಿದೆ. “ಆದ್ದರಿಂದ, ಭಾರತದ ಬಿಜೆಪಿ ಸರ್ಕಾರವು ಈ ಎರಡೂ ಶಾಸನಗಳನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳಬೇಕು ಎಂದು ನಾವು ನಿರ್ಧರಿಸುತ್ತೇವೆ” ಎಂದು ನಿರ್ಣಯದಲ್ಲಿ ಹೇಳಿದೆ. ಅದರ ಪ್ರತಿಯನ್ನು ಭಾರತೀಯ ರಾಯಭಾರ ಕಚೇರಿಗೆ ಸಲ್ಲಿಸಲಾಯಿತು.

“ಈ ಎರಡೂ ಶಾಸನಗಳ ಸಂಭಾವ್ಯ ಅನುಷ್ಠಾನವು ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಗಬಹುದು. ಭಾರತೀಯ ಮುಸ್ಲಿಮರ ಪೌರತ್ವ ಸ್ಥಾನಮಾನವನ್ನು ಕಡಿಮೆ ಮಾಡುತ್ತದೆ. ಜನಾಂಗೀಯ ಮತ್ತು ಧಾರ್ಮಿಕವಾಗಿ ವೈವಿಧ್ಯಮಯ ರಾಜ್ಯಗಳ ಮತ್ತು ಭಾರತದ ಜನರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮತ್ತು ಇತರೆಡೆ ಇತ್ತೀಚೆಗೆ ನಡೆದ ಅವ್ಯವಸ್ಥೆಗೆ ಸಾಕ್ಷಿಯಾಗಿ, ಈ ಕಾಯಿದೆಗಳು ಭಾರತೀಯ ರಾಷ್ಟ್ರ ಮತ್ತು ಭಾರತೀಯ ಜನರಿಗೆ ಹೆಚ್ಚಿನ ಹಾನಿ ಉಂಟುಮಾಡುವ ಸಾಧ್ಯತೆಯಿದೆ ”ಎಂದು ನಿರ್ಣಯ ಹೇಳಿದೆ.

ಸಂಘಟಕರ ಪ್ರಕಾರ, ವಾಷಿಂಗ್ಟನ್‌ನ ಡೌನ್‌ಟೌನ್‌ನಲ್ಲಿರುವ ಗಾಂಧಿ ಪ್ರತಿಮೆ ಎದುರು ಎರಡು ಗಂಟೆಗಳ ಕಾಲ ನಡೆದ ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಜನರು ಭಾರತೀಯ ರಾಯಭಾರ ಕಚೇರಿಯ ಮುಂದೆ ಸೇರಿದ್ದರು.

“ಭಾರತದ ಆರ್ಥಿಕತೆಯು ಹೆಚ್ಚು ಕುಸಿದಿರುವ ಸಮಯದಲ್ಲಿ, ನಿರುದ್ಯೋಗ ಹೆಚ್ಚುತ್ತಿದೆ. ಕಾನೂನುಬಾಹಿರತೆ ವ್ಯಾಪಕವಾಗಿದೆ ಮತ್ತು ಸಾರ್ವಜನಿಕ ಭ್ರಷ್ಟಾಚಾರ ಹೆಚ್ಚಾಗಿದೆ. ಈ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಕೆಲಸ ಮಾಡುವ ಬದಲು ವಿಚಿತ್ರ ನೀತಿಗಳನ್ನು ರೂಪಿಸುತ್ತಿದೆ, ಅದು ಭಾರತೀಯರನ್ನು ದೇಶದ ನಾಗರಿಕರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿದೆ” ಎಂದು ರ್‍ಯಾಲಿ ಎಗೇನ್ಸ್ಟ್ ಎನ್ಆರ್ಸಿ, ಸಿಎಎಯ ಸಂಯೋಜಕರಾದ ಕಲೀಮ್ ಕವಾಜಾ ಹೇಳಿದ್ದಾರೆ.

ಅಲ್ಲದೆ ಜರ್ಮನಿಯ ಬರ್ಲಿನ್, ಆಸ್ಟ್ರೇಲಿಯಾದ ಮೆಲ್ಬೋರ್ನ್‌, ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಸಿಯಾಟಲ್‌ಗಳಲ್ಲಿಯು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...