HomeUncategorizedಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ವಾಷಿಂಗ್ಟನ್‌ನಲ್ಲಿ ಭಾರೀ ಪ್ರತಿಭಟನೆ: ಜರ್ಮನಿ, ಆಸ್ಟ್ರೇಲಿಯಾದಲ್ಲಿಯೂ ವಿರೋಧ

- Advertisement -
- Advertisement -

ವಾಷಿಂಗ್ಟನ್‌‌ನ ಭಾರತೀಯ ರಾಯಭಾರ ಕಚೇರಿಯ ಮುಂದಿನ ಮಹಾತ್ಮ ಗಾಂಧಿಯ ಪ್ರತಿಮೆಯ ಸುತ್ತಲೂ ಹೆಚ್ಚಿನ ಸಂಖ್ಯೆಯ ಭಾರತೀಯ-ಅಮೆರಿಕನ್ನರು ಜಮಾಯಿಸಿ, ಪೌರತ್ವ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಭಾನುವಾರ (ಡಿಸೆಂಬರ್ 22) ಶಾಂತಿಯುತ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎನ್‌ಆರ್‌ಸಿ ಮತ್ತು ಸಿಎಎ ಎರಡನ್ನೂ ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಕೋರಿ ನಿರ್ಣಯವನ್ನು ಅಂಗೀಕರಿಸಿದರು.

“ನಾವು ಇಲ್ಲಿರುವುದು ಒಂದೇ ಉದ್ದೇಶಕ್ಕಾಗಿ. ಆ ಉದ್ದೇಶ ನಾಗರಿಕ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅದಕ್ಕಿಂತ ಹೆಚ್ಚೇನೂ ಇಲ್ಲ ”ಎಂದು ವಾಷಿಂಗ್ಟನ್ ಮೂಲದ ಸರ್ಕಾರೇತರ ಸಂಸ್ಥೆ ಸೆಂಟರ್ ಫಾರ್ ಪ್ಲುರಲಿಸಂನ ಭಾರತೀಯ-ಅಮೇರಿಕನ್ ಮೈಕ್ ಗೌಸ್ ಸಭೆಯಲ್ಲಿ ಹೇಳಿದರು, ಇದರಲ್ಲಿ ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದ್ದಾರೆ.

“ನಮಗೆ ಬೇಕಾಗಿರುವುದು ಭಾರತೀಯ ಸರ್ಕಾರ ಇತ್ತೀಚೆಗೆ ಜಾರಿಗೆ ಬಂದಿರುವ ಕಾನೂನುಗಳನ್ನು ರದ್ದುಪಡಿಸುವುದು. ಇದರಿಂದ ನಾವೆಲ್ಲರೂ ಒಂದೇ ಭಾರತ, ಒಂದೇ ರಾಷ್ಟ್ರದ ಜನರು ಎಂಬ ಭಾವನೆಯಲ್ಲಿ ದೇವರ ಅಡಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬಹುದು, ಒಟ್ಟಿಗೆ ಬದುಕಬಹುದು ಮತ್ತು ಉದ್ವಿಗ್ನತೆಯ ಚಿಂತೆಯಿಲ್ಲದೆ ಬದುಕುಬಹುದು” ಎಂದು ಗೌಸ್ ಹೇಳಿದರು.

ಸಿಎಎ ಮತ್ತು ಎನ್‌ಆರ್‌ಸಿ ಎರಡೂ ಭಾರತವನ್ನು ರಾಷ್ಟ್ರವಾಗಿ ಹಿಂದುಳಿಸುವ ಸಾಧ್ಯತೆಯಿದೆ. “ಆದ್ದರಿಂದ, ಭಾರತದ ಬಿಜೆಪಿ ಸರ್ಕಾರವು ಈ ಎರಡೂ ಶಾಸನಗಳನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳಬೇಕು ಎಂದು ನಾವು ನಿರ್ಧರಿಸುತ್ತೇವೆ” ಎಂದು ನಿರ್ಣಯದಲ್ಲಿ ಹೇಳಿದೆ. ಅದರ ಪ್ರತಿಯನ್ನು ಭಾರತೀಯ ರಾಯಭಾರ ಕಚೇರಿಗೆ ಸಲ್ಲಿಸಲಾಯಿತು.

“ಈ ಎರಡೂ ಶಾಸನಗಳ ಸಂಭಾವ್ಯ ಅನುಷ್ಠಾನವು ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಗಬಹುದು. ಭಾರತೀಯ ಮುಸ್ಲಿಮರ ಪೌರತ್ವ ಸ್ಥಾನಮಾನವನ್ನು ಕಡಿಮೆ ಮಾಡುತ್ತದೆ. ಜನಾಂಗೀಯ ಮತ್ತು ಧಾರ್ಮಿಕವಾಗಿ ವೈವಿಧ್ಯಮಯ ರಾಜ್ಯಗಳ ಮತ್ತು ಭಾರತದ ಜನರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮತ್ತು ಇತರೆಡೆ ಇತ್ತೀಚೆಗೆ ನಡೆದ ಅವ್ಯವಸ್ಥೆಗೆ ಸಾಕ್ಷಿಯಾಗಿ, ಈ ಕಾಯಿದೆಗಳು ಭಾರತೀಯ ರಾಷ್ಟ್ರ ಮತ್ತು ಭಾರತೀಯ ಜನರಿಗೆ ಹೆಚ್ಚಿನ ಹಾನಿ ಉಂಟುಮಾಡುವ ಸಾಧ್ಯತೆಯಿದೆ ”ಎಂದು ನಿರ್ಣಯ ಹೇಳಿದೆ.

ಸಂಘಟಕರ ಪ್ರಕಾರ, ವಾಷಿಂಗ್ಟನ್‌ನ ಡೌನ್‌ಟೌನ್‌ನಲ್ಲಿರುವ ಗಾಂಧಿ ಪ್ರತಿಮೆ ಎದುರು ಎರಡು ಗಂಟೆಗಳ ಕಾಲ ನಡೆದ ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಜನರು ಭಾರತೀಯ ರಾಯಭಾರ ಕಚೇರಿಯ ಮುಂದೆ ಸೇರಿದ್ದರು.

“ಭಾರತದ ಆರ್ಥಿಕತೆಯು ಹೆಚ್ಚು ಕುಸಿದಿರುವ ಸಮಯದಲ್ಲಿ, ನಿರುದ್ಯೋಗ ಹೆಚ್ಚುತ್ತಿದೆ. ಕಾನೂನುಬಾಹಿರತೆ ವ್ಯಾಪಕವಾಗಿದೆ ಮತ್ತು ಸಾರ್ವಜನಿಕ ಭ್ರಷ್ಟಾಚಾರ ಹೆಚ್ಚಾಗಿದೆ. ಈ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಕೆಲಸ ಮಾಡುವ ಬದಲು ವಿಚಿತ್ರ ನೀತಿಗಳನ್ನು ರೂಪಿಸುತ್ತಿದೆ, ಅದು ಭಾರತೀಯರನ್ನು ದೇಶದ ನಾಗರಿಕರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿದೆ” ಎಂದು ರ್‍ಯಾಲಿ ಎಗೇನ್ಸ್ಟ್ ಎನ್ಆರ್ಸಿ, ಸಿಎಎಯ ಸಂಯೋಜಕರಾದ ಕಲೀಮ್ ಕವಾಜಾ ಹೇಳಿದ್ದಾರೆ.

ಅಲ್ಲದೆ ಜರ್ಮನಿಯ ಬರ್ಲಿನ್, ಆಸ್ಟ್ರೇಲಿಯಾದ ಮೆಲ್ಬೋರ್ನ್‌, ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಸಿಯಾಟಲ್‌ಗಳಲ್ಲಿಯು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...