Homeಚಳವಳಿರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಪ್ರಕರಣದಲ್ಲಿಇನ್ನು ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಂತರ ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ಗೊಗೋಯ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಗೊಗೋಯ್‌ರವರ ಭಾಷಣವು ಭಾವನಾತ್ಮಕವಾಗಿತ್ತು ಆದರೆ ಅದು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು ಮೇಲ್ನೋಟಕ್ಕೆ ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

30,000 ರೂಪಾಯಿ ಶ್ಯೂರಿಟಿ, ಸಾಕ್ಷ್ಯಗಳನ್ನು ಹಾಳು ಮಾಡದಿರುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು ಮುಂತಾದ ಷರತ್ತುಗಳ ಮೇಲೆ ಎನ್ಐಎ ವಿಶೇಷ ನ್ಯಾಯಾಧೀಶ ಪ್ರಂಜಲ್ ದಾಸ್ ಜಾಮೀನು ನೀಡಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಎನ್ಐಎ ಪ್ರಕರಣದಲ್ಲಿಇನ್ನೂ ಜಾಮೀನು ಸಿಗದೆ ಇರುವ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

“ಚಾಬುವಾದಲ್ಲಿ ದಾಖಲಾದ ಎನ್‌ಐಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗೊಗೊಯ್‌ಗೆ ಜಾಮೀನು ನೀಡಿದೆ. ಆದರೆ ಈ ವರ್ಷದ ಆಗಸ್ಟ್‌ನಲ್ಲಿ ಚಾಂದಮರಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆ ಪ್ರಕರಣದ ಜಾಮೀನು ಅರ್ಜಿ ಅಕ್ಟೋಬರ್ 13 ರಂದು ವಿಚಾರಣೆಗೆ ಬರಲಿದೆ ”ಎಂದು ಗೊಗೋಯ್ ಪರ ವಕೀಲ ಸಂತನು ಬರ್ತಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಸಿಎಎ ವಿರೋಧಿ ಹೋರಾಟದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ನಾಯಕ ಗೊಗೋಯ್ ಅವರನ್ನು ಕಳೆದ ವರ್ಷ ಡಿಸೆಂಬರ್ 12 ರಂದು ಜೊರ್‌ಹಾಟ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಎನ್ಐಎಗೆ ಹಸ್ತಾಂತರಿಸಲಾಯಿತು ಮತ್ತು ಎನ್‌ಐಎ ನ್ಯಾಯಾಲಯವು ಡಿಸೆಂಬರ್ 17 ರಂದು 10 ದಿನಗಳ ಕಸ್ಟಡಿಗೆ ನೀಡಿದ್ದು. ಅದೇ ದಿನ ವಿಚಾರಣೆಗಾಗಿ ಅವರನ್ನು ನವದೆಹಲಿಗೆ ಕರೆದೊಯ್ಯಲಾಗಿತ್ತು.

ಗೊಗೊಯ್ ಅವರನ್ನು ಡಿಸೆಂಬರ್ 25 ರಂದು ಮತ್ತೆ ಗುವಾಹಟಿಗೆ ಕರೆತರಲಾಗಿತ್ತು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಅಸ್ಸಾಂ ಪೊಲೀಸರು ಸಲ್ಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದರು


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...