Homeಮುಖಪುಟಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯ ಪರಿಹಾರವಾಗಿ ಹೋರಾಟಗಾರರಿಂದ ವಸೂಲಿ ಮಾಡಿದ್ದ ಕೋಟ್ಯಾಂತರ ರೂಪಾಯಿಯನ್ನು ಮರುಪಾವತಿ ಮಾಡಬೇಕು ಎಂದು ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದೇ ವೇಳೆ ಈ ಪ್ರತಿಭಟನೆ ವೇಳೆ ಉಂಟಾದ ಹಾನಿಯ ವಸೂಲಾತಿಗಾಗಿ ನೀಡಲಾಗಿದ್ದ 274 ನೋಟಿಸ್‌ಗಳನ್ನು ಹಿಂಪಡೆದಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧದ ಆಪಾದಿತ ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ಧ ಹೊಸ ಕಾನೂನಿನ ಅಡಿಯಲ್ಲಿ ಮುಂದುವರಿಯಲು ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಈ ಕಾನೂನಿನ ಅಡಿಯಲ್ಲಿ ರಚಿಸಲಾದ ನ್ಯಾಯಮಂಡಳಿಗಳು ಅಂತಹ ವಿಷಯಗಳನ್ನು ನೋಡಿಕೊಳ್ಳುತ್ತವೆ ಎಂದು ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ತಿಳಿಸಿದ್ದಾರೆ.

ನ್ಯಾಯಮೂರ್ತಿಗಳ ಪೀಠ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರ ಪೀಠ, 2019 ರಲ್ಲಿ ನಡೆದ ಗಲಭೆಯ ಆಪಾದಿತ ಪ್ರತಿಭಟನಾಕಾರರಿಂದ ವಸೂಲಿಯಾದ ಕೋಟ್ಯಂತರ ರೂಪಾಯಿ ಮೌಲ್ಯದ ಸಂಪೂರ್ಣ ಮೊತ್ತವನ್ನು ರಾಜ್ಯ ಸರ್ಕಾರ ಮರುಪಾವತಿ ಮಾಡಬೇಕು ಎಂದು ಆದೇಶಿಸಿದೆ.

ಇದನ್ನೂ ಓದಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ಫೆಬ್ರವರಿ 11 ರಂದು, ಆಪಾದಿತ ಪ್ರತಿಭಟನಾಕಾರರಿಂದ ಆಸ್ತಿ ಜಪ್ತಿ ಮಾಡುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಯತ್ನಿಸಿರುವುದನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.

“ಈ ಸಂಬಂಧ ಪ್ರಕ್ರಿಯೆಯನ್ನು  ಹಿಂಪಡೆಯಲು ರಾಜ್ಯಕ್ಕೆ ಒಂದು ಅಂತಿಮ ಅವಕಾಶವನ್ನು ನೀಡಲಾಗುವುದು. ಅಥವಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು. ನೀವು ಕಾನೂನಿನ ಅಡಿಯಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಬೇಕು. ದಯವಿಟ್ಟು ಇದನ್ನು ಪರಿಶೀಲಿಸಿ, ನಾವು ಫೆಬ್ರವರಿ 18 ರವರೆಗೆ ಒಂದು ಅವಕಾಶವನ್ನು ನೀಡುತ್ತೇವೆ” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

’ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಸುತ್ತಾ ಉತ್ತರ ಪ್ರದೇಶ ಸರ್ಕಾರವು “ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್” ಎಲ್ಲವೂ ಆಗಿ ವರ್ತಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಆಕ್ಷೇಪ ವ್ಯಕ್ತಪಡಿಸಿತ್ತು.

ಯುಪಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಆಂದೋಲನದ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಜಿಲ್ಲಾಡಳಿತವು ಆಪಾದಿತ ಪ್ರತಿಭಟನಾಕಾರರಿಗೆ ಕಳುಹಿಸಲಾದ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪರ್ವೇಜ್ ಆರೀಫ್ ಟಿಟು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮನವಿಯಲ್ಲಿ ಆರು ವರ್ಷಗಳ ಹಿಂದೆ 94 ನೇ ವಯಸ್ಸಿನಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಮತ್ತು 90 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಸೇರಿದಂತೆ ಇತರ ಹಲವರಿಗೆ ಇಂತಹ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...