Homeಮುಖಪುಟಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ...

ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

- Advertisement -
- Advertisement -

ಸಿಎಎ ವಿರೋಧಿ ಆಂದೋಲನದ ವೇಳೆ ನಡೆದ ಹಿಂಸಾಚಾರದಲ್ಲಿ ಅಸ್ಸಾಂನ ರೈಜೋರ್ ದಳ ಪಕ್ಷದ ಶಾಸಕ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಕೈವಾಡವಿದೆ ಎಂದು ಅವರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯವು ಕಠಿಣ ಯುಎಪಿಎ ಮತ್ತು ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಮಂಗಳವಾರ ಆರೋಪಗಳನ್ನು ದಾಖಲಿಸಿದೆ. ಸಿಎಎ ವಿರೋಧಿ ಪ್ರತಿಭಟನೆ 

NIA ವಿಶೇಷ ನ್ಯಾಯಾಧೀಶ ಎಸ್‌.ಕೆ. ಶರ್ಮಾ ಅವರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 18 (ಪಿತೂರಿ) ಮತ್ತು IPC ಸೆಕ್ಷನ್‌ಗಳಾದ 120B (ಅಪರಾಧದ ಪಿತೂರಿ), 153A (ಹಗೆತನದ ಪ್ರಚಾರ), ಮತ್ತು 153B (ರಾಷ್ಟ್ರೀಯ ಏಕೀಕರಣಕ್ಕೆ ಅಪಾಯ) ಅಡಿಯಲ್ಲಿ ಗೊಗೋಯ್ ವಿರುದ್ಧ ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅವರ ವಕೀಲ ಸಾಂತನು ಬೋರ್ತಕೂರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮತ್ತೊಂದೆಡೆ, ಅಖಿಲ್ ಅವರ ಸಹಚರರಾದ ಧೈಜ್ಯಾ ಕೊನ್ವರ್, ಬಿಟ್ಟು ಸೋನೊವಾಲ್ ಮತ್ತು ಮನಶ್ ಕೊನ್ವರ್ ವಿರುದ್ಧ ಯುಎಪಿಎ ಸೆಕ್ಷನ್ 18 ಮತ್ತು ಐಪಿಸಿಯ 120 ಬಿ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

NIA ತನ್ನ ಚಾರ್ಜ್ ಶೀಟ್‌ನಲ್ಲಿ ಅಖಿಲ್ ವಿರುದ್ಧ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿದ್ದಾರೆ ಮತ್ತು ದೇಶದ್ರೋಹ ಮಾಡಿದ್ದಾರೆ ಎಂದು UAPA ಸೆಕ್ಷನ್ 39 ಮತ್ತು  IPC ಸೆಕ್ಷನ್ 124A (ದೇಶದ್ರೋಹ) ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಿಎಎ ವಿರೋಧಿ ಪ್ರತಿಭಟನೆ

ಇದಕ್ಕೆ ಪ್ರತಿಕ್ರಿಯಿಸಿದ ಗೊಗೊಯ್, “ನಾವು ಜನರೊಂದಿಗೆ ಇದ್ದೇವೆ ಎಂಬುದನ್ನು ಇದು ಮತ್ತೊಮ್ಮೆ ಸಾಬೀತುಪಡಿಸುತ್ತದೆ. ಈ ಸರ್ಕಾರವು ನಮ್ಮನ್ನು ಜೈಲಿನೊಳಗೆ ಇರಿಸಲು ಬಯಸುತ್ತದೆ. ಫ್ಯಾಸಿಸ್ಟ್ ಮತ್ತು ಕೋಮುವಾದಿ ಸರ್ಕಾರದ ವಿರುದ್ಧದ ಹೋರಾಟವು ತುಂಬಾ ಕಷ್ಟಕರವಾಗಿದ್ದು, ದುಬಾರಿ ವ್ಯವಹಾರವಾಗಿದೆ.” ಎಂದು ಹೇಳಿದ್ದಾರೆ.

ನಾವು ನಾಲ್ವರೂ ನಮ್ಮ ವಿರುದ್ಧ ಆರೋಪಗಳನ್ನು ರೂಪಿಸುವುದರ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಮೊರೆ ಹೋಗಲಿದ್ದೇವೆ ಎಂದು ಅಖಿಲ್ ಗೊಗೋಯ್ ಅವರು ಹೇಳಿದ್ದಾರೆ.

ಡಿಸೆಂಬರ್ 2019 ರಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಪಾತ್ರ ಇದೆ ಎಂದು ಎನ್‌ಐಎ 2 ಪ್ರಕರಣಗಳನ್ನು ದಾಖಲಿಸಿದ್ದು, ಅವರ ವಿರುದ್ಧ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...