Homeಚಳವಳಿ2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

- Advertisement -
- Advertisement -

2021ನೇ ವರ್ಷ ದೇಶದ ಚಲನಚಿತ್ರೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಈ ವರ್ಷ ಅತಿ ಹೆಚ್ಚು ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಈ ಕುರಿತು ಚಿಂತೆಗೆ ಹಚ್ಚುವ ಚಲನಚಿತ್ರಗಳು ಬಿಡುಗಡೆಯಾಗಿವೆ.

ಈ ಚಿತ್ರಗಳು ಕೇವಲ ಜನಮಾನಸದಲ್ಲಿ ನೆಲೆಗೊಳ್ಳದೆ, ಬಾಕ್ಸ್ ಆಫೀಸ್‌ನಲ್ಲೂ ಕಮಾಲ್ ಮಾಡಿವೆ. ಒಂದರ ನಂತರ ಒಂದರಂತೆ ಬಿಡುಗಡೆಯಾದ ಚಿತ್ರಗಳು ಪ್ರಶಸ್ತಿಗಳನ್ನು ಬಾಚಿಕೊಳ್ಳುವುದರಲ್ಲಿ ಹಿಂದೆ ಉಳಿಯಲಿಲ್ಲ. ತಮಿಳು, ಮರಾಠಿ, ತೆಲುಗು, ಹಿಂದಿ ಭಾಷೆಗಳಲ್ಲಿ ಅತಿ ಹೆಚ್ಚು ಚಿತ್ರಗಳು ಬಿಡುಗಡೆಯಾದವು.

ಕರ್ಣನ್‌, ಲವ್ ಸ್ಟೋರಿ, ಉಪ್ಪೇನಾ, ಸಾರ್ಪಟ್ಟ ಪರಂಪರೈ, ಶ್ರೀದೇವಿ ಸೋಡಾ ಸೆಂಟರ್‌, ಜಯಂತಿ ಸೇರಿದಂತೆ ಹಲವು ಚಿತ್ರಗಳು ಜಾತಿ ದೌರ್ಜನ್ಯದ ಬಗ್ಗೆ ಚಿಂತನೆ ಮಾಡುವಂತೆ ಮಾಡಿವೆ. ನೋಡುಗರಲ್ಲಿ ಹೊಸ ದೃಷ್ಟಿಕೋನವನ್ನು ಬಿತ್ತುವ ಕೆಲಸ ಮಾಡಿವೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

ಈ ವರ್ಷದ ಜಾತಿ, ಸಾಮಾಜಿಕ ದೌರ್ಜನ್ಯವನ್ನು ವಿರೋಧಿಸಿದ, ಪ್ರಶ್ನಿಸಿದ, ಪ್ರತಿರೋಧಿಸಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ.

1.ಕರ್ಣನ್- ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಮಾರಿ ಸೆಲ್ವರಾಜ್ ನಿರ್ದೇಶನದ ನಟ ಧನುಷ್ ಅಭಿನಯದ ’ಕರ್ಣನ್’ ಘನತೆಗಾಗಿ ತಳ ಸಮುದಾಯದ ಪ್ರತಿರೋಧವನ್ನು ಗಟ್ಟಿಯಾಗಿ ಕಟ್ಟಿಕೊಟ್ಟ ಚಿತ್ರ. ಹೆದ್ದಾರಿಯಿಂದ ದೂರವಿರುವ ಒಂದು ಜಾಗವನ್ನು ತಮ್ಮದಾಗಿಸಿಕೊಂಡು, ತಮ್ಮ ಪೂರ್ವಜರ ಹೆಸರುಗಳನ್ನು ಬದಲಿಸಿಕೊಂಡು ಘನತೆಯಿಂದ ಬದುಕಲು ಪ್ರಯತ್ನಿಸುತ್ತಿರುವ ಊರು ಪೊಡಿಯಾಂಗುಳಂ. ಈ ಊರಿನ ಜನರ ಮೇಲೆ ಪಕ್ಕದ ಮೇಲ್ಜಾತಿಯ ಊರಿನವರಿನವರು ಮತ್ತು ಸಮಾಜದ ಅಸಹನೆ, ದಲಿತರ ಪ್ರತಿರೋಧದ ಚಿತ್ರಣವನ್ನು ನಿರ್ದೇಶಕ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಇನ್ನೋವೇಟಿವ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಚಲನಚಿತ್ರ ಪ್ರಶಸ್ತಿಯನ್ನು ಕರ್ಣನ್ ಗೆದ್ದುಕೊಂಡಿದೆ.

2. ಉಪ್ಪೇನಾ – ತೆಲುಗು ( ನೆಟ್‌ಫ್ಲಿಕ್ಸ್)

ಬುಚ್ಚಿ ಬಾಬು ಸಾನಾ ನಿರ್ದೇಶನದ ಉಪ್ಪೇನಾ ಸಿನಿಮಾ ದಲಿತ ಕ್ರಿಶ್ಚಿಯನ್ ಮೀನುಗಾರ ಮತ್ತು ‘ಮೇಲ್ಜಾತಿ’ ಹಿಂದೂ ಯುವತಿಯ ಅಂತರ್ಜಾತಿ ಪ್ರೇಮಕಥೆಯನ್ನು ಹೊಂದಿದೆ. ಪ್ರಭಾವಿ ಜಮೀನ್ದಾರ ತನ್ನ ಜಾತಿಯ ಗೌರವವನ್ನು ಕಾಪಾಡಲು ಪ್ರೇಮಿಗಳನ್ನು ದೂರ ಮಾಡಲು ನಡೆಸುವ ಕೆಟ್ಟ ಪ್ರಯತ್ನಗಳನ್ನು ಈ ಸಿನಿಮಾ ಕಟ್ಟಿ ಕೊಡುತ್ತದೆ.

ಈ ಚಿತ್ರವು 2021 ರಲ್ಲಿ ದೊಡ್ಡ ಓಪನಿಂಗ್ಸ್ ಗಳಿಸಿತು. ಹೊಸಕಲಾವಿದರಾದ ವೈಷ್ಣವ್ ತೇಜ್ ಮತ್ತು ಕೃತಿ ಶೆಟ್ಟಿಗೆ ಅಪಾರ ಜನ ಮನ್ನಣೆ ದೊರಕುವಂತೆ ಮಾಡಿತು. ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಕರ್ಣನ್ ಸಿನಿಮಾ ವಿಮರ್ಶೆ-2; ದೃಶ್ಯರೂಪಕಗಳೊಂದಿಗೆ ಕಾವ್ಯಾತ್ಮಕವಾಗಿರುವ ಪ್ರತಿರೋಧದ ಕಥೆ

3. ಸಾರ್ಪಟ್ಟ ಪರಂಪರೈ -ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಪಾ.ರಂಜಿತ್ ಅವರ ಸಾರ್ಪಟ್ಟ ಪರಂಬರೈ ತಮಿಳು ಭಾಷೆಯ ಕ್ರೀಡಾ ಸಾಹಸ ಚಲನಚಿತ್ರವಾಗಿದ್ದು, ದಲಿತ ಬಾಕ್ಸರ್‌ನ ಘನತೆ ಮತ್ತು ಸ್ವಾಭಿಮಾನದ ಚಿತ್ರವಾಗಿ ಮುಖ್ಯವಾಗುತ್ತದೆ. ಚಿತ್ರದಲ್ಲಿ ಆರ್ಯ, ಜಾನ್ ಕೊಕ್ಕೆನ್, ಶಬೀರ್ ಕಲ್ಲರಕ್ಕಲ್, ದುಶಾರ ವಿಜಯನ್, ಪಶುಪತಿ, ಅನುಪಮಾ ಕುಮಾರ್ ಮತ್ತು ಸಂಚನಾ ನಟರಾಜನ್ ನಟಿಸಿದ್ದಾರೆ. 1970ರ ದಶಕದಲ್ಲಿ ನಡೆದ ಉತ್ತರ ಚೆನ್ನೈನ ಇಡಿಯಪ್ಪ ಪರಂಬರೈ ಮತ್ತು ಸಾರ್ಪಟ್ಟ ಪರಂಬರೈ ಎಂಬ ಎರಡು ಕುಲಗಳ ನಡುವಿನ ಘರ್ಷಣೆಯ ಸುತ್ತ ಸುತ್ತುತ್ತದೆ. ಇದು ಸ್ಥಳೀಯ ಬಾಕ್ಸಿಂಗ್ ಸಂಸ್ಕೃತಿಯನ್ನು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವ ರಾಜಕೀಯವನ್ನು ತೋರಿಸುತ್ತದೆ.

ಈ ಚಿತ್ರ ನ್ಯೂಯಾರ್ಕ್ ಟೈಮ್ಸ್ ‘ಒಟಿಟಿಯಲ್ಲಿ ನೋಡಲೇಬೇಕಾದ ಅಂತರರಾಷ್ಟ್ರೀಯ ಚಲನಚಿತ್ರಗಳ’ ಪಟ್ಟಿಯಲ್ಲಿ ವಿಶೇಷ ಉಲ್ಲೇಖ ಪಡೆಯಿತು.

4. ಜಯಂತಿ- ಮರಾಠಿ

ನವೆಂಬರ್‌ನಲ್ಲಿ ಬಿಡುಗಡೆಯಾದ ಮರಾಠಿ ಚಿತ್ರ ಜಯಂತಿ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಅಂಬೇಡ್ಕರ್, ಫುಲೆ ಮತ್ತು ಶಿವಾಜಿ ಮಹಾರಾಜರ ಜೀವನ ಮತ್ತು ಕೃತಿಗಳನ್ನು ಓದಿದಾಗ ಕಥಾ ನಾಯಕ ಸಂತ್ಯಾ ಅನ್ಯಾಯದ ವಿರುದ್ಧ ಹೋರಾಡುವವನಾಗಿ ರೂಪಗೊಳ್ಳುವುದನ್ನು ಚಿತ್ರಿಸಿದೆ. ಚಿತ್ರವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಕೃತಿಯಾದ ಹೂ ವರ್ ದಿ ಶೂದ್ರಸ್ ಅನ್ನು ಉಲ್ಲೇಖಿಸುತ್ತದೆ ಎಂದು ಚಿತ್ರ ತಂಡ ತಿಳಿಸಿದೆ.

5. ಲವ್‌ ಸ್ಟೋರಿ – ತೆಲುಗು

 ಬಹುತೇಕ ಜಡ್ಡುಗಟ್ಟಿದ ಫ್ಯೂಡಲ್ ತೆಲುಗು ಚಿತ್ರ ರಂಗದಲ್ಲಿ ಶೇಖರ್ ಕಮ್ಮುಲ ತಮ್ಮ ’ಲವ್ ಸ್ಟೋರಿ’ ಸಿನಿಮಾ ಮೂಲಕ ತೆಲುಗು ಸಿನಿಮಾ ಪ್ರೇಕ್ಷಕರಿಗೆ ಹೊಸ ಕಣ್ಣೋಟವೊಂದನ್ನು ನೀಡಿದ್ದಾರೆ. ಲವ್ ಸ್ಟೋರಿ ಸಿನಿಮಾದಲ್ಲಿ ಎರಡು ಸಂಗತಿಗಳನ್ನು ಸಮಾನಾಂತರವಾಗಿ ಕಟ್ಟಿಕೊಡಲು ಪ್ರಯತ್ನಿಸಲಾಗಿದೆ. ಒಂದು ನಮ್ಮ ಸಮಾಜದಲ್ಲಿರುವ ಜಾತಿ ವ್ಯವಸ್ಥೆ. ಮತ್ತೊಂದು ಫ್ಯೂಡಲ್ ಜಾತಿಯ ಪುರುಷ ಪ್ರಧಾನ ಕೌಟಂಬಿಕ ವ್ಯವಸ್ಥೆ ಒಳಗೆ ಹೆಣ್ಣಿನ ಬಗೆಗಿನ ದೃಷ್ಟಿಕೋನ. ದಲಿತ ಸಮುದಾಯದ ರೇವಂತ್ ಕಥಾನಾಯಕ, ಫ್ಯೂಡಲ್ ಸಮುದಾಯದ ಮೊನಿಕಾ ನಾಯಕಿ, ಕಥಾನಾಯಕನ ತಾಯಿ ಮನಮ್ಮ ಮತ್ತು ಕಥಾನಾಯಕಿಯ ಚಿಕ್ಕಪ್ಪ ನರಸಿಂಹಂ. ಈ ನಾಲ್ಕು ಪ್ರಧಾನ ಪಾತ್ರಗಳು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

6. ಜೈ ಭೀಮ್- ಐದು ಭಾಷೆಗಳು (ಅಮೆಜಾನ್ ಪ್ರೈಂ ವಿಡಿಯೋ)

ಜೈ ಭೀಮ್ ಒಂದು ನೈಜ ಘಟನೆಯನ್ನಾಧರಿಸಿದ ಚಿತ್ರ. 1990ರ ದಶಕದಲ್ಲಿ ತಮಿಳುನಾಡಿನಲ್ಲಿ ನಡೆದ ಈ ಘಟನೆಯಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಇಮ್ಮಡಿಗೊಳಿಸುವ ರೀತಿಯಲ್ಲಿ ತುಳಿತಕ್ಕೊಳಗಾದ, ದಮನಿತ ಜನಸಮುದಾಯಗಳಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಕೀಲ ಮತ್ತು ಇರುಳ್ ಸಮುದಾಯದ ಕಥೆ ಇದಾಗಿದೆ.

ತಾನು ಮಾಡದ ಕಳ್ಳತನದ ಆರೋಪಕ್ಕೆ ಸಿಲುಕಿ ಪೊಲೀಸರಿಂದ ಬಂಧನಕ್ಕೊಳಗಾಗುವ ರಾಜಕಣ್ಣು ಮತ್ತು ಅವನ ಸಹಚರರು ಪೊಲೀಸ್ ಠಾಣೆಯಲ್ಲಿ ಅನುಭವಿಸುವ ದೈಹಿಕ ಹಿಂಸೆ, ದೌರ್ಜನ್ಯ ಮತ್ತು ಈ ಅಮಾಯಕ ಆದಿವಾಸಿಗಳ ಮೇಲೆ ಪೊಲೀಸರು ನಡೆಸುವ ದೈಹಿಕ ಆಕ್ರಮಣ ನೋಡುಗರ ಎದೆನಡುಗಿಸುತ್ತದೆ. ಆತನ ಪತ್ನಿ ಸೆಂಗಣಿ ಗರ್ಭಿಣಿಯಾಗಿದ್ದರೂ ಪೊಲೀಸರಿಂದ ಅನುಭವಿಸುವ ಚಿತ್ರಹಿಂಸೆ ಪ್ರೇಕ್ಷಕರ ಎದೆಗೆ ನಾಟುವಂತಿದೆ. 

ಈ ವರ್ಷ ಅತಿ ಹೆಚ್ಚು ವೀಕ್ಷಣೆಗೆ ಒಳಗಾದ, ಹೆಚ್ಚು ಚರ್ಚೆಗೆ ಒಳಗಾದ ಚಿತ್ರ ಇದಾಗಿದೆ. IMDB ರೇಟಿಂಗ್‌ನಲ್ಲಿ ಎಲ್ಲಾ ದಾಖಲೆಗಳನ್ನು ಈ ಚಿತ್ರ ಸರಿಗಟ್ಟಿದೆ.

7. ಗಿಲಿ ಪುಚ್ಚಿ (ಅಜೀಬ್ ದಾಸ್ತಾನ್ಸ್ )- ಹಿಂದಿ ( ನೆಟ್‌ಫ್ಲಿಕ್ಸ್)

ನೀರಜ್ ಘಯ್ವಾನ್ ಅವರ ಅಜೀಬ್ ದಾಸ್ತಾನ್ಸ್ ಶಾರ್ಟ್ ಸ್ಟೋರಿಸ್‌ಗಳಲ್ಲಿ ಗೀಲಿ ಪುಚ್ಚಿಯಲ್ಲಿ ದಲಿತ ಮಹಿಳೆ ಕೆಲಸದ ಸ್ಥಳದಲ್ಲಿ ತಾನು ಬಯಸಿದ ಕೆಲಸ ಪಡೆದುಕೊಳ್ಳಲು ನಡೆಸುವ ಕಸರತ್ತು ಮತ್ತು ಮೇಲ್ಜಾತಿ ಮಹಿಳೆಯೊಂದಿಗಿನ ಸ್ನೇಹದ ಕುರಿತು ಚಿತ್ರ ಮಾತಾಡುತ್ತದೆ. ದಲಿತ ಮಹಿಳೆ ಪಾತ್ರವನ್ನು ನಿರ್ವಹಿಸಿದ್ದ ಕೊಂಕಣ ಸೇನ್ ಶರ್ಮಾಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

8. ಶ್ರೀದೇವಿ ಸೋಡಾ ಸೆಂಟರ್‌- ತೆಲುಗು (ಝೀ5)

’ಶ್ರೀದೇವಿ ಸೋಡಾ ಸೆಂಟರ್’ ನಾಗೇಂದ್ರ ಕಾಸಿ ಚಿತ್ರಕತೆಯ, ಕರುಣಾ ಕುಮಾರ್ ನಿದೇಶನದ ಚಿತ್ರ. ಚಿತ್ರದಲ್ಲಿ ಸುಧೀರ್ ಬಾಬು ಮತ್ತು ಆನಂದಿ ನಟಿಸಿದರೆ ನರೇಶ್ ಮತ್ತು ಸತ್ಯಂ ರಾಜೇಶ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಲೈಟಿಂಗ್ ಕೆಲಸ ಮಾಡುವ ಸೂರಿ ಬಾಬು ಮತ್ತು ಸೋಡಾ ಅಂಗಡಿ ನಡೆಸುವ ಶ್ರೀದೇವಿಯ ಅಂತರ್ಜಾತಿ ಪ್ರೇಮಕಥೆ ಚಿತ್ರದಲ್ಲಿದ್ದು, ಅಂತರ್‌ಜಾತಿ ಅವನು ಪ್ರೀತಿಯಲ್ಲಿ ಬೀಳುತ್ತಾನೆ. ತಮ್ಮ ಪ್ರೀತಿಯನ್ನು ಗೆಲ್ಲುವ ಹೋರಾಟ, ಸಮಾಜದಲ್ಲಿರುವ ಜಾತಿ ವ್ಯವಸ್ಥೆಯ ಚಿತ್ರಣವನ್ನು ಕಟ್ಟಿ ಕೊಡಲಾಗಿದೆ.

ಈ ಸಿನಿಮಾಗಳು ಚಿತ್ರೋದ್ಯಮದಲ್ಲಿ ಹೊಸ ಅಲೆಯನ್ನು ಮೂಡಿಸುವ ಜೊತೆಗೆ ಸಿನಿ ಪ್ರೇಕ್ಷಕರನ್ನು ಚಿಂತನೆಗೂ ಹಚ್ಚಿದೆ. ಕನ್ನಡ, ಮಲಯಾಳಂ, ಹಿಂದಿ ಸಿನಿಮೋದ್ಯಮದಲ್ಲೂ ಇಂತಹ ಚಿತ್ರಗಳ ಸಂಖ್ಯೆ ಹೆಚ್ಚಲಿ, ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಜಾತಿ ದೌರ್ಜನ್ಯ ವಿರೋಧಿ ಚಿತ್ರಗಳು ಹೊರ ಬರಲಿ ಎನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜದಲ್ಲಿ ಬದಲಾವಣೆ ಆದಾಗ ಮಾತ್ರ ಸಮಾನತೆ ಸ್ವಾತಂತ್ರ್ಯ ಸಹಬಾಳ್ವೆ ಇಂದ ಬದುಕ ಬಹುದು…

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...