Homeಚಳವಳಿ2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

- Advertisement -
- Advertisement -

2021ನೇ ವರ್ಷ ದೇಶದ ಚಲನಚಿತ್ರೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಈ ವರ್ಷ ಅತಿ ಹೆಚ್ಚು ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಈ ಕುರಿತು ಚಿಂತೆಗೆ ಹಚ್ಚುವ ಚಲನಚಿತ್ರಗಳು ಬಿಡುಗಡೆಯಾಗಿವೆ.

ಈ ಚಿತ್ರಗಳು ಕೇವಲ ಜನಮಾನಸದಲ್ಲಿ ನೆಲೆಗೊಳ್ಳದೆ, ಬಾಕ್ಸ್ ಆಫೀಸ್‌ನಲ್ಲೂ ಕಮಾಲ್ ಮಾಡಿವೆ. ಒಂದರ ನಂತರ ಒಂದರಂತೆ ಬಿಡುಗಡೆಯಾದ ಚಿತ್ರಗಳು ಪ್ರಶಸ್ತಿಗಳನ್ನು ಬಾಚಿಕೊಳ್ಳುವುದರಲ್ಲಿ ಹಿಂದೆ ಉಳಿಯಲಿಲ್ಲ. ತಮಿಳು, ಮರಾಠಿ, ತೆಲುಗು, ಹಿಂದಿ ಭಾಷೆಗಳಲ್ಲಿ ಅತಿ ಹೆಚ್ಚು ಚಿತ್ರಗಳು ಬಿಡುಗಡೆಯಾದವು.

ಕರ್ಣನ್‌, ಲವ್ ಸ್ಟೋರಿ, ಉಪ್ಪೇನಾ, ಸಾರ್ಪಟ್ಟ ಪರಂಪರೈ, ಶ್ರೀದೇವಿ ಸೋಡಾ ಸೆಂಟರ್‌, ಜಯಂತಿ ಸೇರಿದಂತೆ ಹಲವು ಚಿತ್ರಗಳು ಜಾತಿ ದೌರ್ಜನ್ಯದ ಬಗ್ಗೆ ಚಿಂತನೆ ಮಾಡುವಂತೆ ಮಾಡಿವೆ. ನೋಡುಗರಲ್ಲಿ ಹೊಸ ದೃಷ್ಟಿಕೋನವನ್ನು ಬಿತ್ತುವ ಕೆಲಸ ಮಾಡಿವೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

ಈ ವರ್ಷದ ಜಾತಿ, ಸಾಮಾಜಿಕ ದೌರ್ಜನ್ಯವನ್ನು ವಿರೋಧಿಸಿದ, ಪ್ರಶ್ನಿಸಿದ, ಪ್ರತಿರೋಧಿಸಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ.

1.ಕರ್ಣನ್- ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಮಾರಿ ಸೆಲ್ವರಾಜ್ ನಿರ್ದೇಶನದ ನಟ ಧನುಷ್ ಅಭಿನಯದ ’ಕರ್ಣನ್’ ಘನತೆಗಾಗಿ ತಳ ಸಮುದಾಯದ ಪ್ರತಿರೋಧವನ್ನು ಗಟ್ಟಿಯಾಗಿ ಕಟ್ಟಿಕೊಟ್ಟ ಚಿತ್ರ. ಹೆದ್ದಾರಿಯಿಂದ ದೂರವಿರುವ ಒಂದು ಜಾಗವನ್ನು ತಮ್ಮದಾಗಿಸಿಕೊಂಡು, ತಮ್ಮ ಪೂರ್ವಜರ ಹೆಸರುಗಳನ್ನು ಬದಲಿಸಿಕೊಂಡು ಘನತೆಯಿಂದ ಬದುಕಲು ಪ್ರಯತ್ನಿಸುತ್ತಿರುವ ಊರು ಪೊಡಿಯಾಂಗುಳಂ. ಈ ಊರಿನ ಜನರ ಮೇಲೆ ಪಕ್ಕದ ಮೇಲ್ಜಾತಿಯ ಊರಿನವರಿನವರು ಮತ್ತು ಸಮಾಜದ ಅಸಹನೆ, ದಲಿತರ ಪ್ರತಿರೋಧದ ಚಿತ್ರಣವನ್ನು ನಿರ್ದೇಶಕ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಇನ್ನೋವೇಟಿವ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಚಲನಚಿತ್ರ ಪ್ರಶಸ್ತಿಯನ್ನು ಕರ್ಣನ್ ಗೆದ್ದುಕೊಂಡಿದೆ.

2. ಉಪ್ಪೇನಾ – ತೆಲುಗು ( ನೆಟ್‌ಫ್ಲಿಕ್ಸ್)

ಬುಚ್ಚಿ ಬಾಬು ಸಾನಾ ನಿರ್ದೇಶನದ ಉಪ್ಪೇನಾ ಸಿನಿಮಾ ದಲಿತ ಕ್ರಿಶ್ಚಿಯನ್ ಮೀನುಗಾರ ಮತ್ತು ‘ಮೇಲ್ಜಾತಿ’ ಹಿಂದೂ ಯುವತಿಯ ಅಂತರ್ಜಾತಿ ಪ್ರೇಮಕಥೆಯನ್ನು ಹೊಂದಿದೆ. ಪ್ರಭಾವಿ ಜಮೀನ್ದಾರ ತನ್ನ ಜಾತಿಯ ಗೌರವವನ್ನು ಕಾಪಾಡಲು ಪ್ರೇಮಿಗಳನ್ನು ದೂರ ಮಾಡಲು ನಡೆಸುವ ಕೆಟ್ಟ ಪ್ರಯತ್ನಗಳನ್ನು ಈ ಸಿನಿಮಾ ಕಟ್ಟಿ ಕೊಡುತ್ತದೆ.

ಈ ಚಿತ್ರವು 2021 ರಲ್ಲಿ ದೊಡ್ಡ ಓಪನಿಂಗ್ಸ್ ಗಳಿಸಿತು. ಹೊಸಕಲಾವಿದರಾದ ವೈಷ್ಣವ್ ತೇಜ್ ಮತ್ತು ಕೃತಿ ಶೆಟ್ಟಿಗೆ ಅಪಾರ ಜನ ಮನ್ನಣೆ ದೊರಕುವಂತೆ ಮಾಡಿತು. ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಕರ್ಣನ್ ಸಿನಿಮಾ ವಿಮರ್ಶೆ-2; ದೃಶ್ಯರೂಪಕಗಳೊಂದಿಗೆ ಕಾವ್ಯಾತ್ಮಕವಾಗಿರುವ ಪ್ರತಿರೋಧದ ಕಥೆ

3. ಸಾರ್ಪಟ್ಟ ಪರಂಪರೈ -ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಪಾ.ರಂಜಿತ್ ಅವರ ಸಾರ್ಪಟ್ಟ ಪರಂಬರೈ ತಮಿಳು ಭಾಷೆಯ ಕ್ರೀಡಾ ಸಾಹಸ ಚಲನಚಿತ್ರವಾಗಿದ್ದು, ದಲಿತ ಬಾಕ್ಸರ್‌ನ ಘನತೆ ಮತ್ತು ಸ್ವಾಭಿಮಾನದ ಚಿತ್ರವಾಗಿ ಮುಖ್ಯವಾಗುತ್ತದೆ. ಚಿತ್ರದಲ್ಲಿ ಆರ್ಯ, ಜಾನ್ ಕೊಕ್ಕೆನ್, ಶಬೀರ್ ಕಲ್ಲರಕ್ಕಲ್, ದುಶಾರ ವಿಜಯನ್, ಪಶುಪತಿ, ಅನುಪಮಾ ಕುಮಾರ್ ಮತ್ತು ಸಂಚನಾ ನಟರಾಜನ್ ನಟಿಸಿದ್ದಾರೆ. 1970ರ ದಶಕದಲ್ಲಿ ನಡೆದ ಉತ್ತರ ಚೆನ್ನೈನ ಇಡಿಯಪ್ಪ ಪರಂಬರೈ ಮತ್ತು ಸಾರ್ಪಟ್ಟ ಪರಂಬರೈ ಎಂಬ ಎರಡು ಕುಲಗಳ ನಡುವಿನ ಘರ್ಷಣೆಯ ಸುತ್ತ ಸುತ್ತುತ್ತದೆ. ಇದು ಸ್ಥಳೀಯ ಬಾಕ್ಸಿಂಗ್ ಸಂಸ್ಕೃತಿಯನ್ನು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವ ರಾಜಕೀಯವನ್ನು ತೋರಿಸುತ್ತದೆ.

ಈ ಚಿತ್ರ ನ್ಯೂಯಾರ್ಕ್ ಟೈಮ್ಸ್ ‘ಒಟಿಟಿಯಲ್ಲಿ ನೋಡಲೇಬೇಕಾದ ಅಂತರರಾಷ್ಟ್ರೀಯ ಚಲನಚಿತ್ರಗಳ’ ಪಟ್ಟಿಯಲ್ಲಿ ವಿಶೇಷ ಉಲ್ಲೇಖ ಪಡೆಯಿತು.

4. ಜಯಂತಿ- ಮರಾಠಿ

ನವೆಂಬರ್‌ನಲ್ಲಿ ಬಿಡುಗಡೆಯಾದ ಮರಾಠಿ ಚಿತ್ರ ಜಯಂತಿ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಅಂಬೇಡ್ಕರ್, ಫುಲೆ ಮತ್ತು ಶಿವಾಜಿ ಮಹಾರಾಜರ ಜೀವನ ಮತ್ತು ಕೃತಿಗಳನ್ನು ಓದಿದಾಗ ಕಥಾ ನಾಯಕ ಸಂತ್ಯಾ ಅನ್ಯಾಯದ ವಿರುದ್ಧ ಹೋರಾಡುವವನಾಗಿ ರೂಪಗೊಳ್ಳುವುದನ್ನು ಚಿತ್ರಿಸಿದೆ. ಚಿತ್ರವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಕೃತಿಯಾದ ಹೂ ವರ್ ದಿ ಶೂದ್ರಸ್ ಅನ್ನು ಉಲ್ಲೇಖಿಸುತ್ತದೆ ಎಂದು ಚಿತ್ರ ತಂಡ ತಿಳಿಸಿದೆ.

5. ಲವ್‌ ಸ್ಟೋರಿ – ತೆಲುಗು

 ಬಹುತೇಕ ಜಡ್ಡುಗಟ್ಟಿದ ಫ್ಯೂಡಲ್ ತೆಲುಗು ಚಿತ್ರ ರಂಗದಲ್ಲಿ ಶೇಖರ್ ಕಮ್ಮುಲ ತಮ್ಮ ’ಲವ್ ಸ್ಟೋರಿ’ ಸಿನಿಮಾ ಮೂಲಕ ತೆಲುಗು ಸಿನಿಮಾ ಪ್ರೇಕ್ಷಕರಿಗೆ ಹೊಸ ಕಣ್ಣೋಟವೊಂದನ್ನು ನೀಡಿದ್ದಾರೆ. ಲವ್ ಸ್ಟೋರಿ ಸಿನಿಮಾದಲ್ಲಿ ಎರಡು ಸಂಗತಿಗಳನ್ನು ಸಮಾನಾಂತರವಾಗಿ ಕಟ್ಟಿಕೊಡಲು ಪ್ರಯತ್ನಿಸಲಾಗಿದೆ. ಒಂದು ನಮ್ಮ ಸಮಾಜದಲ್ಲಿರುವ ಜಾತಿ ವ್ಯವಸ್ಥೆ. ಮತ್ತೊಂದು ಫ್ಯೂಡಲ್ ಜಾತಿಯ ಪುರುಷ ಪ್ರಧಾನ ಕೌಟಂಬಿಕ ವ್ಯವಸ್ಥೆ ಒಳಗೆ ಹೆಣ್ಣಿನ ಬಗೆಗಿನ ದೃಷ್ಟಿಕೋನ. ದಲಿತ ಸಮುದಾಯದ ರೇವಂತ್ ಕಥಾನಾಯಕ, ಫ್ಯೂಡಲ್ ಸಮುದಾಯದ ಮೊನಿಕಾ ನಾಯಕಿ, ಕಥಾನಾಯಕನ ತಾಯಿ ಮನಮ್ಮ ಮತ್ತು ಕಥಾನಾಯಕಿಯ ಚಿಕ್ಕಪ್ಪ ನರಸಿಂಹಂ. ಈ ನಾಲ್ಕು ಪ್ರಧಾನ ಪಾತ್ರಗಳು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

6. ಜೈ ಭೀಮ್- ಐದು ಭಾಷೆಗಳು (ಅಮೆಜಾನ್ ಪ್ರೈಂ ವಿಡಿಯೋ)

ಜೈ ಭೀಮ್ ಒಂದು ನೈಜ ಘಟನೆಯನ್ನಾಧರಿಸಿದ ಚಿತ್ರ. 1990ರ ದಶಕದಲ್ಲಿ ತಮಿಳುನಾಡಿನಲ್ಲಿ ನಡೆದ ಈ ಘಟನೆಯಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಇಮ್ಮಡಿಗೊಳಿಸುವ ರೀತಿಯಲ್ಲಿ ತುಳಿತಕ್ಕೊಳಗಾದ, ದಮನಿತ ಜನಸಮುದಾಯಗಳಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಕೀಲ ಮತ್ತು ಇರುಳ್ ಸಮುದಾಯದ ಕಥೆ ಇದಾಗಿದೆ.

ತಾನು ಮಾಡದ ಕಳ್ಳತನದ ಆರೋಪಕ್ಕೆ ಸಿಲುಕಿ ಪೊಲೀಸರಿಂದ ಬಂಧನಕ್ಕೊಳಗಾಗುವ ರಾಜಕಣ್ಣು ಮತ್ತು ಅವನ ಸಹಚರರು ಪೊಲೀಸ್ ಠಾಣೆಯಲ್ಲಿ ಅನುಭವಿಸುವ ದೈಹಿಕ ಹಿಂಸೆ, ದೌರ್ಜನ್ಯ ಮತ್ತು ಈ ಅಮಾಯಕ ಆದಿವಾಸಿಗಳ ಮೇಲೆ ಪೊಲೀಸರು ನಡೆಸುವ ದೈಹಿಕ ಆಕ್ರಮಣ ನೋಡುಗರ ಎದೆನಡುಗಿಸುತ್ತದೆ. ಆತನ ಪತ್ನಿ ಸೆಂಗಣಿ ಗರ್ಭಿಣಿಯಾಗಿದ್ದರೂ ಪೊಲೀಸರಿಂದ ಅನುಭವಿಸುವ ಚಿತ್ರಹಿಂಸೆ ಪ್ರೇಕ್ಷಕರ ಎದೆಗೆ ನಾಟುವಂತಿದೆ. 

ಈ ವರ್ಷ ಅತಿ ಹೆಚ್ಚು ವೀಕ್ಷಣೆಗೆ ಒಳಗಾದ, ಹೆಚ್ಚು ಚರ್ಚೆಗೆ ಒಳಗಾದ ಚಿತ್ರ ಇದಾಗಿದೆ. IMDB ರೇಟಿಂಗ್‌ನಲ್ಲಿ ಎಲ್ಲಾ ದಾಖಲೆಗಳನ್ನು ಈ ಚಿತ್ರ ಸರಿಗಟ್ಟಿದೆ.

7. ಗಿಲಿ ಪುಚ್ಚಿ (ಅಜೀಬ್ ದಾಸ್ತಾನ್ಸ್ )- ಹಿಂದಿ ( ನೆಟ್‌ಫ್ಲಿಕ್ಸ್)

ನೀರಜ್ ಘಯ್ವಾನ್ ಅವರ ಅಜೀಬ್ ದಾಸ್ತಾನ್ಸ್ ಶಾರ್ಟ್ ಸ್ಟೋರಿಸ್‌ಗಳಲ್ಲಿ ಗೀಲಿ ಪುಚ್ಚಿಯಲ್ಲಿ ದಲಿತ ಮಹಿಳೆ ಕೆಲಸದ ಸ್ಥಳದಲ್ಲಿ ತಾನು ಬಯಸಿದ ಕೆಲಸ ಪಡೆದುಕೊಳ್ಳಲು ನಡೆಸುವ ಕಸರತ್ತು ಮತ್ತು ಮೇಲ್ಜಾತಿ ಮಹಿಳೆಯೊಂದಿಗಿನ ಸ್ನೇಹದ ಕುರಿತು ಚಿತ್ರ ಮಾತಾಡುತ್ತದೆ. ದಲಿತ ಮಹಿಳೆ ಪಾತ್ರವನ್ನು ನಿರ್ವಹಿಸಿದ್ದ ಕೊಂಕಣ ಸೇನ್ ಶರ್ಮಾಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

8. ಶ್ರೀದೇವಿ ಸೋಡಾ ಸೆಂಟರ್‌- ತೆಲುಗು (ಝೀ5)

’ಶ್ರೀದೇವಿ ಸೋಡಾ ಸೆಂಟರ್’ ನಾಗೇಂದ್ರ ಕಾಸಿ ಚಿತ್ರಕತೆಯ, ಕರುಣಾ ಕುಮಾರ್ ನಿದೇಶನದ ಚಿತ್ರ. ಚಿತ್ರದಲ್ಲಿ ಸುಧೀರ್ ಬಾಬು ಮತ್ತು ಆನಂದಿ ನಟಿಸಿದರೆ ನರೇಶ್ ಮತ್ತು ಸತ್ಯಂ ರಾಜೇಶ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಲೈಟಿಂಗ್ ಕೆಲಸ ಮಾಡುವ ಸೂರಿ ಬಾಬು ಮತ್ತು ಸೋಡಾ ಅಂಗಡಿ ನಡೆಸುವ ಶ್ರೀದೇವಿಯ ಅಂತರ್ಜಾತಿ ಪ್ರೇಮಕಥೆ ಚಿತ್ರದಲ್ಲಿದ್ದು, ಅಂತರ್‌ಜಾತಿ ಅವನು ಪ್ರೀತಿಯಲ್ಲಿ ಬೀಳುತ್ತಾನೆ. ತಮ್ಮ ಪ್ರೀತಿಯನ್ನು ಗೆಲ್ಲುವ ಹೋರಾಟ, ಸಮಾಜದಲ್ಲಿರುವ ಜಾತಿ ವ್ಯವಸ್ಥೆಯ ಚಿತ್ರಣವನ್ನು ಕಟ್ಟಿ ಕೊಡಲಾಗಿದೆ.

ಈ ಸಿನಿಮಾಗಳು ಚಿತ್ರೋದ್ಯಮದಲ್ಲಿ ಹೊಸ ಅಲೆಯನ್ನು ಮೂಡಿಸುವ ಜೊತೆಗೆ ಸಿನಿ ಪ್ರೇಕ್ಷಕರನ್ನು ಚಿಂತನೆಗೂ ಹಚ್ಚಿದೆ. ಕನ್ನಡ, ಮಲಯಾಳಂ, ಹಿಂದಿ ಸಿನಿಮೋದ್ಯಮದಲ್ಲೂ ಇಂತಹ ಚಿತ್ರಗಳ ಸಂಖ್ಯೆ ಹೆಚ್ಚಲಿ, ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಜಾತಿ ದೌರ್ಜನ್ಯ ವಿರೋಧಿ ಚಿತ್ರಗಳು ಹೊರ ಬರಲಿ ಎನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜದಲ್ಲಿ ಬದಲಾವಣೆ ಆದಾಗ ಮಾತ್ರ ಸಮಾನತೆ ಸ್ವಾತಂತ್ರ್ಯ ಸಹಬಾಳ್ವೆ ಇಂದ ಬದುಕ ಬಹುದು…

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...