Homeಚಳವಳಿ2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

- Advertisement -
- Advertisement -

2021ನೇ ವರ್ಷ ದೇಶದ ಚಲನಚಿತ್ರೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಈ ವರ್ಷ ಅತಿ ಹೆಚ್ಚು ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಈ ಕುರಿತು ಚಿಂತೆಗೆ ಹಚ್ಚುವ ಚಲನಚಿತ್ರಗಳು ಬಿಡುಗಡೆಯಾಗಿವೆ.

ಈ ಚಿತ್ರಗಳು ಕೇವಲ ಜನಮಾನಸದಲ್ಲಿ ನೆಲೆಗೊಳ್ಳದೆ, ಬಾಕ್ಸ್ ಆಫೀಸ್‌ನಲ್ಲೂ ಕಮಾಲ್ ಮಾಡಿವೆ. ಒಂದರ ನಂತರ ಒಂದರಂತೆ ಬಿಡುಗಡೆಯಾದ ಚಿತ್ರಗಳು ಪ್ರಶಸ್ತಿಗಳನ್ನು ಬಾಚಿಕೊಳ್ಳುವುದರಲ್ಲಿ ಹಿಂದೆ ಉಳಿಯಲಿಲ್ಲ. ತಮಿಳು, ಮರಾಠಿ, ತೆಲುಗು, ಹಿಂದಿ ಭಾಷೆಗಳಲ್ಲಿ ಅತಿ ಹೆಚ್ಚು ಚಿತ್ರಗಳು ಬಿಡುಗಡೆಯಾದವು.

ಕರ್ಣನ್‌, ಲವ್ ಸ್ಟೋರಿ, ಉಪ್ಪೇನಾ, ಸಾರ್ಪಟ್ಟ ಪರಂಪರೈ, ಶ್ರೀದೇವಿ ಸೋಡಾ ಸೆಂಟರ್‌, ಜಯಂತಿ ಸೇರಿದಂತೆ ಹಲವು ಚಿತ್ರಗಳು ಜಾತಿ ದೌರ್ಜನ್ಯದ ಬಗ್ಗೆ ಚಿಂತನೆ ಮಾಡುವಂತೆ ಮಾಡಿವೆ. ನೋಡುಗರಲ್ಲಿ ಹೊಸ ದೃಷ್ಟಿಕೋನವನ್ನು ಬಿತ್ತುವ ಕೆಲಸ ಮಾಡಿವೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

ಈ ವರ್ಷದ ಜಾತಿ, ಸಾಮಾಜಿಕ ದೌರ್ಜನ್ಯವನ್ನು ವಿರೋಧಿಸಿದ, ಪ್ರಶ್ನಿಸಿದ, ಪ್ರತಿರೋಧಿಸಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ.

1.ಕರ್ಣನ್- ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಮಾರಿ ಸೆಲ್ವರಾಜ್ ನಿರ್ದೇಶನದ ನಟ ಧನುಷ್ ಅಭಿನಯದ ’ಕರ್ಣನ್’ ಘನತೆಗಾಗಿ ತಳ ಸಮುದಾಯದ ಪ್ರತಿರೋಧವನ್ನು ಗಟ್ಟಿಯಾಗಿ ಕಟ್ಟಿಕೊಟ್ಟ ಚಿತ್ರ. ಹೆದ್ದಾರಿಯಿಂದ ದೂರವಿರುವ ಒಂದು ಜಾಗವನ್ನು ತಮ್ಮದಾಗಿಸಿಕೊಂಡು, ತಮ್ಮ ಪೂರ್ವಜರ ಹೆಸರುಗಳನ್ನು ಬದಲಿಸಿಕೊಂಡು ಘನತೆಯಿಂದ ಬದುಕಲು ಪ್ರಯತ್ನಿಸುತ್ತಿರುವ ಊರು ಪೊಡಿಯಾಂಗುಳಂ. ಈ ಊರಿನ ಜನರ ಮೇಲೆ ಪಕ್ಕದ ಮೇಲ್ಜಾತಿಯ ಊರಿನವರಿನವರು ಮತ್ತು ಸಮಾಜದ ಅಸಹನೆ, ದಲಿತರ ಪ್ರತಿರೋಧದ ಚಿತ್ರಣವನ್ನು ನಿರ್ದೇಶಕ ಕಟ್ಟಿಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಇನ್ನೋವೇಟಿವ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಚಲನಚಿತ್ರ ಪ್ರಶಸ್ತಿಯನ್ನು ಕರ್ಣನ್ ಗೆದ್ದುಕೊಂಡಿದೆ.

2. ಉಪ್ಪೇನಾ – ತೆಲುಗು ( ನೆಟ್‌ಫ್ಲಿಕ್ಸ್)

ಬುಚ್ಚಿ ಬಾಬು ಸಾನಾ ನಿರ್ದೇಶನದ ಉಪ್ಪೇನಾ ಸಿನಿಮಾ ದಲಿತ ಕ್ರಿಶ್ಚಿಯನ್ ಮೀನುಗಾರ ಮತ್ತು ‘ಮೇಲ್ಜಾತಿ’ ಹಿಂದೂ ಯುವತಿಯ ಅಂತರ್ಜಾತಿ ಪ್ರೇಮಕಥೆಯನ್ನು ಹೊಂದಿದೆ. ಪ್ರಭಾವಿ ಜಮೀನ್ದಾರ ತನ್ನ ಜಾತಿಯ ಗೌರವವನ್ನು ಕಾಪಾಡಲು ಪ್ರೇಮಿಗಳನ್ನು ದೂರ ಮಾಡಲು ನಡೆಸುವ ಕೆಟ್ಟ ಪ್ರಯತ್ನಗಳನ್ನು ಈ ಸಿನಿಮಾ ಕಟ್ಟಿ ಕೊಡುತ್ತದೆ.

ಈ ಚಿತ್ರವು 2021 ರಲ್ಲಿ ದೊಡ್ಡ ಓಪನಿಂಗ್ಸ್ ಗಳಿಸಿತು. ಹೊಸಕಲಾವಿದರಾದ ವೈಷ್ಣವ್ ತೇಜ್ ಮತ್ತು ಕೃತಿ ಶೆಟ್ಟಿಗೆ ಅಪಾರ ಜನ ಮನ್ನಣೆ ದೊರಕುವಂತೆ ಮಾಡಿತು. ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಕರ್ಣನ್ ಸಿನಿಮಾ ವಿಮರ್ಶೆ-2; ದೃಶ್ಯರೂಪಕಗಳೊಂದಿಗೆ ಕಾವ್ಯಾತ್ಮಕವಾಗಿರುವ ಪ್ರತಿರೋಧದ ಕಥೆ

3. ಸಾರ್ಪಟ್ಟ ಪರಂಪರೈ -ತಮಿಳು (ಅಮೆಜಾನ್ ಪ್ರೈಂ ವಿಡಿಯೋ)

ಪಾ.ರಂಜಿತ್ ಅವರ ಸಾರ್ಪಟ್ಟ ಪರಂಬರೈ ತಮಿಳು ಭಾಷೆಯ ಕ್ರೀಡಾ ಸಾಹಸ ಚಲನಚಿತ್ರವಾಗಿದ್ದು, ದಲಿತ ಬಾಕ್ಸರ್‌ನ ಘನತೆ ಮತ್ತು ಸ್ವಾಭಿಮಾನದ ಚಿತ್ರವಾಗಿ ಮುಖ್ಯವಾಗುತ್ತದೆ. ಚಿತ್ರದಲ್ಲಿ ಆರ್ಯ, ಜಾನ್ ಕೊಕ್ಕೆನ್, ಶಬೀರ್ ಕಲ್ಲರಕ್ಕಲ್, ದುಶಾರ ವಿಜಯನ್, ಪಶುಪತಿ, ಅನುಪಮಾ ಕುಮಾರ್ ಮತ್ತು ಸಂಚನಾ ನಟರಾಜನ್ ನಟಿಸಿದ್ದಾರೆ. 1970ರ ದಶಕದಲ್ಲಿ ನಡೆದ ಉತ್ತರ ಚೆನ್ನೈನ ಇಡಿಯಪ್ಪ ಪರಂಬರೈ ಮತ್ತು ಸಾರ್ಪಟ್ಟ ಪರಂಬರೈ ಎಂಬ ಎರಡು ಕುಲಗಳ ನಡುವಿನ ಘರ್ಷಣೆಯ ಸುತ್ತ ಸುತ್ತುತ್ತದೆ. ಇದು ಸ್ಥಳೀಯ ಬಾಕ್ಸಿಂಗ್ ಸಂಸ್ಕೃತಿಯನ್ನು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವ ರಾಜಕೀಯವನ್ನು ತೋರಿಸುತ್ತದೆ.

ಈ ಚಿತ್ರ ನ್ಯೂಯಾರ್ಕ್ ಟೈಮ್ಸ್ ‘ಒಟಿಟಿಯಲ್ಲಿ ನೋಡಲೇಬೇಕಾದ ಅಂತರರಾಷ್ಟ್ರೀಯ ಚಲನಚಿತ್ರಗಳ’ ಪಟ್ಟಿಯಲ್ಲಿ ವಿಶೇಷ ಉಲ್ಲೇಖ ಪಡೆಯಿತು.

4. ಜಯಂತಿ- ಮರಾಠಿ

ನವೆಂಬರ್‌ನಲ್ಲಿ ಬಿಡುಗಡೆಯಾದ ಮರಾಠಿ ಚಿತ್ರ ಜಯಂತಿ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಅಂಬೇಡ್ಕರ್, ಫುಲೆ ಮತ್ತು ಶಿವಾಜಿ ಮಹಾರಾಜರ ಜೀವನ ಮತ್ತು ಕೃತಿಗಳನ್ನು ಓದಿದಾಗ ಕಥಾ ನಾಯಕ ಸಂತ್ಯಾ ಅನ್ಯಾಯದ ವಿರುದ್ಧ ಹೋರಾಡುವವನಾಗಿ ರೂಪಗೊಳ್ಳುವುದನ್ನು ಚಿತ್ರಿಸಿದೆ. ಚಿತ್ರವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಕೃತಿಯಾದ ಹೂ ವರ್ ದಿ ಶೂದ್ರಸ್ ಅನ್ನು ಉಲ್ಲೇಖಿಸುತ್ತದೆ ಎಂದು ಚಿತ್ರ ತಂಡ ತಿಳಿಸಿದೆ.

5. ಲವ್‌ ಸ್ಟೋರಿ – ತೆಲುಗು

 ಬಹುತೇಕ ಜಡ್ಡುಗಟ್ಟಿದ ಫ್ಯೂಡಲ್ ತೆಲುಗು ಚಿತ್ರ ರಂಗದಲ್ಲಿ ಶೇಖರ್ ಕಮ್ಮುಲ ತಮ್ಮ ’ಲವ್ ಸ್ಟೋರಿ’ ಸಿನಿಮಾ ಮೂಲಕ ತೆಲುಗು ಸಿನಿಮಾ ಪ್ರೇಕ್ಷಕರಿಗೆ ಹೊಸ ಕಣ್ಣೋಟವೊಂದನ್ನು ನೀಡಿದ್ದಾರೆ. ಲವ್ ಸ್ಟೋರಿ ಸಿನಿಮಾದಲ್ಲಿ ಎರಡು ಸಂಗತಿಗಳನ್ನು ಸಮಾನಾಂತರವಾಗಿ ಕಟ್ಟಿಕೊಡಲು ಪ್ರಯತ್ನಿಸಲಾಗಿದೆ. ಒಂದು ನಮ್ಮ ಸಮಾಜದಲ್ಲಿರುವ ಜಾತಿ ವ್ಯವಸ್ಥೆ. ಮತ್ತೊಂದು ಫ್ಯೂಡಲ್ ಜಾತಿಯ ಪುರುಷ ಪ್ರಧಾನ ಕೌಟಂಬಿಕ ವ್ಯವಸ್ಥೆ ಒಳಗೆ ಹೆಣ್ಣಿನ ಬಗೆಗಿನ ದೃಷ್ಟಿಕೋನ. ದಲಿತ ಸಮುದಾಯದ ರೇವಂತ್ ಕಥಾನಾಯಕ, ಫ್ಯೂಡಲ್ ಸಮುದಾಯದ ಮೊನಿಕಾ ನಾಯಕಿ, ಕಥಾನಾಯಕನ ತಾಯಿ ಮನಮ್ಮ ಮತ್ತು ಕಥಾನಾಯಕಿಯ ಚಿಕ್ಕಪ್ಪ ನರಸಿಂಹಂ. ಈ ನಾಲ್ಕು ಪ್ರಧಾನ ಪಾತ್ರಗಳು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

6. ಜೈ ಭೀಮ್- ಐದು ಭಾಷೆಗಳು (ಅಮೆಜಾನ್ ಪ್ರೈಂ ವಿಡಿಯೋ)

ಜೈ ಭೀಮ್ ಒಂದು ನೈಜ ಘಟನೆಯನ್ನಾಧರಿಸಿದ ಚಿತ್ರ. 1990ರ ದಶಕದಲ್ಲಿ ತಮಿಳುನಾಡಿನಲ್ಲಿ ನಡೆದ ಈ ಘಟನೆಯಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಇಮ್ಮಡಿಗೊಳಿಸುವ ರೀತಿಯಲ್ಲಿ ತುಳಿತಕ್ಕೊಳಗಾದ, ದಮನಿತ ಜನಸಮುದಾಯಗಳಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಕೀಲ ಮತ್ತು ಇರುಳ್ ಸಮುದಾಯದ ಕಥೆ ಇದಾಗಿದೆ.

ತಾನು ಮಾಡದ ಕಳ್ಳತನದ ಆರೋಪಕ್ಕೆ ಸಿಲುಕಿ ಪೊಲೀಸರಿಂದ ಬಂಧನಕ್ಕೊಳಗಾಗುವ ರಾಜಕಣ್ಣು ಮತ್ತು ಅವನ ಸಹಚರರು ಪೊಲೀಸ್ ಠಾಣೆಯಲ್ಲಿ ಅನುಭವಿಸುವ ದೈಹಿಕ ಹಿಂಸೆ, ದೌರ್ಜನ್ಯ ಮತ್ತು ಈ ಅಮಾಯಕ ಆದಿವಾಸಿಗಳ ಮೇಲೆ ಪೊಲೀಸರು ನಡೆಸುವ ದೈಹಿಕ ಆಕ್ರಮಣ ನೋಡುಗರ ಎದೆನಡುಗಿಸುತ್ತದೆ. ಆತನ ಪತ್ನಿ ಸೆಂಗಣಿ ಗರ್ಭಿಣಿಯಾಗಿದ್ದರೂ ಪೊಲೀಸರಿಂದ ಅನುಭವಿಸುವ ಚಿತ್ರಹಿಂಸೆ ಪ್ರೇಕ್ಷಕರ ಎದೆಗೆ ನಾಟುವಂತಿದೆ. 

ಈ ವರ್ಷ ಅತಿ ಹೆಚ್ಚು ವೀಕ್ಷಣೆಗೆ ಒಳಗಾದ, ಹೆಚ್ಚು ಚರ್ಚೆಗೆ ಒಳಗಾದ ಚಿತ್ರ ಇದಾಗಿದೆ. IMDB ರೇಟಿಂಗ್‌ನಲ್ಲಿ ಎಲ್ಲಾ ದಾಖಲೆಗಳನ್ನು ಈ ಚಿತ್ರ ಸರಿಗಟ್ಟಿದೆ.

7. ಗಿಲಿ ಪುಚ್ಚಿ (ಅಜೀಬ್ ದಾಸ್ತಾನ್ಸ್ )- ಹಿಂದಿ ( ನೆಟ್‌ಫ್ಲಿಕ್ಸ್)

ನೀರಜ್ ಘಯ್ವಾನ್ ಅವರ ಅಜೀಬ್ ದಾಸ್ತಾನ್ಸ್ ಶಾರ್ಟ್ ಸ್ಟೋರಿಸ್‌ಗಳಲ್ಲಿ ಗೀಲಿ ಪುಚ್ಚಿಯಲ್ಲಿ ದಲಿತ ಮಹಿಳೆ ಕೆಲಸದ ಸ್ಥಳದಲ್ಲಿ ತಾನು ಬಯಸಿದ ಕೆಲಸ ಪಡೆದುಕೊಳ್ಳಲು ನಡೆಸುವ ಕಸರತ್ತು ಮತ್ತು ಮೇಲ್ಜಾತಿ ಮಹಿಳೆಯೊಂದಿಗಿನ ಸ್ನೇಹದ ಕುರಿತು ಚಿತ್ರ ಮಾತಾಡುತ್ತದೆ. ದಲಿತ ಮಹಿಳೆ ಪಾತ್ರವನ್ನು ನಿರ್ವಹಿಸಿದ್ದ ಕೊಂಕಣ ಸೇನ್ ಶರ್ಮಾಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

8. ಶ್ರೀದೇವಿ ಸೋಡಾ ಸೆಂಟರ್‌- ತೆಲುಗು (ಝೀ5)

’ಶ್ರೀದೇವಿ ಸೋಡಾ ಸೆಂಟರ್’ ನಾಗೇಂದ್ರ ಕಾಸಿ ಚಿತ್ರಕತೆಯ, ಕರುಣಾ ಕುಮಾರ್ ನಿದೇಶನದ ಚಿತ್ರ. ಚಿತ್ರದಲ್ಲಿ ಸುಧೀರ್ ಬಾಬು ಮತ್ತು ಆನಂದಿ ನಟಿಸಿದರೆ ನರೇಶ್ ಮತ್ತು ಸತ್ಯಂ ರಾಜೇಶ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಲೈಟಿಂಗ್ ಕೆಲಸ ಮಾಡುವ ಸೂರಿ ಬಾಬು ಮತ್ತು ಸೋಡಾ ಅಂಗಡಿ ನಡೆಸುವ ಶ್ರೀದೇವಿಯ ಅಂತರ್ಜಾತಿ ಪ್ರೇಮಕಥೆ ಚಿತ್ರದಲ್ಲಿದ್ದು, ಅಂತರ್‌ಜಾತಿ ಅವನು ಪ್ರೀತಿಯಲ್ಲಿ ಬೀಳುತ್ತಾನೆ. ತಮ್ಮ ಪ್ರೀತಿಯನ್ನು ಗೆಲ್ಲುವ ಹೋರಾಟ, ಸಮಾಜದಲ್ಲಿರುವ ಜಾತಿ ವ್ಯವಸ್ಥೆಯ ಚಿತ್ರಣವನ್ನು ಕಟ್ಟಿ ಕೊಡಲಾಗಿದೆ.

ಈ ಸಿನಿಮಾಗಳು ಚಿತ್ರೋದ್ಯಮದಲ್ಲಿ ಹೊಸ ಅಲೆಯನ್ನು ಮೂಡಿಸುವ ಜೊತೆಗೆ ಸಿನಿ ಪ್ರೇಕ್ಷಕರನ್ನು ಚಿಂತನೆಗೂ ಹಚ್ಚಿದೆ. ಕನ್ನಡ, ಮಲಯಾಳಂ, ಹಿಂದಿ ಸಿನಿಮೋದ್ಯಮದಲ್ಲೂ ಇಂತಹ ಚಿತ್ರಗಳ ಸಂಖ್ಯೆ ಹೆಚ್ಚಲಿ, ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಜಾತಿ ದೌರ್ಜನ್ಯ ವಿರೋಧಿ ಚಿತ್ರಗಳು ಹೊರ ಬರಲಿ ಎನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜದಲ್ಲಿ ಬದಲಾವಣೆ ಆದಾಗ ಮಾತ್ರ ಸಮಾನತೆ ಸ್ವಾತಂತ್ರ್ಯ ಸಹಬಾಳ್ವೆ ಇಂದ ಬದುಕ ಬಹುದು…

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...