Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...