Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...