Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...