Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...