Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...