Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...