Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು ನೀಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿದೆ. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದಾರೆ. ಸಂಸ್ಥೆಯ ಮುಖ್ಯಸ್ಥರೂ ಈ ಸಂಬಂಧ ಒಪ್ಪಿಕೊಂಡಿರುವುದಾಗಿ ಸಮಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದೆ.

“ಈ ಸ್ಪರ್ಧೆಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವುದು ಮತ್ತು ಇಂದು (ಜ.25) ಇದೇ ವಿಷಯದ ಮೇಲೆ ಶಾಲೆಯಲ್ಲಿ ಚರ್ಚಾ ಸ್ಪರ್ಧೆಗೆ ತಯಾರಿ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ಸಮಿತಿಯು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಇಲ್ಲಿ ನೀಡಿರುವ ಚರ್ಚಾ ವಿಷಯವು ನೇರವಾಗಿ ನಮ್ಮ ಭಾರತದ ಸಂವಿಧಾನವನ್ನು ಅವಮಾನಿಸುವ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಕೆಟ್ಟ ಅಭಿಪ್ರಾಯ, ಅಪನಂಬಿಕೆ, ದ್ವೇಷಭಾವನೆ ಮೂಡಿಸುವ ದುರುದ್ದೇಶ ಹೊಂದಿರುವುದು ನೇರವಾಗಿ ಕಂಡು ಬಂದಿದೆ” ಎಂದು ಸಮಿತಿ ಆರೋಪಿಸಿದೆ.

“ಸಂವಿಧಾನವನ್ನು ಅವಮಾನಿಸುವುದೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ದೇಶದ್ರೋಹದ ಕೆಲಸ ಮಾಡಿರುವ ಸಂವಿಧಾನ ವಿರೋಧಿಯಾದ ಶಾಲೆಯನ್ನು ಈ ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕು. ಇದು ಭಾರತದ ಸಂವಿಧಾನ ವಿರೋಧಿ ಶಾಲೆ ಎಂದು ಘೋಷಿಸಿ, ಶಾಲೆಯ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

“ಈ ಕೃತ್ಯಕ್ಕೆ ಒಪ್ಪಿಗೆ ಸೂಚಿಸಿರುವ  ಮುಖ್ಯೋಪಾಧ್ಯಾಯರು /ಪ್ರಾಂಶುಪಾಲರನ್ನು, ವಿಷಯ ಕೊಟ್ಟ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು. ಮುಂದೆ ಅವರು ಯಾವ ಶಿಕ್ಷಣ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಲು ಅನರ್ಹರೆಂದು ಘೋಷಿಸಬೇಕು. ಇವರೊಂದಿಗೆ ಶಾಲೆಯ ಆಡಳಿತ ಮಂಡಳಿಯವರ ಮೇಲೆ ದೇಶದ್ರೋಹದ ಅಡಿಯಲ್ಲಿ ಕ್ರಿಮಿನಲ್‌‌ ಕೇಸು ದಾಖಲಿಸಬೇಕು. ಈ ಮೂಲಕ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರ್ಕಾರವು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಲಾಗಿದೆ.

ಭಾರತ ಸಂವಿಧಾನದ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನಗಳು ನಡೆದಿದ್ದು, ಈ ಕುರಿತು ಸರ್ಕಾರ ಸೂಕ್ತ ಆದೇಶ ಹೊರಡಿಸಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾಲೇಜುಗಳ ಮುಖ್ಯಸ್ಥರುಗಳಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಮುಖಂಡರಾದ  ಹ.ರಾ.ಮಹೇಶ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅವರು ಸಂಬಂಧಪಟ್ಟ ಡಿಡಿಪಿಐಗೆ ಅವರು ಸೂಚನೆ ನೀಡಿದ್ದಾರೆ. ಡಿಡಿಪಿಐ, ಬಿಇಒಗೆ ದೂರು ವರ್ಗಾಯಿಸಿದ್ದಾರೆ. ಬಿಇಒಗಳ ಒಂದು ಸಮಿತಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ತಿಳಿದುಬಂದಿದೆ” ಎಂದು ಮಾಹಿತಿ ನೀಡಿದರು.

“ಸದರಿ ಶಾಲೆಯು ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಗೆ ಬರಲಿದೆ. ರಾಮನಗರ ಎಸ್‌ಪಿಯವರಿಗೂ ದೂರು ನೀಡಲಾಗುವುದು. ಸಂವಿಧಾನಕ್ಕೆ ಅಪಚಾರ ಎಸಗುವಂತಹ ವಿಷಯವನ್ನು ಚರ್ಚೆಸ್ಪರ್ಧೆಗೆ ನೀಡಿದ್ದು ನಿಜವೆಂದು ಶಾಲೆ  ಒಪ್ಪಿಕೊಂಡಿದೆ. ಅಷ್ಟಕ್ಕೆ ನಾವು ಬಿಡುವುದಿಲ್ಲ. ಶಾಲೆಯ ಉದ್ದೇಶವೇ ತಪ್ಪಿರುವುದರಿಂದ ಇಡೀ ಶಾಲೆಯ ಪರವಾನಗಿ ರದ್ಧತಿಗೆ ಹೋರಾಡುತ್ತೇವೆ. ಏಕೆಂದರೆ ಅವರು ಮಕ್ಕಳ ಎದೆಯಲ್ಲಿ ವಿಷ ಬಿತ್ತುವ ಯತ್ನವನ್ನು ಈ ಶಾಲೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ ಈ ಸಂಬಂಧ ದೂರು ಬಂದಿರುವುದಾಗಿ ಖಚಿತಪಡಿಸಿತು. ಅಲ್ಲದೆ ಸಂಬಂಧಪಟ್ಟ ಡಿಡಿಪಿಐ ಕಚೇರಿಯ ಗಮನಕ್ಕೂ ವಿಷಯವನ್ನು ವರ್ಗಾಯಿಸಲಾಗಿದೆ ಎಂದು ಆಯಕ್ತರ ಕಚೇರಿ ಮಾಹಿತಿ ನೀಡಿತು.

ವಿಇಎಸ್‌ ಮಾಡೆಲ್ ಕಾನ್ವೆಂಟ್ ಶಾಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿರುವ ನಂಬರ್‌ ಮೂಲಕ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕರೆಗೆ ಲಭ್ಯವಾದರು. ಪ್ರಾಂಶುಪಾಲರಿಗೆ ಕನೆಕ್ಟ್ ಮಾಡುವುದಾಗಿ ತಿಳಿಸಿದರು. ಆದರೆ ಪ್ರಾಂಶುಪಾಲರು ಸಂಪರ್ಕಕ್ಕೆ ಸಿಕ್ಕಿಲ್ಲ. (ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)


ಇದನ್ನೂ ಓದಿರಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಮ್ಮ ಸಂವಿಧಾನವನ್ನು ನಿಷ್ಕ್ರಿಯಗೊಳಿಸಿ, ಅದರ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುವ ಕೆಲಸವನ್ನು ಮನುವಾದಿಗಳು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅಹಿಂದ ವರ್ಗದವರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

  2. ಸಂವಿಧಾನ ವಿರೋಧಿಯಾದ ಆ ಶಾಲೆಯ ಪರವಾನಗಿ ಮತ್ತು ಅಲ್ಲಿಯ ಶಿಕ್ಷಕರು ಬೋಧನೆಗೆ ಅನರ್ಹರೆಂದು ಕರೆದು ಅವರನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ಕಾನೂನು ಮತ್ತು ಹೋರಾಟದ ಮೂಲಕ ತಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.ಜೈ ಭೀಮ್ ಜೈ ಟಿಪ್ಪು.ಜೈ ಕನ್ನಡ

  3. ಈ ಶಾಲೆ ಇದೊಂದೆ ವಿಚಾರ ಅಲ್ಲ….ತುಂಬಾ ವಿಚಾರದಲ್ಲಿಯೂ ಪೋಷಕರಿಗೆ ಬೇಸರ ಮಾಡಿದೆ…careless teachers

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...