Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು ನೀಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿದೆ. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದಾರೆ. ಸಂಸ್ಥೆಯ ಮುಖ್ಯಸ್ಥರೂ ಈ ಸಂಬಂಧ ಒಪ್ಪಿಕೊಂಡಿರುವುದಾಗಿ ಸಮಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದೆ.

“ಈ ಸ್ಪರ್ಧೆಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವುದು ಮತ್ತು ಇಂದು (ಜ.25) ಇದೇ ವಿಷಯದ ಮೇಲೆ ಶಾಲೆಯಲ್ಲಿ ಚರ್ಚಾ ಸ್ಪರ್ಧೆಗೆ ತಯಾರಿ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ಸಮಿತಿಯು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಇಲ್ಲಿ ನೀಡಿರುವ ಚರ್ಚಾ ವಿಷಯವು ನೇರವಾಗಿ ನಮ್ಮ ಭಾರತದ ಸಂವಿಧಾನವನ್ನು ಅವಮಾನಿಸುವ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಕೆಟ್ಟ ಅಭಿಪ್ರಾಯ, ಅಪನಂಬಿಕೆ, ದ್ವೇಷಭಾವನೆ ಮೂಡಿಸುವ ದುರುದ್ದೇಶ ಹೊಂದಿರುವುದು ನೇರವಾಗಿ ಕಂಡು ಬಂದಿದೆ” ಎಂದು ಸಮಿತಿ ಆರೋಪಿಸಿದೆ.

“ಸಂವಿಧಾನವನ್ನು ಅವಮಾನಿಸುವುದೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ದೇಶದ್ರೋಹದ ಕೆಲಸ ಮಾಡಿರುವ ಸಂವಿಧಾನ ವಿರೋಧಿಯಾದ ಶಾಲೆಯನ್ನು ಈ ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕು. ಇದು ಭಾರತದ ಸಂವಿಧಾನ ವಿರೋಧಿ ಶಾಲೆ ಎಂದು ಘೋಷಿಸಿ, ಶಾಲೆಯ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

“ಈ ಕೃತ್ಯಕ್ಕೆ ಒಪ್ಪಿಗೆ ಸೂಚಿಸಿರುವ  ಮುಖ್ಯೋಪಾಧ್ಯಾಯರು /ಪ್ರಾಂಶುಪಾಲರನ್ನು, ವಿಷಯ ಕೊಟ್ಟ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು. ಮುಂದೆ ಅವರು ಯಾವ ಶಿಕ್ಷಣ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಲು ಅನರ್ಹರೆಂದು ಘೋಷಿಸಬೇಕು. ಇವರೊಂದಿಗೆ ಶಾಲೆಯ ಆಡಳಿತ ಮಂಡಳಿಯವರ ಮೇಲೆ ದೇಶದ್ರೋಹದ ಅಡಿಯಲ್ಲಿ ಕ್ರಿಮಿನಲ್‌‌ ಕೇಸು ದಾಖಲಿಸಬೇಕು. ಈ ಮೂಲಕ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರ್ಕಾರವು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಲಾಗಿದೆ.

ಭಾರತ ಸಂವಿಧಾನದ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನಗಳು ನಡೆದಿದ್ದು, ಈ ಕುರಿತು ಸರ್ಕಾರ ಸೂಕ್ತ ಆದೇಶ ಹೊರಡಿಸಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾಲೇಜುಗಳ ಮುಖ್ಯಸ್ಥರುಗಳಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಮುಖಂಡರಾದ  ಹ.ರಾ.ಮಹೇಶ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅವರು ಸಂಬಂಧಪಟ್ಟ ಡಿಡಿಪಿಐಗೆ ಅವರು ಸೂಚನೆ ನೀಡಿದ್ದಾರೆ. ಡಿಡಿಪಿಐ, ಬಿಇಒಗೆ ದೂರು ವರ್ಗಾಯಿಸಿದ್ದಾರೆ. ಬಿಇಒಗಳ ಒಂದು ಸಮಿತಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ತಿಳಿದುಬಂದಿದೆ” ಎಂದು ಮಾಹಿತಿ ನೀಡಿದರು.

“ಸದರಿ ಶಾಲೆಯು ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಗೆ ಬರಲಿದೆ. ರಾಮನಗರ ಎಸ್‌ಪಿಯವರಿಗೂ ದೂರು ನೀಡಲಾಗುವುದು. ಸಂವಿಧಾನಕ್ಕೆ ಅಪಚಾರ ಎಸಗುವಂತಹ ವಿಷಯವನ್ನು ಚರ್ಚೆಸ್ಪರ್ಧೆಗೆ ನೀಡಿದ್ದು ನಿಜವೆಂದು ಶಾಲೆ  ಒಪ್ಪಿಕೊಂಡಿದೆ. ಅಷ್ಟಕ್ಕೆ ನಾವು ಬಿಡುವುದಿಲ್ಲ. ಶಾಲೆಯ ಉದ್ದೇಶವೇ ತಪ್ಪಿರುವುದರಿಂದ ಇಡೀ ಶಾಲೆಯ ಪರವಾನಗಿ ರದ್ಧತಿಗೆ ಹೋರಾಡುತ್ತೇವೆ. ಏಕೆಂದರೆ ಅವರು ಮಕ್ಕಳ ಎದೆಯಲ್ಲಿ ವಿಷ ಬಿತ್ತುವ ಯತ್ನವನ್ನು ಈ ಶಾಲೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ ಈ ಸಂಬಂಧ ದೂರು ಬಂದಿರುವುದಾಗಿ ಖಚಿತಪಡಿಸಿತು. ಅಲ್ಲದೆ ಸಂಬಂಧಪಟ್ಟ ಡಿಡಿಪಿಐ ಕಚೇರಿಯ ಗಮನಕ್ಕೂ ವಿಷಯವನ್ನು ವರ್ಗಾಯಿಸಲಾಗಿದೆ ಎಂದು ಆಯಕ್ತರ ಕಚೇರಿ ಮಾಹಿತಿ ನೀಡಿತು.

ವಿಇಎಸ್‌ ಮಾಡೆಲ್ ಕಾನ್ವೆಂಟ್ ಶಾಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿರುವ ನಂಬರ್‌ ಮೂಲಕ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕರೆಗೆ ಲಭ್ಯವಾದರು. ಪ್ರಾಂಶುಪಾಲರಿಗೆ ಕನೆಕ್ಟ್ ಮಾಡುವುದಾಗಿ ತಿಳಿಸಿದರು. ಆದರೆ ಪ್ರಾಂಶುಪಾಲರು ಸಂಪರ್ಕಕ್ಕೆ ಸಿಕ್ಕಿಲ್ಲ. (ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)


ಇದನ್ನೂ ಓದಿರಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಮ್ಮ ಸಂವಿಧಾನವನ್ನು ನಿಷ್ಕ್ರಿಯಗೊಳಿಸಿ, ಅದರ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುವ ಕೆಲಸವನ್ನು ಮನುವಾದಿಗಳು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅಹಿಂದ ವರ್ಗದವರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

  2. ಸಂವಿಧಾನ ವಿರೋಧಿಯಾದ ಆ ಶಾಲೆಯ ಪರವಾನಗಿ ಮತ್ತು ಅಲ್ಲಿಯ ಶಿಕ್ಷಕರು ಬೋಧನೆಗೆ ಅನರ್ಹರೆಂದು ಕರೆದು ಅವರನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ಕಾನೂನು ಮತ್ತು ಹೋರಾಟದ ಮೂಲಕ ತಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.ಜೈ ಭೀಮ್ ಜೈ ಟಿಪ್ಪು.ಜೈ ಕನ್ನಡ

  3. ಈ ಶಾಲೆ ಇದೊಂದೆ ವಿಚಾರ ಅಲ್ಲ….ತುಂಬಾ ವಿಚಾರದಲ್ಲಿಯೂ ಪೋಷಕರಿಗೆ ಬೇಸರ ಮಾಡಿದೆ…careless teachers

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...