Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು ನೀಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿದೆ. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದಾರೆ. ಸಂಸ್ಥೆಯ ಮುಖ್ಯಸ್ಥರೂ ಈ ಸಂಬಂಧ ಒಪ್ಪಿಕೊಂಡಿರುವುದಾಗಿ ಸಮಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದೆ.

“ಈ ಸ್ಪರ್ಧೆಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವುದು ಮತ್ತು ಇಂದು (ಜ.25) ಇದೇ ವಿಷಯದ ಮೇಲೆ ಶಾಲೆಯಲ್ಲಿ ಚರ್ಚಾ ಸ್ಪರ್ಧೆಗೆ ತಯಾರಿ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ಸಮಿತಿಯು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಇಲ್ಲಿ ನೀಡಿರುವ ಚರ್ಚಾ ವಿಷಯವು ನೇರವಾಗಿ ನಮ್ಮ ಭಾರತದ ಸಂವಿಧಾನವನ್ನು ಅವಮಾನಿಸುವ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಕೆಟ್ಟ ಅಭಿಪ್ರಾಯ, ಅಪನಂಬಿಕೆ, ದ್ವೇಷಭಾವನೆ ಮೂಡಿಸುವ ದುರುದ್ದೇಶ ಹೊಂದಿರುವುದು ನೇರವಾಗಿ ಕಂಡು ಬಂದಿದೆ” ಎಂದು ಸಮಿತಿ ಆರೋಪಿಸಿದೆ.

“ಸಂವಿಧಾನವನ್ನು ಅವಮಾನಿಸುವುದೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ದೇಶದ್ರೋಹದ ಕೆಲಸ ಮಾಡಿರುವ ಸಂವಿಧಾನ ವಿರೋಧಿಯಾದ ಶಾಲೆಯನ್ನು ಈ ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕು. ಇದು ಭಾರತದ ಸಂವಿಧಾನ ವಿರೋಧಿ ಶಾಲೆ ಎಂದು ಘೋಷಿಸಿ, ಶಾಲೆಯ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

“ಈ ಕೃತ್ಯಕ್ಕೆ ಒಪ್ಪಿಗೆ ಸೂಚಿಸಿರುವ  ಮುಖ್ಯೋಪಾಧ್ಯಾಯರು /ಪ್ರಾಂಶುಪಾಲರನ್ನು, ವಿಷಯ ಕೊಟ್ಟ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು. ಮುಂದೆ ಅವರು ಯಾವ ಶಿಕ್ಷಣ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಲು ಅನರ್ಹರೆಂದು ಘೋಷಿಸಬೇಕು. ಇವರೊಂದಿಗೆ ಶಾಲೆಯ ಆಡಳಿತ ಮಂಡಳಿಯವರ ಮೇಲೆ ದೇಶದ್ರೋಹದ ಅಡಿಯಲ್ಲಿ ಕ್ರಿಮಿನಲ್‌‌ ಕೇಸು ದಾಖಲಿಸಬೇಕು. ಈ ಮೂಲಕ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರ್ಕಾರವು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಲಾಗಿದೆ.

ಭಾರತ ಸಂವಿಧಾನದ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನಗಳು ನಡೆದಿದ್ದು, ಈ ಕುರಿತು ಸರ್ಕಾರ ಸೂಕ್ತ ಆದೇಶ ಹೊರಡಿಸಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾಲೇಜುಗಳ ಮುಖ್ಯಸ್ಥರುಗಳಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಮುಖಂಡರಾದ  ಹ.ರಾ.ಮಹೇಶ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅವರು ಸಂಬಂಧಪಟ್ಟ ಡಿಡಿಪಿಐಗೆ ಅವರು ಸೂಚನೆ ನೀಡಿದ್ದಾರೆ. ಡಿಡಿಪಿಐ, ಬಿಇಒಗೆ ದೂರು ವರ್ಗಾಯಿಸಿದ್ದಾರೆ. ಬಿಇಒಗಳ ಒಂದು ಸಮಿತಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ತಿಳಿದುಬಂದಿದೆ” ಎಂದು ಮಾಹಿತಿ ನೀಡಿದರು.

“ಸದರಿ ಶಾಲೆಯು ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಗೆ ಬರಲಿದೆ. ರಾಮನಗರ ಎಸ್‌ಪಿಯವರಿಗೂ ದೂರು ನೀಡಲಾಗುವುದು. ಸಂವಿಧಾನಕ್ಕೆ ಅಪಚಾರ ಎಸಗುವಂತಹ ವಿಷಯವನ್ನು ಚರ್ಚೆಸ್ಪರ್ಧೆಗೆ ನೀಡಿದ್ದು ನಿಜವೆಂದು ಶಾಲೆ  ಒಪ್ಪಿಕೊಂಡಿದೆ. ಅಷ್ಟಕ್ಕೆ ನಾವು ಬಿಡುವುದಿಲ್ಲ. ಶಾಲೆಯ ಉದ್ದೇಶವೇ ತಪ್ಪಿರುವುದರಿಂದ ಇಡೀ ಶಾಲೆಯ ಪರವಾನಗಿ ರದ್ಧತಿಗೆ ಹೋರಾಡುತ್ತೇವೆ. ಏಕೆಂದರೆ ಅವರು ಮಕ್ಕಳ ಎದೆಯಲ್ಲಿ ವಿಷ ಬಿತ್ತುವ ಯತ್ನವನ್ನು ಈ ಶಾಲೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ ಈ ಸಂಬಂಧ ದೂರು ಬಂದಿರುವುದಾಗಿ ಖಚಿತಪಡಿಸಿತು. ಅಲ್ಲದೆ ಸಂಬಂಧಪಟ್ಟ ಡಿಡಿಪಿಐ ಕಚೇರಿಯ ಗಮನಕ್ಕೂ ವಿಷಯವನ್ನು ವರ್ಗಾಯಿಸಲಾಗಿದೆ ಎಂದು ಆಯಕ್ತರ ಕಚೇರಿ ಮಾಹಿತಿ ನೀಡಿತು.

ವಿಇಎಸ್‌ ಮಾಡೆಲ್ ಕಾನ್ವೆಂಟ್ ಶಾಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿರುವ ನಂಬರ್‌ ಮೂಲಕ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕರೆಗೆ ಲಭ್ಯವಾದರು. ಪ್ರಾಂಶುಪಾಲರಿಗೆ ಕನೆಕ್ಟ್ ಮಾಡುವುದಾಗಿ ತಿಳಿಸಿದರು. ಆದರೆ ಪ್ರಾಂಶುಪಾಲರು ಸಂಪರ್ಕಕ್ಕೆ ಸಿಕ್ಕಿಲ್ಲ. (ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)


ಇದನ್ನೂ ಓದಿರಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಮ್ಮ ಸಂವಿಧಾನವನ್ನು ನಿಷ್ಕ್ರಿಯಗೊಳಿಸಿ, ಅದರ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುವ ಕೆಲಸವನ್ನು ಮನುವಾದಿಗಳು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅಹಿಂದ ವರ್ಗದವರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

  2. ಸಂವಿಧಾನ ವಿರೋಧಿಯಾದ ಆ ಶಾಲೆಯ ಪರವಾನಗಿ ಮತ್ತು ಅಲ್ಲಿಯ ಶಿಕ್ಷಕರು ಬೋಧನೆಗೆ ಅನರ್ಹರೆಂದು ಕರೆದು ಅವರನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ಕಾನೂನು ಮತ್ತು ಹೋರಾಟದ ಮೂಲಕ ತಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.ಜೈ ಭೀಮ್ ಜೈ ಟಿಪ್ಪು.ಜೈ ಕನ್ನಡ

  3. ಈ ಶಾಲೆ ಇದೊಂದೆ ವಿಚಾರ ಅಲ್ಲ….ತುಂಬಾ ವಿಚಾರದಲ್ಲಿಯೂ ಪೋಷಕರಿಗೆ ಬೇಸರ ಮಾಡಿದೆ…careless teachers

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...