Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು ನೀಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿದೆ. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದಾರೆ. ಸಂಸ್ಥೆಯ ಮುಖ್ಯಸ್ಥರೂ ಈ ಸಂಬಂಧ ಒಪ್ಪಿಕೊಂಡಿರುವುದಾಗಿ ಸಮಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದೆ.

“ಈ ಸ್ಪರ್ಧೆಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವುದು ಮತ್ತು ಇಂದು (ಜ.25) ಇದೇ ವಿಷಯದ ಮೇಲೆ ಶಾಲೆಯಲ್ಲಿ ಚರ್ಚಾ ಸ್ಪರ್ಧೆಗೆ ತಯಾರಿ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದು ಸಮಿತಿಯು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಇಲ್ಲಿ ನೀಡಿರುವ ಚರ್ಚಾ ವಿಷಯವು ನೇರವಾಗಿ ನಮ್ಮ ಭಾರತದ ಸಂವಿಧಾನವನ್ನು ಅವಮಾನಿಸುವ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಕೆಟ್ಟ ಅಭಿಪ್ರಾಯ, ಅಪನಂಬಿಕೆ, ದ್ವೇಷಭಾವನೆ ಮೂಡಿಸುವ ದುರುದ್ದೇಶ ಹೊಂದಿರುವುದು ನೇರವಾಗಿ ಕಂಡು ಬಂದಿದೆ” ಎಂದು ಸಮಿತಿ ಆರೋಪಿಸಿದೆ.

“ಸಂವಿಧಾನವನ್ನು ಅವಮಾನಿಸುವುದೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ದೇಶದ್ರೋಹದ ಕೆಲಸ ಮಾಡಿರುವ ಸಂವಿಧಾನ ವಿರೋಧಿಯಾದ ಶಾಲೆಯನ್ನು ಈ ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕು. ಇದು ಭಾರತದ ಸಂವಿಧಾನ ವಿರೋಧಿ ಶಾಲೆ ಎಂದು ಘೋಷಿಸಿ, ಶಾಲೆಯ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

“ಈ ಕೃತ್ಯಕ್ಕೆ ಒಪ್ಪಿಗೆ ಸೂಚಿಸಿರುವ  ಮುಖ್ಯೋಪಾಧ್ಯಾಯರು /ಪ್ರಾಂಶುಪಾಲರನ್ನು, ವಿಷಯ ಕೊಟ್ಟ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು. ಮುಂದೆ ಅವರು ಯಾವ ಶಿಕ್ಷಣ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಲು ಅನರ್ಹರೆಂದು ಘೋಷಿಸಬೇಕು. ಇವರೊಂದಿಗೆ ಶಾಲೆಯ ಆಡಳಿತ ಮಂಡಳಿಯವರ ಮೇಲೆ ದೇಶದ್ರೋಹದ ಅಡಿಯಲ್ಲಿ ಕ್ರಿಮಿನಲ್‌‌ ಕೇಸು ದಾಖಲಿಸಬೇಕು. ಈ ಮೂಲಕ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರ್ಕಾರವು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಲಾಗಿದೆ.

ಭಾರತ ಸಂವಿಧಾನದ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಪ್ರಯತ್ನಗಳು ನಡೆದಿದ್ದು, ಈ ಕುರಿತು ಸರ್ಕಾರ ಸೂಕ್ತ ಆದೇಶ ಹೊರಡಿಸಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾಲೇಜುಗಳ ಮುಖ್ಯಸ್ಥರುಗಳಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಮುಖಂಡರಾದ  ಹ.ರಾ.ಮಹೇಶ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅವರು ಸಂಬಂಧಪಟ್ಟ ಡಿಡಿಪಿಐಗೆ ಅವರು ಸೂಚನೆ ನೀಡಿದ್ದಾರೆ. ಡಿಡಿಪಿಐ, ಬಿಇಒಗೆ ದೂರು ವರ್ಗಾಯಿಸಿದ್ದಾರೆ. ಬಿಇಒಗಳ ಒಂದು ಸಮಿತಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ತಿಳಿದುಬಂದಿದೆ” ಎಂದು ಮಾಹಿತಿ ನೀಡಿದರು.

“ಸದರಿ ಶಾಲೆಯು ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಗೆ ಬರಲಿದೆ. ರಾಮನಗರ ಎಸ್‌ಪಿಯವರಿಗೂ ದೂರು ನೀಡಲಾಗುವುದು. ಸಂವಿಧಾನಕ್ಕೆ ಅಪಚಾರ ಎಸಗುವಂತಹ ವಿಷಯವನ್ನು ಚರ್ಚೆಸ್ಪರ್ಧೆಗೆ ನೀಡಿದ್ದು ನಿಜವೆಂದು ಶಾಲೆ  ಒಪ್ಪಿಕೊಂಡಿದೆ. ಅಷ್ಟಕ್ಕೆ ನಾವು ಬಿಡುವುದಿಲ್ಲ. ಶಾಲೆಯ ಉದ್ದೇಶವೇ ತಪ್ಪಿರುವುದರಿಂದ ಇಡೀ ಶಾಲೆಯ ಪರವಾನಗಿ ರದ್ಧತಿಗೆ ಹೋರಾಡುತ್ತೇವೆ. ಏಕೆಂದರೆ ಅವರು ಮಕ್ಕಳ ಎದೆಯಲ್ಲಿ ವಿಷ ಬಿತ್ತುವ ಯತ್ನವನ್ನು ಈ ಶಾಲೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ ಈ ಸಂಬಂಧ ದೂರು ಬಂದಿರುವುದಾಗಿ ಖಚಿತಪಡಿಸಿತು. ಅಲ್ಲದೆ ಸಂಬಂಧಪಟ್ಟ ಡಿಡಿಪಿಐ ಕಚೇರಿಯ ಗಮನಕ್ಕೂ ವಿಷಯವನ್ನು ವರ್ಗಾಯಿಸಲಾಗಿದೆ ಎಂದು ಆಯಕ್ತರ ಕಚೇರಿ ಮಾಹಿತಿ ನೀಡಿತು.

ವಿಇಎಸ್‌ ಮಾಡೆಲ್ ಕಾನ್ವೆಂಟ್ ಶಾಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿರುವ ನಂಬರ್‌ ಮೂಲಕ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕರೆಗೆ ಲಭ್ಯವಾದರು. ಪ್ರಾಂಶುಪಾಲರಿಗೆ ಕನೆಕ್ಟ್ ಮಾಡುವುದಾಗಿ ತಿಳಿಸಿದರು. ಆದರೆ ಪ್ರಾಂಶುಪಾಲರು ಸಂಪರ್ಕಕ್ಕೆ ಸಿಕ್ಕಿಲ್ಲ. (ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು)


ಇದನ್ನೂ ಓದಿರಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಮ್ಮ ಸಂವಿಧಾನವನ್ನು ನಿಷ್ಕ್ರಿಯಗೊಳಿಸಿ, ಅದರ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುವ ಕೆಲಸವನ್ನು ಮನುವಾದಿಗಳು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಅಹಿಂದ ವರ್ಗದವರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

  2. ಸಂವಿಧಾನ ವಿರೋಧಿಯಾದ ಆ ಶಾಲೆಯ ಪರವಾನಗಿ ಮತ್ತು ಅಲ್ಲಿಯ ಶಿಕ್ಷಕರು ಬೋಧನೆಗೆ ಅನರ್ಹರೆಂದು ಕರೆದು ಅವರನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ಕಾನೂನು ಮತ್ತು ಹೋರಾಟದ ಮೂಲಕ ತಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.ಜೈ ಭೀಮ್ ಜೈ ಟಿಪ್ಪು.ಜೈ ಕನ್ನಡ

  3. ಈ ಶಾಲೆ ಇದೊಂದೆ ವಿಚಾರ ಅಲ್ಲ….ತುಂಬಾ ವಿಚಾರದಲ್ಲಿಯೂ ಪೋಷಕರಿಗೆ ಬೇಸರ ಮಾಡಿದೆ…careless teachers

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...