Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಆರು ಅಂಶಗಳನ್ನು ಪತ್ರದಲ್ಲಿ ಪ್ರಸ್ತಾಪಿಸಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮ ಆಯೋಜಿಸುವುದಾಗಿಯೂ, ಪ್ರತಿದಿನ ಚಾಚೂತಪ್ಪದೇ ಪ್ರಸ್ತಾವನೆಯನ್ನು ಓದುವುದಾಗಿಯೂ ತಿಳಿಸಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಕೊನೆಗೂ ತಪ್ಪೊಪ್ಪಿಕೊಂಡಿದೆ.

ಈ ಸಂಬಂಧ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿತ್ತು. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿವಾದದ ಕುರಿತು ಶಾಲೆಯ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಶಾಲೆಯ ವತಿಯಿಂದ ಬಂದಿರಲಿಲ್ಲ. ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ರಾಯಚೂರು ಪ್ರಕರಣದ ಜೊತೆಗೆ ವಿಇಎಸ್ ಶಾಲೆಯಲ್ಲಾದ ಸಂವಿಧಾನ ವಿರೋಧಿ ಕೆಲಸವು ಟೀಕೆಗೆ ಒಳಗಾದ ಬೆನ್ನಲ್ಲೇ ಶಾಲೆಯ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ (ಕರ್ನಾಟಕ) ಪ್ರಧಾನ ಸಂಚಾಲಕರಿಗೆ, ರಾಜ್ಯ ಸಂಚಾಲಕರುಗಳಿಗೆ, ಪತ್ರ ಬರೆದಿರುವ ಶಾಲೆಯು ಆರು ಅಂಶಗಳನ್ನು ಪ್ರಸ್ತಾಪಿಸಿದೆ.

“ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ “72 years of Bharathiya Samvidana/Indian Constitution has it reached expiry date” ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ” ಎಂದು ತಿಳಿಸಿದೆ.

“ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ” ಎಂದು ಹೇಳಿದೆ.

“ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ” ಎಂದು ಸ್ಪಷ್ಟನೆ ನೀಡಲಾಗಿದೆ.

“ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ” ಎಂದು ತಿಳಿಸಿದೆ.

“ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ” ಎಂದು ಸ್ಪಷ್ಟಪಡಿಸಲಾಗಿದೆ.

ಕ್ಷಮೆಯಾಚನೆಯ ಬಳಿಕ ಮತ್ತೊಂದು ಹೇಳಿಕೆ: ಕ್ಷಮೆಯಾಚನೆಯ ಹೇಳಿಕೆ ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿಯು ನೀಡಿರುವ ಹೇಳಿಕೆಯು ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ.

“ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ” ಎಂದು ಶಾಲೆ ಆರೋಪಿಸಿದೆ. ಹೀಗಾಗಿ ರಾಮನಗರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಒಂದು ಕಡೆ ಕ್ಷಮೆಯಾಚಿಸಿ, ಮತ್ತೊಂದು ಕಡೆ ಪಿತೂರಿಯ ಆರೋಪ ಹೊರಿಸಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...