Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಆರು ಅಂಶಗಳನ್ನು ಪತ್ರದಲ್ಲಿ ಪ್ರಸ್ತಾಪಿಸಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮ ಆಯೋಜಿಸುವುದಾಗಿಯೂ, ಪ್ರತಿದಿನ ಚಾಚೂತಪ್ಪದೇ ಪ್ರಸ್ತಾವನೆಯನ್ನು ಓದುವುದಾಗಿಯೂ ತಿಳಿಸಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಕೊನೆಗೂ ತಪ್ಪೊಪ್ಪಿಕೊಂಡಿದೆ.

ಈ ಸಂಬಂಧ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿತ್ತು. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿವಾದದ ಕುರಿತು ಶಾಲೆಯ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಶಾಲೆಯ ವತಿಯಿಂದ ಬಂದಿರಲಿಲ್ಲ. ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ರಾಯಚೂರು ಪ್ರಕರಣದ ಜೊತೆಗೆ ವಿಇಎಸ್ ಶಾಲೆಯಲ್ಲಾದ ಸಂವಿಧಾನ ವಿರೋಧಿ ಕೆಲಸವು ಟೀಕೆಗೆ ಒಳಗಾದ ಬೆನ್ನಲ್ಲೇ ಶಾಲೆಯ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ (ಕರ್ನಾಟಕ) ಪ್ರಧಾನ ಸಂಚಾಲಕರಿಗೆ, ರಾಜ್ಯ ಸಂಚಾಲಕರುಗಳಿಗೆ, ಪತ್ರ ಬರೆದಿರುವ ಶಾಲೆಯು ಆರು ಅಂಶಗಳನ್ನು ಪ್ರಸ್ತಾಪಿಸಿದೆ.

“ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ “72 years of Bharathiya Samvidana/Indian Constitution has it reached expiry date” ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ” ಎಂದು ತಿಳಿಸಿದೆ.

“ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ” ಎಂದು ಹೇಳಿದೆ.

“ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ” ಎಂದು ಸ್ಪಷ್ಟನೆ ನೀಡಲಾಗಿದೆ.

“ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ” ಎಂದು ತಿಳಿಸಿದೆ.

“ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ” ಎಂದು ಸ್ಪಷ್ಟಪಡಿಸಲಾಗಿದೆ.

ಕ್ಷಮೆಯಾಚನೆಯ ಬಳಿಕ ಮತ್ತೊಂದು ಹೇಳಿಕೆ: ಕ್ಷಮೆಯಾಚನೆಯ ಹೇಳಿಕೆ ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿಯು ನೀಡಿರುವ ಹೇಳಿಕೆಯು ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ.

“ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ” ಎಂದು ಶಾಲೆ ಆರೋಪಿಸಿದೆ. ಹೀಗಾಗಿ ರಾಮನಗರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಒಂದು ಕಡೆ ಕ್ಷಮೆಯಾಚಿಸಿ, ಮತ್ತೊಂದು ಕಡೆ ಪಿತೂರಿಯ ಆರೋಪ ಹೊರಿಸಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...