Homeಕರ್ನಾಟಕಗೋಹತ್ಯೆ ನಿಷೇಧ ಕಾಯ್ದೆ: 4 ತಿಂಗಳಲ್ಲಿ 58 ಪ್ರಕರಣಗಳು ದಾಖಲು

ಗೋಹತ್ಯೆ ನಿಷೇಧ ಕಾಯ್ದೆ: 4 ತಿಂಗಳಲ್ಲಿ 58 ಪ್ರಕರಣಗಳು ದಾಖಲು

- Advertisement -
- Advertisement -

ಕೊರೊನಾ ನಡುವೆಯೆ ರಾಜ್ಯ ಸರ್ಕಾರವು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆ’ಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯಡಿ 2021 ರ ಫೆಬ್ರವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ 29 ಎಫ್‌ಐಆರ್‌‌‌ ಸೇರಿದಂತೆ ಒಟ್ಟು 58 ಪ್ರಕರಣಗಳನ್ನು ರಾಜ್ಯ ಪೊಲೀಸರು ದಾಖಲಿಸಿದ್ದಾರೆ. ದಕ್ಷಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣ ದಾಖಲಾಗಿದ್ದು, ಮೈಸೂರು ಎರಡನೆ ಸ್ಥಾನದಲ್ಲಿದೆ.

ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ವಿವಾದಿತ ಗೋಹತ್ಯೆ ಕಾನೂನನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘವು ಕರ್ನಾಟಕ ಹೈಕೋರ್ಟ್‌ ಕದ ತಟ್ಟಿತ್ತು. ರೈತ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂಬಂಧಿಸಿದ ರಾಜ್ಯ ಸರ್ಕಾರ ನೀಡಿರುವ ಅಫಿಡವಿಟ್‌ನಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಅದರ ಪ್ರಕಾರ 29 ಎಫ್‌ಐಆರ್‌ಗಳಲ್ಲಿ ಸುಮಾರು 50 ರಷ್ಟು ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಚಂಡಿಗಢ: ಬ್ಯಾರಿಕೇಡ್ ಮುರಿದು ರಾಜಭವನಕ್ಕೆ ಮುತ್ತಿಗೆ ಹಾಕಲೊರಟ ಪಂಜಾಬ್ -ಹರಿಯಾಣ ರೈತರು

ರಾಜ್ಯದ 30 ಜಿಲ್ಲೆಗಳಲ್ಲೂ ಗೋಮಾಂಸ ಮಾರಾಟ ಮತ್ತು ದನಗಳ ಅಕ್ರಮ ಸಾಗಣೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ 14 ಜಿಲ್ಲೆಗಳಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ 8 ಎಫ್‌ಐಆರ್‌ ಮತ್ತು ಮೈಸೂರಿನಲ್ಲಿ 7 ಎಫ್‌ಐಆರ್‌ ದಾಖಲಾಗಿದೆ.

ಜೂನ್‌ 4 ರವರೆಗೆ ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8, ಮೈಸೂರು ಜಿಲ್ಲೆಯಲ್ಲಿ 7, ಚಿಕ್ಕಮಗಳೂರಿನಲ್ಲಿ 3, ತುಮಕೂರು ಮಂಡ್ಯ ಜಿಲ್ಲೆಗಳಲ್ಲಿ ತಲಾ 2 ಹಾಗೂ ರಾಮನಗರ, ಹಾಸನ, ಕೊಡಗು, ಉತ್ತರ ಕನ್ನಡ, ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿಯಲ್ಲಿ ತಲಾ ಒಂದೊಂದು ಎಫ್‌ಐಆರ್‌ಗಳು ದಾಖಲಾಗಿದೆ.

ಇದನ್ನೂ ಓದಿ: ಹಂತಹಂತವಾಗಿ ತೊರೆಯಬೇಕಾದ ಜಾಡ್ಯ ಬ್ರಾಹ್ಮಣ್ಯದ ಗರ್ಭದೊಳಗೆ ಒಂದಿಷ್ಟು ಹೊತ್ತು

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...