Homeಮುಖಪುಟನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ...

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

- Advertisement -
- Advertisement -

ಗಾಂಧಿ ತತ್ವಗಳಿಗೆ ಹೆಸರುವಾಸಿಯಾಗಿದ್ದ, ವೈಜ್ಞಾನಿಕ ಚಿಂತನೆಯನ್ನು ತಾನು ಸಾಯುವವರೆಗೂ ಪ್ರತಿಪಾದಿಸಿದ, ಸಾವಿರಾರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿದ ಎಚ್. ನರಸಿಂಹಯ್ಯ ಸೇವೆ ಸಲ್ಲಿಸಿದ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಇದೀಗ ‘ದಲಿತ ವಿರೋಧಿ’ ನಿಲುವು ತೆಗೆದುಕೊಂಡು, ಜನರ ಕೆಂಗಣ್ಣಿಗೆ ಗುರಿಯಾಗಿದೆ.

1920ರಲ್ಲಿ ಆರಂಭವಾದ ಬೆಂಗಳೂರಿನ ನ್ಯಾಷನಲ್ ಎಜುಕೇಷನ್ ಸೊಸೈಟಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡುವ ಮೂಲಕ, ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಆದರೆ, ಕಳೆದ ಹಲವು ವರ್ಷಗಳಿಂದ ದಲಿತ ಸಮುದಾಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ವಿರೋಧಿಯಾಗಿ ಈ ಸಂಸ್ಥೆಯಲ್ಲಿ ಕಾರ್ಯಚಟುವಟಿಗಳು ನಡೆಯುತ್ತಿವೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

ಕಳೆದ 13 ವರ್ಷದಿಂದ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಭಾಷಾ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರವಿಕುಮಾರ್ ಭಾಗಿ ಅವರನ್ನು ಪದವಿ ಕಾಲೇಜಿನಿಂದ ಪಿಯು ಕಾಲೇಜಿಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೇ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನು ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಗ್ರಾಮೀಣ ಪ್ರದೇಶದಿಂದ ಸಾವಿರಾರು ಬಡ ಮಕ್ಕಳು ನ್ಯಾಷನಲ್ ಕಾಲೇಜಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಆದರೆ, ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕ ಕೂಡ ಹೆಚ್ಚು ಮಾಡಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ಸಭೆ ನಡೆಸಿದ ಡಾ. ರವಿಕುಮಾರ್ ಭಾಗಿ ಬೆಂಬಲಿಗರು.

ಸದ್ಯ ಈ ವಿಚಾರವಾಗಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಚಿಂತರಾದ ಶ್ರೀಪಾದ್ ಭಟ್, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 50ಕ್ಕೂ ಹೆಚ್ಚು ಜನ ಬಸವನಗುಡಿ ನ್ಯಾಷನಲ್ ಕಾಲೇಜಿನ ಕಾರ್ಯದರ್ಶಿ ವೆಂಕಟಶಿವರೆಡ್ಡಿ ಜತೆಗೆ ಇಂದು ಮಾತುಕತೆ ನಡೆಸಿ, ಆದೇಶ ಹಿಂಪಡೆಯುವಂತೆ ತಾಕೀತು ಮಾಡಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಪ್ರಾಧ್ಯಾಪಕ ಡಾ.ರವಿಕುಮಾರ್ ಭಾಗಿ, ‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸುತ್ತಿದ್ದು, ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು. ಡಾ. ಶಿವಣ್ಣ ಇವರು ಪ್ರವರ್ಗ-1ರ ಬೆಸ್ತರ್ ಜಾತಿಗೆ ಸೇರಿದ್ದಾರೆ. ನಾವಿಬ್ಬರು ಸಂಶೋಧನಾ ಮಾರ್ಗದರ್ಶಕರಾದರೆ ಸಂಸ್ಥೆಗೆ ಹೆಮ್ಮೆ ಎಂಬುದನ್ನು ಲೆಕ್ಕಿಸದೇ, ದಲಿತರು ಸಂಶೋಧನಾ ಮಾರ್ಗದರ್ಶಕರಾಗಬಾರದು ಎಂಬ ಜಾತಿವಾದಿ ಮನಸ್ಥಿತಿಯಿಂದ ಇಬ್ಬರೂ ಸಂಶೋಧನಾ ಮಾರ್ಗದರ್ಶಕರಾಗುವುದನ್ನು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ವ್ಯವಸ್ಥಿತವಾಗಿ ತಡೆಹಿಡಿದಿದ್ದಾರೆ. ಆ ಮೂಲಕ ಇಬ್ಬರಿಗೂ ಅನ್ಯಾಯ ಎಸಗುತ್ತಿದ್ದಾರೆ. ಕಾಲೇಜಿನಲ್ಲಿ ನಡೆಯುತ್ತಿರುವ ಜಾತಿ ಕಿರುಕುಳದ ಬಗ್ಗೆ ಇದು ಒಂದು ಉದಾಹರಣೆ ಅಷ್ಟೆ. ಈ ಸಂಸ್ಥೆಯ ಆಧೀನದಲ್ಲಿರುವ ಎಲ್ಲ ಶಾಲಾ ಕಾಲೇಜುಗಳಲ್ಲಿ ದಲಿತ, ಹಿಂದುಳಿದ ನೌಕರರು ಕಿರುಕುಳದ ಜತೆಗೆ ಈ ತಾರತಮ್ಯಗಳನ್ನು ಎದುರಿಸುತ್ತ ಅಸಹಾಯಕ ಸ್ಥಿತಿಯ ಭಯದಲ್ಲಿ ಕಾರ್ಯನಿರ್ವಹಿಸುತ್ತ ಜೀವಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಾಧ್ಯಾಪಕ ರವಿಕುಮಾರ ಭಾಗಿ ಅವರ ಹಿಂಬಡ್ತಿ ಬಗ್ಗೆ ಮಾತನಾಡಿದ ಕಾರ್ಯದರ್ಶಿ ವೆಂಕಟಶಿವ ರೆಡ್ಡಿ, ‘ಪದವಿಯಿಂದ ಪಿಯು ಕಾಲೇಜಿಗೆ ಹಾಕಿರುವುದು ಹಿಂಬಡ್ತಿಯಲ್ಲ; ಇಲ್ಲಿ ಪಿಜಿ ಕೋರ್ಸ್ ಇಲ್ಲ. ಶನಿವಾರ ಅಥವಾ ಸೋಮವಾರ ಆಡಳಿತ ಮಂಡಳಿ ಜತೆಗೆ ಮಿಟೀಂಗ್ ಮಾಡಿ ರವಿಕುಮಾರ್ ಭಾಗಿ ಅವರ ಹಿಂಬಡ್ತಿ ಹಾಗೂ ಪಿಎಚ್‌ಡಿ ಸಂಶೋಧನಾ ಸೇವಾ ಧೃಢೀಕರಣ ಪತ್ರ ನೀಡುವ ಬಗ್ಗೆ ಚರ್ಚಿಸಿ ತಿರ್ಮಾನ ಕೈಗೊಳ್ಳುತ್ತೇವೆ. ವಾರ್ಷಿಕ ಕಾರ್ಯಚಟುವಟಿಕೆಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿ ಇಲ್ಲ ಎಂದರೆ ನಾನೇನು ಮಾಡಲಿ’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ‘ನಾನು ಗೌರಿ.ಕಾಂ’ ಜತೆಗೆ ಮಾತನಾಡಿದ ರವಿಕುಮಾರ್ ಭಾಗಿ, ‘ಡಿಎಸ್ಎಸ್ ಮುಖಂಡರು, ಬಂಜಗೆರೆ ಜಯಪ್ರಕಾಶ್, ಎಎಲ್ಎಫ್, ಸಿಪಿಐ (ಎಂ) ಸೇರಿದಂತೆ ಹಲವು ಪ್ರಗತಿಪರ ಮುಖಂಡರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನನ್ನ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ನಾನು ಹೇಳಿದ್ದೇನೆ. ಇದೇ ರೀತಿ ಹಲವರಿಗೆ ಕಿರುಕುಳ ನೀಡಿ ಇಲ್ಲಿಂದ ಹೊರಹೋಗುವಂತೆ ಮಾಡಿದ್ದಾರೆ. ದಲಿತರನ್ನೆ ಮಾತ್ರ ಯಾಕೆ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ದಲಿತರು ಈ ಸಂಸ್ಥೆಯಲ್ಲಿ ಇರಲೇಬಾರದಾ? ನಾನು ಸಂಸ್ಥೆಗೆ ಏನಾದರೂ ದ್ರೋಹ ಬಗೆದಿದ್ದೀನಾ? ಯಾರಾದರೂ ವಿದ್ಯಾರ್ಥಿಗಳಿಗೆ ಕಿರುಕುಳ ಏನಾದರೂ ಕೊಟ್ಟಿದ್ದೀನಾ’ ಎಂದು ಪ್ರಶ್ನಿಸಿದರು.

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯ ದಲಿತ ವಿರೋಧಿ ನಡೆ ಖಂಡಿಸಲು ಆಗಮಿಸಿದ್ದ ವಿವಿಧ ಸಂಘಟನೆಗಳ ಮುಖಂಡರು.

‘ಪದವಿ ಮತ್ತು ಸ್ನಾತಕೋತ್ತರ ಪದವಿ ಪಾಠ ಮಾಡಲು ನನ್ನನ್ನು ನೇಮಕ ಮಾಡಿಕೊಂಡು, ಈಗ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ ಹಿಂಬಡ್ತಿ ನೀಡಿದ್ದಾರೆ. ನಾನು ಪಿಜಿ ಕೋ-ಆರ್ಡಿನೇಟರ್ ಆಗಿ ಕೆಲಸ ಮಾಡಿದ್ದೇನೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಬೆಂಗಳೂರು ಯೂನಿವರ್ಸಿಟಿ ನನ್ನನ್ನು ಆಯ್ಕೆ ಮಾಡಿದೆ. ಅದಕ್ಕೆ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರು ವಿವಿಯಿಂದ ಅದಕ್ಕೆ ಸಂಬಂಧಿಸಿದಂತೆ ಪತ್ರ ಕಳುಹಿಸಿದ್ದಾರೆ. ಈವರೆಗೂ ನನಗೆ ಅನುಮತಿ ಪತ್ರ ಕೊಟ್ಟಿಲ್ಲ ಯಾಕೆ? ಅದಕ್ಕೆ ಕಾರಣ ಏನೆಂಬುದು ತಿಳಿಯುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಅಂತಿಮವಾಗಿ, ನಾನು ಈ ಹಿಂದೆ ಯಾವ ಹುದ್ದೆಯಲ್ಲಿ ಇದ್ದೆನೋ ಅಲ್ಲೇ ಮುಂದುವರಿಸಬೇಕು. ನನಗೆ ಸಂಶೋಧನಾ ಮಾರ್ಗದರ್ಶಿಯಾಗಿ ಅನುಮತಿ ನೀಡಿ ಪತ್ರ ನೀಡಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಅವರು ನನಗೆ ಜಯನಗರ ಪದವಿ ಕಾಲೇಜಿಗೆ ತೆರಳವಂತೆ ಹೇಳುತ್ತಿದ್ದಾರೆ. ಇಷ್ಟೆಲ್ಲಾ ಅವಮಾನ ಮಾಡಿ, ಹಿಂಬಡ್ತಿ ನೀಡಿರುವುದೆ ನಾನು ಇಲ್ಲಿಂದ ತೆರಳಲಿ ಎಂಬ ಕಾರಣಕ್ಕೆ. ಆದರೆ, ನಾನು ಬೇರೆ ಕಡೆ ಹೋಗುವುದಕ್ಕೆ ತಯಾರಿಲ್ಲ; ಇತರೆ ಜಾತಿ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಆದರೆ, ದಲಿತ ಎಂಬ ಕಾರಣಕ್ಕೆ ಮಾತ್ರ ನನ್ನೊಬ್ಬನನ್ನು ವರ್ಗ ಮಾಡಿದರೆ ನಾನು ಒಪ್ಪುವುದಿಲ್ಲ’ ಎಂದು ಹೇಳಿದರು.

‘ಆಡಳಿತ ಮಂಡಳಿ ಸೋಮವಾರ ಸಭೆ ನಡೆಸಿ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ನನ್ನ ಪರವಾಗಿ ತೀರ್ಮಾನ ಬಂದಿಲ್ಲವಾದರೆ ಮಂಗಳವಾರದಿಂದ ಧರಣಿ ಕೂರುವುದಾಗಿ ಅವರಿಗೆ ಎಚ್ಚರಿಕೆ ನೀಡಿದ್ದೇವೆ’ ಎಂದರು.

‘ಕಾಲೇಜಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ವೈಜ್ಞಾನಿಕ ಶುಲ್ಕವನ್ನು ಹೊಸ ಆಡಳಿತ ಮಂಡಳಿ ರದ್ದು ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಕೂಡ ಸಾಮಾನ್ಯ ಜಾತಿಯ ವಿದ್ಯಾರ್ಥಿಗಳು ಪಾವತಿ ಮಾಡುವಷ್ಟೇ ಶುಲ್ಕ ಪಾವತಿಸಬೇಕಿದೆ; ಇದು ಅವೈಜ್ಞಾನಿಕ. ಸಿಬ್ಬಂದಿಗಳನ್ನು ಮಾತ್ರವಲ್ಲದೆ, ದಲಿತ ವಿದ್ಯಾರ್ಥಿಗಳಿಗೂ ಕಿರುಕುಳ ನೀಡುತ್ತಿದ್ದಾರೆ; ವಿದ್ಯಾರ್ಥಿಗಳು ಈ ವಿಚಾರದಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ; ಕೇಂದ್ರದ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...