Homeಮುಖಪುಟನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ...

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

- Advertisement -
- Advertisement -

ಗಾಂಧಿ ತತ್ವಗಳಿಗೆ ಹೆಸರುವಾಸಿಯಾಗಿದ್ದ, ವೈಜ್ಞಾನಿಕ ಚಿಂತನೆಯನ್ನು ತಾನು ಸಾಯುವವರೆಗೂ ಪ್ರತಿಪಾದಿಸಿದ, ಸಾವಿರಾರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿದ ಎಚ್. ನರಸಿಂಹಯ್ಯ ಸೇವೆ ಸಲ್ಲಿಸಿದ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಇದೀಗ ‘ದಲಿತ ವಿರೋಧಿ’ ನಿಲುವು ತೆಗೆದುಕೊಂಡು, ಜನರ ಕೆಂಗಣ್ಣಿಗೆ ಗುರಿಯಾಗಿದೆ.

1920ರಲ್ಲಿ ಆರಂಭವಾದ ಬೆಂಗಳೂರಿನ ನ್ಯಾಷನಲ್ ಎಜುಕೇಷನ್ ಸೊಸೈಟಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡುವ ಮೂಲಕ, ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಆದರೆ, ಕಳೆದ ಹಲವು ವರ್ಷಗಳಿಂದ ದಲಿತ ಸಮುದಾಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ವಿರೋಧಿಯಾಗಿ ಈ ಸಂಸ್ಥೆಯಲ್ಲಿ ಕಾರ್ಯಚಟುವಟಿಗಳು ನಡೆಯುತ್ತಿವೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

ಕಳೆದ 13 ವರ್ಷದಿಂದ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಭಾಷಾ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರವಿಕುಮಾರ್ ಭಾಗಿ ಅವರನ್ನು ಪದವಿ ಕಾಲೇಜಿನಿಂದ ಪಿಯು ಕಾಲೇಜಿಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೇ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನು ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಗ್ರಾಮೀಣ ಪ್ರದೇಶದಿಂದ ಸಾವಿರಾರು ಬಡ ಮಕ್ಕಳು ನ್ಯಾಷನಲ್ ಕಾಲೇಜಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಆದರೆ, ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕ ಕೂಡ ಹೆಚ್ಚು ಮಾಡಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ಸಭೆ ನಡೆಸಿದ ಡಾ. ರವಿಕುಮಾರ್ ಭಾಗಿ ಬೆಂಬಲಿಗರು.

ಸದ್ಯ ಈ ವಿಚಾರವಾಗಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಚಿಂತರಾದ ಶ್ರೀಪಾದ್ ಭಟ್, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 50ಕ್ಕೂ ಹೆಚ್ಚು ಜನ ಬಸವನಗುಡಿ ನ್ಯಾಷನಲ್ ಕಾಲೇಜಿನ ಕಾರ್ಯದರ್ಶಿ ವೆಂಕಟಶಿವರೆಡ್ಡಿ ಜತೆಗೆ ಇಂದು ಮಾತುಕತೆ ನಡೆಸಿ, ಆದೇಶ ಹಿಂಪಡೆಯುವಂತೆ ತಾಕೀತು ಮಾಡಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಪ್ರಾಧ್ಯಾಪಕ ಡಾ.ರವಿಕುಮಾರ್ ಭಾಗಿ, ‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸುತ್ತಿದ್ದು, ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು. ಡಾ. ಶಿವಣ್ಣ ಇವರು ಪ್ರವರ್ಗ-1ರ ಬೆಸ್ತರ್ ಜಾತಿಗೆ ಸೇರಿದ್ದಾರೆ. ನಾವಿಬ್ಬರು ಸಂಶೋಧನಾ ಮಾರ್ಗದರ್ಶಕರಾದರೆ ಸಂಸ್ಥೆಗೆ ಹೆಮ್ಮೆ ಎಂಬುದನ್ನು ಲೆಕ್ಕಿಸದೇ, ದಲಿತರು ಸಂಶೋಧನಾ ಮಾರ್ಗದರ್ಶಕರಾಗಬಾರದು ಎಂಬ ಜಾತಿವಾದಿ ಮನಸ್ಥಿತಿಯಿಂದ ಇಬ್ಬರೂ ಸಂಶೋಧನಾ ಮಾರ್ಗದರ್ಶಕರಾಗುವುದನ್ನು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ವ್ಯವಸ್ಥಿತವಾಗಿ ತಡೆಹಿಡಿದಿದ್ದಾರೆ. ಆ ಮೂಲಕ ಇಬ್ಬರಿಗೂ ಅನ್ಯಾಯ ಎಸಗುತ್ತಿದ್ದಾರೆ. ಕಾಲೇಜಿನಲ್ಲಿ ನಡೆಯುತ್ತಿರುವ ಜಾತಿ ಕಿರುಕುಳದ ಬಗ್ಗೆ ಇದು ಒಂದು ಉದಾಹರಣೆ ಅಷ್ಟೆ. ಈ ಸಂಸ್ಥೆಯ ಆಧೀನದಲ್ಲಿರುವ ಎಲ್ಲ ಶಾಲಾ ಕಾಲೇಜುಗಳಲ್ಲಿ ದಲಿತ, ಹಿಂದುಳಿದ ನೌಕರರು ಕಿರುಕುಳದ ಜತೆಗೆ ಈ ತಾರತಮ್ಯಗಳನ್ನು ಎದುರಿಸುತ್ತ ಅಸಹಾಯಕ ಸ್ಥಿತಿಯ ಭಯದಲ್ಲಿ ಕಾರ್ಯನಿರ್ವಹಿಸುತ್ತ ಜೀವಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಾಧ್ಯಾಪಕ ರವಿಕುಮಾರ ಭಾಗಿ ಅವರ ಹಿಂಬಡ್ತಿ ಬಗ್ಗೆ ಮಾತನಾಡಿದ ಕಾರ್ಯದರ್ಶಿ ವೆಂಕಟಶಿವ ರೆಡ್ಡಿ, ‘ಪದವಿಯಿಂದ ಪಿಯು ಕಾಲೇಜಿಗೆ ಹಾಕಿರುವುದು ಹಿಂಬಡ್ತಿಯಲ್ಲ; ಇಲ್ಲಿ ಪಿಜಿ ಕೋರ್ಸ್ ಇಲ್ಲ. ಶನಿವಾರ ಅಥವಾ ಸೋಮವಾರ ಆಡಳಿತ ಮಂಡಳಿ ಜತೆಗೆ ಮಿಟೀಂಗ್ ಮಾಡಿ ರವಿಕುಮಾರ್ ಭಾಗಿ ಅವರ ಹಿಂಬಡ್ತಿ ಹಾಗೂ ಪಿಎಚ್‌ಡಿ ಸಂಶೋಧನಾ ಸೇವಾ ಧೃಢೀಕರಣ ಪತ್ರ ನೀಡುವ ಬಗ್ಗೆ ಚರ್ಚಿಸಿ ತಿರ್ಮಾನ ಕೈಗೊಳ್ಳುತ್ತೇವೆ. ವಾರ್ಷಿಕ ಕಾರ್ಯಚಟುವಟಿಕೆಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿ ಇಲ್ಲ ಎಂದರೆ ನಾನೇನು ಮಾಡಲಿ’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ‘ನಾನು ಗೌರಿ.ಕಾಂ’ ಜತೆಗೆ ಮಾತನಾಡಿದ ರವಿಕುಮಾರ್ ಭಾಗಿ, ‘ಡಿಎಸ್ಎಸ್ ಮುಖಂಡರು, ಬಂಜಗೆರೆ ಜಯಪ್ರಕಾಶ್, ಎಎಲ್ಎಫ್, ಸಿಪಿಐ (ಎಂ) ಸೇರಿದಂತೆ ಹಲವು ಪ್ರಗತಿಪರ ಮುಖಂಡರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನನ್ನ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ನಾನು ಹೇಳಿದ್ದೇನೆ. ಇದೇ ರೀತಿ ಹಲವರಿಗೆ ಕಿರುಕುಳ ನೀಡಿ ಇಲ್ಲಿಂದ ಹೊರಹೋಗುವಂತೆ ಮಾಡಿದ್ದಾರೆ. ದಲಿತರನ್ನೆ ಮಾತ್ರ ಯಾಕೆ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ದಲಿತರು ಈ ಸಂಸ್ಥೆಯಲ್ಲಿ ಇರಲೇಬಾರದಾ? ನಾನು ಸಂಸ್ಥೆಗೆ ಏನಾದರೂ ದ್ರೋಹ ಬಗೆದಿದ್ದೀನಾ? ಯಾರಾದರೂ ವಿದ್ಯಾರ್ಥಿಗಳಿಗೆ ಕಿರುಕುಳ ಏನಾದರೂ ಕೊಟ್ಟಿದ್ದೀನಾ’ ಎಂದು ಪ್ರಶ್ನಿಸಿದರು.

ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯ ದಲಿತ ವಿರೋಧಿ ನಡೆ ಖಂಡಿಸಲು ಆಗಮಿಸಿದ್ದ ವಿವಿಧ ಸಂಘಟನೆಗಳ ಮುಖಂಡರು.

‘ಪದವಿ ಮತ್ತು ಸ್ನಾತಕೋತ್ತರ ಪದವಿ ಪಾಠ ಮಾಡಲು ನನ್ನನ್ನು ನೇಮಕ ಮಾಡಿಕೊಂಡು, ಈಗ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ ಹಿಂಬಡ್ತಿ ನೀಡಿದ್ದಾರೆ. ನಾನು ಪಿಜಿ ಕೋ-ಆರ್ಡಿನೇಟರ್ ಆಗಿ ಕೆಲಸ ಮಾಡಿದ್ದೇನೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಬೆಂಗಳೂರು ಯೂನಿವರ್ಸಿಟಿ ನನ್ನನ್ನು ಆಯ್ಕೆ ಮಾಡಿದೆ. ಅದಕ್ಕೆ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರು ವಿವಿಯಿಂದ ಅದಕ್ಕೆ ಸಂಬಂಧಿಸಿದಂತೆ ಪತ್ರ ಕಳುಹಿಸಿದ್ದಾರೆ. ಈವರೆಗೂ ನನಗೆ ಅನುಮತಿ ಪತ್ರ ಕೊಟ್ಟಿಲ್ಲ ಯಾಕೆ? ಅದಕ್ಕೆ ಕಾರಣ ಏನೆಂಬುದು ತಿಳಿಯುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಅಂತಿಮವಾಗಿ, ನಾನು ಈ ಹಿಂದೆ ಯಾವ ಹುದ್ದೆಯಲ್ಲಿ ಇದ್ದೆನೋ ಅಲ್ಲೇ ಮುಂದುವರಿಸಬೇಕು. ನನಗೆ ಸಂಶೋಧನಾ ಮಾರ್ಗದರ್ಶಿಯಾಗಿ ಅನುಮತಿ ನೀಡಿ ಪತ್ರ ನೀಡಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಅವರು ನನಗೆ ಜಯನಗರ ಪದವಿ ಕಾಲೇಜಿಗೆ ತೆರಳವಂತೆ ಹೇಳುತ್ತಿದ್ದಾರೆ. ಇಷ್ಟೆಲ್ಲಾ ಅವಮಾನ ಮಾಡಿ, ಹಿಂಬಡ್ತಿ ನೀಡಿರುವುದೆ ನಾನು ಇಲ್ಲಿಂದ ತೆರಳಲಿ ಎಂಬ ಕಾರಣಕ್ಕೆ. ಆದರೆ, ನಾನು ಬೇರೆ ಕಡೆ ಹೋಗುವುದಕ್ಕೆ ತಯಾರಿಲ್ಲ; ಇತರೆ ಜಾತಿ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಆದರೆ, ದಲಿತ ಎಂಬ ಕಾರಣಕ್ಕೆ ಮಾತ್ರ ನನ್ನೊಬ್ಬನನ್ನು ವರ್ಗ ಮಾಡಿದರೆ ನಾನು ಒಪ್ಪುವುದಿಲ್ಲ’ ಎಂದು ಹೇಳಿದರು.

‘ಆಡಳಿತ ಮಂಡಳಿ ಸೋಮವಾರ ಸಭೆ ನಡೆಸಿ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ನನ್ನ ಪರವಾಗಿ ತೀರ್ಮಾನ ಬಂದಿಲ್ಲವಾದರೆ ಮಂಗಳವಾರದಿಂದ ಧರಣಿ ಕೂರುವುದಾಗಿ ಅವರಿಗೆ ಎಚ್ಚರಿಕೆ ನೀಡಿದ್ದೇವೆ’ ಎಂದರು.

‘ಕಾಲೇಜಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ವೈಜ್ಞಾನಿಕ ಶುಲ್ಕವನ್ನು ಹೊಸ ಆಡಳಿತ ಮಂಡಳಿ ರದ್ದು ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಕೂಡ ಸಾಮಾನ್ಯ ಜಾತಿಯ ವಿದ್ಯಾರ್ಥಿಗಳು ಪಾವತಿ ಮಾಡುವಷ್ಟೇ ಶುಲ್ಕ ಪಾವತಿಸಬೇಕಿದೆ; ಇದು ಅವೈಜ್ಞಾನಿಕ. ಸಿಬ್ಬಂದಿಗಳನ್ನು ಮಾತ್ರವಲ್ಲದೆ, ದಲಿತ ವಿದ್ಯಾರ್ಥಿಗಳಿಗೂ ಕಿರುಕುಳ ನೀಡುತ್ತಿದ್ದಾರೆ; ವಿದ್ಯಾರ್ಥಿಗಳು ಈ ವಿಚಾರದಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ; ಕೇಂದ್ರದ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...