Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...