Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...