Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...