Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...