Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...